ರಾಯಚೂರು | ಪ್ರಧಾನಿ ಮುಂದೆ ಕರ್ನಾಟಕ ಸಂಸದರ ಒಗ್ಗಟ್ಟು ಪ್ರದರ್ಶನ: ಏಮ್ಸ್‌ ಸ್ಥಾಪನೆಗೆ ಒತ್ತಾಯ

Date:

ರಾಜ್ಯದಲ್ಲಿ ಆರೋಗ್ಯ, ಉದ್ಯೋಗ ಮತ್ತು ಶಿಕ್ಷಣದ ಅಭಿವೃದ್ಧಿಗಾಗಿ ರಾಜ್ಯದ 28 ಸಂಸದರು ಪ್ರಧಾನಿ ಮೋದಿಯವರ ಎದುರು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ರಾಯಚೂರಿನಲ್ಲಿ ʼಏಮ್ಸ್ʼ ಸ್ಥಾಪನೆ ಮಾಡಲು ಪಕ್ಷಾತೀತವಾಗಿ ಎಲ್ಲಾ ಸಂಸದರು ಒಕ್ಕೊರಲಿನ ಒತ್ತಾಯ ಮಾಡಬೇಕಿದೆ ಎಂದು ಸಂಸದ ಜಿ ಕುಮಾರ ನಾಯಕ ಹೇಳಿದರು.

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಸಮೀಪ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಹೋರಾಟ ಒಂದು ಸಾವಿರ ದಿನ ಪೂರೈಸಿದ ಹಿನ್ನೆಲೆ ನಡೆಸಿದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, “ಜವಾಹರಲಾಲ್ ನೆಹರು ಏಮ್ಸ್ ಸಂಸ್ಥೆಯನ್ನು ಹುಟ್ಟು ಹಾಕಿದರು. ನಂತರದ ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಪ್ರತಿಯೊಂದು ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಮಾಡಿವೆ. ಕರ್ನಾಟಕ ಸುತ್ತಲೂ ಇರುವ ಎಲ್ಲಾ ರಾಜ್ಯಗಳಲ್ಲಿ ಏಮ್ಸ್ ಸ್ಥಾಪನೆಯಾಗಿವೆ. ಆದರೆ ಕರ್ನಾಟಕಕ್ಕೆ ಮಾತ್ರ ಏಮ್ಸ್ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ದೇಶಕ್ಕೆ ಅತಿ ಹೆಚ್ಚಿನದಾಗಿ ಚಿನ್ನ ಉತ್ಪಾದನೆ, ವಿದ್ಯುತ್ ‌ಒದಗಿಸುತ್ತಿರುವ ಜಿಲ್ಲೆ ರಾಯಚೂರು. ಆದರೆ ಅಭಿವೃದ್ಧಿ, ಆರೋಗ್ಯದ ವಿಷಯಕ್ಕೆ ಜಿಲ್ಲೆಯನ್ನು ಪರಿಗಣಿಸುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.

WhatsApp Image 2025 02 05 at 5.49.16 PM

“ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯನ್ನು ಮಹತ್ವಾಕಾಂಕ್ಷಿ ಜಿಲ್ಲೆ ಎಂದು ಘೋಷಣೆ ಮಾಡಿದರೆ ಸಾಲದು ಅದನ್ನು ಕಾರ್ಯರೂಪಕ್ಕೆ ತರಬೇಕು. ರಾಜ್ಯದಲ್ಲಿ 28 ಸಂಸದರಿದ್ದು, 19 ಮಂದಿ ಬಿಜೆಪಿ ಸಂಸದರ ಪೈಕಿ 5 ಜನ ಕೇಂದ್ರ ಮಂತ್ರಿಗಳಿದ್ದಾರೆ. ಆದರೆ ಆ ಮಂತ್ರಿಗಳು ರಾಜ್ಯದ ಮಂತ್ರಿಗಳಾಗಿ ರಾಜ್ಯಕ್ಕೆ ಅನುದಾನ ಪ್ಯಾಕೇಜ್ ತರುವ ಕೆಲಸ ಮಾಡುತ್ತಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ರಾಯಚೂರು | ಅಯೋಧ್ಯೆಯ ದಲಿತ ಯುವತಿ ಹತ್ಯೆ; ಕಠಿಣ ಕ್ರಮಕ್ಕೆ ಮಾದಿಗ ಹೋರಾಟ ಸಮಿತಿ ಒತ್ತಾಯ

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜು, ಏಮ್ಸ್ ಹೋರಾಟ ಸಮಿತಿ ಸಂಚಾಲಕ ಬಸವರಾಜ ಕಳಸ, ಪಾಲಿಕೆ ಉಪಾಧ್ಯಕ್ಷ ಸಾಜೀದ್ ಸಮೀರ್, ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಪಾಟೀಲ್, ಕೆಪಿಸಿಸಿ ಕಾರ್ಯದರ್ಶಿ ಕೆ.ಶಾಂತಪ್ಪ, ಕಾಂಗ್ರೆಸ್ ಮುಖಂಡ ನರಸಿಂಹಲು ಮಾಡಗಿರಿ, ಡಾ.ರಾಮಪ್ಪ, ರಾಕೇಶ ರಾಜಲಬಂಡಾ, ಪೂಜಾರಿ, ಬಾಬುರಾವ್ ಶೇಗುಣಸಿ, ಎನ್ ಮಹಾವೀರ, ಅಶೋಕ ಕುಮಾರ ಜೈನ್, ಆರ್ ಕೆ ಹುಡಗಿ, ಲಕ್ಷ್ಮಣ ಗಸ್ತಿ, ಚಂದ್ರಶೇಖರ, ವಿನಯ ಮಾಳಗೆ, ಡಾ.ಬಸವರಾಜ ಕುಮನೂರು, ವೈಜನಾಥ ಪಾಟೀಲ್ ತುಮಕೂರು, ಚಂದ್ರಶೇಖರ ಪಾಟೀಲ್, ರೋಹನ್ ಕುಮಾರ, ಡಾ. ರಜಾಕ ಉಸ್ತಾದ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ರೈತ, ಕನ್ನಡ ಪರ, ದಲಿತ ಪರ ಶಿಕ್ಷಣ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

WhatsApp Image 2025 02 05 at 5.49.21 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...