ರಾಯಚೂರು | ಬೈಪಾಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಮನವಿ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಬೆಂಗಳೂರು ಬೈಪಾಸ್ ರಸ್ತೆಯ ಕಾಮಗಾರಿ ತುಂಬಾ ನಿಧಾನಗತಿಯಲ್ಲಿ ಹಾಗೂ ಅಪೂರ್ಣವಾಗಿ ಅರ್ಧಕ್ಕೆ ನಿಂತಿದ್ದು, ಆದಷ್ಟು ಬೇಗ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಓಡಾಟ ಮಾಡುತ್ತಿದ್ದಾರೆ. ತ್ತೀಚೆಗೆ ಮಾನ್ವಿ ತಾಲೂಕಿನಲ್ಲಿ ನಡೆದ ಭೀಕರ ಅಪಘಾತ ಘಟನೆ ರಸ್ತೆ ಗುಂಡಿಗಳಿಂದ ಸಂಭವಿಸಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಆ ರೀತಿ ಘಟನೆಯಾಗದಂತೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಆ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೋಲಿಡಾರಿಟಿ ಯೂತ್‌ ಮೂಮೆಂಟ್ ಕಾರ್ಯಕರ್ತರು ಒತ್ತಾಯಿಸಿದರು.

ತಾಲೂಕಿನ ಹಲವು ಕಡೆಗಳಲ್ಲಿ ಹದಗೆಟ್ಟ ರಸ್ತೆಗಳಿವೆ. ಅವುಗಳನ್ನು ಕೂಡಲೇ ದುರಸ್ತಿ ಮಾಡಬೇಕು. ಮುಖ್ಯ ರಸ್ತೆಗೆ ಇರುವ ಶಾಲೆ, ಆಸ್ಪತ್ರೆ, ಹತ್ತಿರ ಎಚ್ಚರಿಕೆ ಬೋರ್ಡ್ ಅಳವಡಿಸಿ, ರಸ್ತೆ ಕಾಮಗಾರಿ ಹೆಸರಿನಲ್ಲಿ ಬೋಗಸ್ ಬಿಲ್ ಬರೆದು ಸರ್ಕಾರದ ಹಣ ಲೂಟಿ ಮಾಡಿದ್ದಾರೆ. ಇದರ ಬಗ್ಗೆ ಸಿ.ಒ.ಡಿ ತನಿಖೆಯಾಗಬೇಕು. ಲೋಕೋಪಯೋಗಿ ಇಲಾಖೆಯಲ್ಲಿ ಅನೇಕರು ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂಥವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ರಾಯಚೂರು | ಸಂಪೂರ್ಣ ಹದಗೆಟ್ಟ ರಸ್ತೆ: ಶೀಘ್ರವೇ ದುರಸ್ತಿ ಪಡಿಸುವಂತೆ ಗ್ರಾಮಸ್ಥರು, ವಿದ್ಯಾರ್ಥಿಗಳ ಆಗ್ರಹ

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಅಧ್ಯಕ್ಷ ಅಮ್ಮದ್ ಅಲಿ, ಮಹಾಂತೇಶ್ ಸ್ಪಂದನ ಶಾಲೆ, ದಾನಯ್ಯ ಜ್ಞಾನ ಗಂಗಾ ಶಾಲೆ, ಸೇವಿಯರ್ ಜೇಮ್ಸ್, ಅಬ್ದುಲ್ ಸಲಾಂ, ಅಬ್ದುಲ್ ನಾಯುಮ್, ಮೊಹಮ್ಮದ್, ಸೈಯದ್ ಮುನೀರ್, ಬಾಬಾ ಕೆ ಬಿ ಎನ್, ಅಹಮದ್ ಮೆಡಿಕಲ್, ಜಾವೇದ್, ಖಾಜಾ ಗೀರ್ಣಿ, ಪಾಷಾ ಗಿರ್ಣಿ, ನವಾಬ್, ಸಲೀಂ ಯೂನುಸ್, ಮೆಹಬೂಬ್, ರಾಜು, ಸದ್ದಾಂ, ವಾಹೀದ್, ಖಲೀಲ್, ಖಾಲಿದ್, ಆನಂದ, ಶಂಕರಪ್ಪ ಸೇರಿದಂತೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...