ರಾಯಚೂರು | ಕ್ರೀಡೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ: ಡಿಸಿ ನಿತೀಶ್

Date:

ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್‌ ಅಭಿಪ್ರಾಯಪಟ್ಟರು.

ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ನೌಕರರ ವಾರ್ಷಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾನಸಿಕ ನೆಮ್ಮದಿ ನೀಡುವಲ್ಲಿ ಕ್ರೀಡೆಗಳು ತುಂಬಾ ಸಹಕಾರಿಯಾಗಲಿದ್ದು, ಕ್ರೀಡಾ ಚಟುವಟಿಕೆ ಮುಗಿದ ಮೇಲೆ ಇನ್ನೂ ಹೆಚ್ಚಿನ ಉತ್ಸಾಹ, ಹುಮ್ಮಸ್ಸಿನಿಂದ ಕೆಲಸ ಮಾಡಲು ಸಹಕಾರಿಯಾಗಲಿವೆ” ಎಂದರು.

“ಪಿಡಿಒಗಳಿಗಾಗಿ ಹಮ್ಮಿಕೊಂಡಿರುವ ಕ್ರೀಡಾಕೂಟ ಸಂತಸವನ್ನು ತಂದಿದ್ದು, ಗ್ರಾಮಗಳಿಗೆ ಅಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಜಿಲ್ಲಾಧಿಕಾರಿಗಳಾಗಿರುತ್ತಾರೆ. ನಿತ್ಯ ಗ್ರಾಮಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಮತ್ತು ಗ್ರಾಮಗಳಲ್ಲಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪಿಡಿಒಗಳ ಜವಾಬ್ದಾರಿ ಹೆಚ್ಚಾಗಿರುತ್ತದೆ. ಕ್ರೀಡೆಗಳಿಂದ ಅವರ ಮಾನಸಿಕ ಒತ್ತಡವನ್ನು ದೂರ ಮಾಡಿಕೊಳ್ಳಬಹುದಾಗಿದೆ” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಮಾತನಾಡಿ, “ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಾನಸಿಕ ನೆಮ್ಮದಿ ಮತ್ತು ಚೈತನ್ಯವನ್ನು ತುಂಬುವ ನಿಟ್ಟಿನಲ್ಲಿ ಕ್ರೀಡಾಕೂಡಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೆಲಸ ಹೆಚ್ಚಾಗಿರುತ್ತದೆ. ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಒತ್ತಡದಿಂದ ದೂರವಿರಬಹುದಾದ ಮಾರ್ಗಗಳನ್ನು ಕಂಡುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಟಿ ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ್, ರಾಯಚೂರು ತಾಲೂಕು ಪಂಚಾಯತ್ ಇಒ ಚಂದ್ರಶೇಖರ ಪವಾರ್, ಕೃಷಿ ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಾಜಣ್ಣ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...