ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Date:

ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರದ ಎನ್‌ಡಿಎ ಮತ್ತು ರಾಜ್ಯ ಕಾಂಗ್ರೆಸ್ ಸರಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ನೋಡಿದರೆ ಜನರನ್ನು ಒಕ್ಕಲೆಬ್ಬಿಸುವ ಸರ್ಕಾರಗಳ ಹುನ್ನಾರವಾಗಿದೆ ಎಂದು ಕಿಡಿಕಾರಿದರು.

ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, “ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆಯಾಗಿದ್ದು, ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರ ಇಂಧನದ ಬೆಲೆ ಏರಿಕೆ ಮೂಲಕ ಮತ್ತೊಮ್ಮೆ ಬರೆ ಎಳೆದಿದೆ. ಇಷ್ಟು ಪ್ರಮಾಣದ ಬೆಲೆ ಏರಿಕೆಯಾಗಿರುವುದು ಇದುವರೆಗಿನ ಇತಿಹಾಸದಲ್ಲಿಯೇ ಇಲ್ಲ.ಎರಡು ಸರ್ಕಾರಗಳು ಸೇರಿ ಮನಬಂದಂತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸಬೇಕಿದೆ” ಎಂದು ಆಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಕುರಿಗಾಯಿ ಸಾವು

“ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಾಲು, ನೀರು, ವಿದ್ಯುತ್, ಡೀಸೆಲ್ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ಸೇವೆಗಳ ಬೆಲೆ ಏರಿಕೆ ಮಾಡಿದೆ. ಜೊತೆಗೆ, ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ ಮತ್ತು ಆಸ್ತಿ ತೆರಿಗೆಯ ಮೇಲಿನ ತೆರಿಗೆಗಳನ್ನೂ ಸಹ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಆರ್ಥಿಕ ನೀತಿಗಳು ಜಾರಿ ಮಾಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು” ಎಂದರು.

“ರಾಜ್ಯದಲ್ಲಿ ನಿರಂತರ ವಿಪರೀತ ಬೆಲೆ ಏರಿಕೆ, ಗಗನಕ್ಕೇರುತ್ತಿರುವ ನಿರುದ್ಯೋಗ ಬೆಲೆ ಏರಿಕೆಗಳು ಜನರ ಜೀವನೋಪಾಯವನ್ನು ಮತ್ತಷ್ಟು ಹಾಳು ಮಾಡುತ್ತವೆ. ಸರ್ಕಾರದ ಈ ನೀತಿ ಬಡ, ಮಧ್ಯಮ ವರ್ಗದವರ ಬದುಕುವ ಹಕ್ಕನ್ನು ಬಲವಂತವಾಗಿ ಕಿತ್ತುಕೊಳ್ಳುವುದಾಗಿದೆ. ಅಲ್ಲದೇ ಬಡವರ ಮೇಲೆ ಹೆಚ್ಚು ತೆರಿಗೆ ಹೇರಿ, ಶ್ರೀಮಂತರ ತೆರಿಗೆ ಮತ್ತು ಸಾಲ ಮನ್ನಾ ಮಾಡುವ ಹುನ್ನಾರದ ಭಾಗವಾಗಿದೆ. ಈ ಕೂಡಲೇ ಜನದ್ರೋಹಿ ನೀತಿಗಳನ್ನು ಕೈಬೀಡಬೇಕು” ಎಂದು ಆಗ್ರಹಿಸಿದರು.

ಸರಕಾರಿ ಒಡೆತನದ ಉಹಿಸಿ, ಬಿಪಿಸಿಎಲ್, ಎಚ್ ಪಿಸಿಎಲ್ ಕಂಪನಿಗಳ ಷೇರುಗಳು ಮಾರುಕಟ್ಟೆಯಲ್ಲಿದ್ದು,
ಖಾಸಗಿ ಕಂಪನಿಗಳು ಇಂಧನ ಮಾರಾಟ ಉದ್ಯಮದಲ್ಲಿರುವುದರಿಂದ ಕಚ್ಚಾತೈಲ ಬೆಲೆ ಕುಸಿದಾಗ ಅವೈಜ್ಞಾನಿಕ ಬೆಲೆ ಏರಿಕೆಯಿಂದ ದೇಶದ ಜನರ ಹಣವನ್ನು ಲೂಟಿ ಹೊಡೆಯುತ್ತವೆ. ಈ ನಡುವೆ ಕಚ್ಚಾ ತೈಲ ಬೆಲೆ ಕುಸಿದಾಗಲೂ ಜನಸಾಮಾನ್ಯರಿಗೆ ಯಾವುದೇ ಲಾಭ ಇಲ್ಲ, ಹೆಚ್ಚಾದಾಗ ಮಾತ್ರ ಅವರ ಮೇಲೆ ಹೊರೆ ಹಾಕುತ್ತ ಬರಲಾಗುತ್ತಿದೆ. ಕೊರೊನಾದಂತಹ ಬಿಗುವಿನ ವಾತಾವರಣದ ದುರ್ಲಾಭ ಪಡೆದು ಮನಬಂದಂತೆ ಇಂಧನ ಬೆಲೆ ಏರಿಕೆ ಮಾಡಿದ್ದಲ್ಲದೇ, ಕೇಂದ್ರದ ಎನ್ ಡಿ ಎ ಮತ್ತು ರಾಜ್ಯ ಸರಕಾರ ಜನವಿರೋಧಿ ನೀತಿಗಳನ್ನು ಜಾರಿಗೆಗೊಳಿಸಿದೆ. ಇದು ಖಂಡನಾರ್ಹ. ಹಾಗಾಗಿ ರೈತರು, ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ಮಾರಕವಾಗಿರುವ ನೀತಿಗಳನ್ನು ಕೈಬಿಡಬೇಕು ಹಾಗೂ ಇಂಧನ ಬೆಲೆ ಏರಿಕೆಯನ್ನು ಸರಕಾರ ಇಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಜೀಜ್ ಜಾಗೀರದಾರ, ರವಿಚಂದ್ರನ, ಆರ್.ಎಚ್ ಕಲಮಂಗಿ, ಬಸವರಾಜ ಎಕ್ಕಿ, ಶ್ರೀ ನಿವಾಸ ಬುಕ್ಕನ್ನಟ್ಟಿ, ಅನೀಫ್ ಅಬಕಾರಿ, ಜಿಲಾನಿ, ಮೊಹಮ್ಮದ್ ಶಾಲಂ, ಪ್ರಕಾಶ್,ಬಸವರಾಜ ದೇವದುರ್ಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...