ರಾಯಚೂರು | ರಾಜ್ಯ ಸರ್ಕಾರ ʼಮೈ ಬ್ರದರ್ʼ ಪಾಲಿಸಿ ಮೂಲಕ ದೇಶ‌ ವಿರೋಧಿಗಳ ರಕ್ಷಣೆಗೆ ನಿಂತಿದೆ: ರವಿಕುಮಾರ್

Date:

ಸಂವಿಧಾನದ ಆಶಯ ರಕ್ಷಿಸುವುದಾಗಿ ಹೇಳುವ ರಾಜ್ಯ ಸರ್ಕಾರ ʼಮೈ ಬ್ರದರ್ʼ ಪಾಲಿಸಿಯಿಂದ ದೇಶ‌ ವಿರೋಧಿಗಳ ರಕ್ಷಣೆಗೆ ನಿಂತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಆರೋಪಿಸಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಆಕಾಂಕ್ಷಿಯ ಬೆಂಬಲಿಗರು ಪಾಕಿಸ್ತಾನಕ್ಕೆ ಜೈ ಎನ್ನುತ್ತಾರೆ. 34 ಜನರಲ್ಲಿ ಮೂವರನ್ನು ಮಾತ್ರ ಬಂಧಿಸಿದೆ. ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿಯೂ ಕೂಡ ಡಿ.ಕೆ ಶಿವುಕುಮಾರ್‌ ಅವರು ಬ್ಲಾಸ್ಟ್ ಮಾಡಿದವರನ್ನು ಬ್ರದರ್ಸ್‌ ಎಂದು ಹೇಳಿಕೊಂಡಿದ್ದರು. ಈಗ ಸೂಪರ್ ಸಿಎಂ ಆಗಿ ವರ್ತಿಸುತ್ತಿರುವ ಪ್ರಿಯಾಂಕ ಖರ್ಗೆಯವರು ಪಾಕಿಸ್ತಾನದ ಪರ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಆದರೆ, ಎಸ್‌ಎಫ್‌ಎಲ್ ವರದಿಯಲ್ಲಿ ಸತ್ಯ ಬಹಿರಂಗವಾಗಿದೆ. ಆದರೂ ಸರ್ಕಾರ ಒಪ್ಪುತ್ತಿಲ್ಲ. ಸರ್ಕಾರ ವರದಿ ಪಡೆಯಲು ಇನ್ನೆಷ್ಟು ದಿನ ಬೇಕು” ಎಂದು ಪ್ರಶ್ನಿಸಿದರು.

“ಬೆಂಗಳೂರಿನ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿಯೂ ಸರ್ಕಾರ ನಡೆಯಿಂದ ವಿದ್ರೋಹಿ ಚಟುವಟಿಕೆಗಳು ಹೆಚ್ಚಳವಾಗಲು ಕಾರಣವಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೇ ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳ ಮೇಲೆ ಹಾಕಲಾಗಿದ್ದ ಕೇಸ್‌ಗಳನ್ನು ಹಿಂಪಡೆಯಲಾಗಿತ್ತು. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಯಲ್ಲಿಯೂ ಶಾಸಕರ ಮೇಲೆ ದಾಳಿಯಾದರೂ ಆರೋಪಿಗಳನ್ನು ರಕ್ಷಿಸಲಾಯಿತು. ಸಮಾಜ ದ್ರೋಹಿಗಳನ್ನು ರಕ್ಷಣೆ ಮಾಡಲು ಸರ್ಕಾರ ನಿಂತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ ಧರ್ಮ ವಿರೋಧಿಯಾಗಿರುವ ಸರ್ಕಾರ ಬಹುಸಂಖ್ಯಾತರ ಜನರನ್ನು ಕಡೆಗಣಿಸಿ ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಅನುದಾನ ನೀಡುವುದಾಗಿ ಹೇಳುತ್ತಿದೆ. ಅನುದಾನ ನೀಡಲು ವಿರೋಧವಿಲ್ಲ. ಆದರೆ, ಬಹುಸಂಖ್ಯಾತರಿಗೂ ನ್ಯಾಯ ಕೊಡಬೇಕಿತ್ತು. ತುಷ್ಠೀಕರಣಕ್ಕಾಗಿ ಅನುದಾನ ಹಂಚಿಕೆ ಮಾಡಲಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ದಲಿತ ಸಿಎಂ ಚರ್ಚೆ ಅಪ್ರಸ್ತುತ: ಗೃಹ ಸಚಿವ ಪರಮೇಶ್ವರ್

ಕರ್ನಾಟಕ ನಂಬರ್ ಒನ್ ಸುಳ್ಳಗಾರರಾಗಿರುವ ಸಿದ್ದರಾಮಯ್ಯನವರು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದ್ದರೂ ರಾಜ್ಯ ಸರ್ಕಾರ ಹೇಳುತ್ತಿಲ್ಲ. ರಾಜ್ಯಗಳಿಗೆ ತಾರತಮ್ಯವಾದರೆ ಸುಪ್ರಿಂಕೋರ್ಟಿನಲ್ಲಿ ಪ್ರಶ್ನಿಸಲಿ” ಎಂದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ ಪಾಪಾರೆಡ್ಡಿ, ನಗರ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಜಿ ಶಂಕರರೆಡ್ಡಿ, ರವೀಂದ್ರ ಜಲ್ದಾರ, ಗಿರೀಶ್‌ ಕನಕವೀಡು, ಶಿವಬಸ್ಸಪ್ಪ ಮಾಲಿಪಾಟೀಲ್ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...