ರಾಯಚೂರು | ಮೇ 26ರಂದು ರಾಜ್ಯಮಟ್ಟದ ಅಭಿನಂದನಾ ಸಮಾವೇಶ

Date:

ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಸಲು ‘ಎದ್ದೇಳು ಕರ್ನಾಟಕ’ದ ನೇತೃತ್ವದಲ್ಲಿ ಶ್ರಮಿಸಿದ ಸ್ವಯಂಸೇವಕನ್ನು ಗೌರವಿಸಲು ಮೇ 26ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅಭಿನಂದನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ʼಎದ್ದೇಳು ಕರ್ನಾಟಕʼ ಅಭಿಯಾನದ ಸಹ ಸಂಚಾಲಕ ಮಾರೆಪ್ಪ ಹರವಿ ತಿಳಿಸಿದರು.

ರಾಯಚೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಮಾಡಿದ ಅವರು, “ಹಿಂದಿನ ಬಿಜೆಪಿ ಸರ್ಕಾರ ಹಿಂದೆಂದೂ ಕಂಡರಿಯದ ಭ್ರಷ್ಟಾಚಾರ, ಬೆಲೆ ಏರಿಕೆ ಹಾಗೂ ದ್ವೇಷ ರಾಜಕಾರಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತಿದೆ. ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರೀ ಜನ ಬೆಂಬಲ ಪಡೆದಿದೆ. ಇದು ಕಾಂಗ್ರೆಸ್ ಗೆಲುವು ಅಲ್ಲ. ಜನತೆಯ ಗೆಲುವು” ಎಂದರು.

“ಬಿಜೆಪಿನ್ನು ಸೋಲಿಸಲು ಅಲ್ಪಸಂಖ್ಯಾತರು, ದಲಿತ, ಆದಿವಾಸಿ, ಹಿಂದುಳಿದ ಜನ ಸಮುದಾಯ, ಪ್ರಗತಿಪರ, ಮಹಿಳಾ ಸಂಘಟನೆಗಳ ಜೊತೆಗೆ ‘ಎದ್ದೇಳು ಕರ್ನಾಟಕ‘ ಎಂಬ ನಾಗರಿಕ ಸಮಾಜದ ಸಂಘಟಿತ ಪ್ರಯತ್ನ ವಿಶೇಷವಾಗಿ ನೆರವೇರಿದೆ. 112 ಪ್ರಗತಿಪರ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳ ಐಕ್ಯ ವೇದಿಕೆಯಾದ ‘ಎದ್ದೇಳು ಕರ್ನಾಟಕ’ ತಳ ಸಮುದಾಯಗಳನ್ನು ಜಾಗೃತಗೊಳಿಸಲು ವಿಶೇಷ ಪಾತ್ರ ವಹಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ 103 ಕ್ಷೇತ್ರಗಳನ್ನು ಸೂಕ್ಷ್ಮ ಕ್ಷೇತ್ರ ಎಂದು ಗುರುತಿಸಿ ಅಲ್ಲಿ ಜಾತ್ಯಾತೀತ ಸಮುದಾಯಗಳ ಮತದಾನದ ಪ್ರಮಾಣ ಹೆಚ್ಚಿಸಿ, ಮತ ವಿಭಜನೆಯಾಗದಂತೆ ತಡೆಯಲು ವಿಶೇಷ ಪ್ರಯತ್ನ ಮಾಡಲಾಗಿತ್ತು. ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಬಲ್ಲ ಅಭ್ಯರ್ಥಿ ಯಾರೆಂದು ಗುರುತಿಸಿ ಅವರಿಗೆ ಮತ ಹಾಕಿ ಎಂಬ ಕಾರ್ಯನೀತಿ ಬಿಜೆಪಿಯ ಸೋಲಿಗೆ ದೊಡ್ಡ ಕಾರಣವಾಗಿದೆ” ಎಂದು ಶ್ಲಾಘಿಸಿದ್ದಾರೆ.

ಅಭಿಯಾನದ ಭಾಗವಾಗಿ ರಾಜ್ಯದಾದ್ಯಂತ 250ಕ್ಕೂ ಹೆಚ್ಚು ಕಾರ್ಯಾಗಾರ ನಡೆಸಿ ಸ್ವಯಂ ಸೇವಕರನ್ನು ಸಿದ್ಧಗೊಳಿಸಿ ಅಭಿಯಾನದಲ್ಲಿ ತೊಡಗಿಸಲಾಯಿತು. ಅನೇಕ ಸಾಹಿತಿಗಳು, ಚಿಂತಕರು, ಕಲಾವಿದರು, ಹೋರಾಟಗಾರರು ಅಭಿಯಾನದಲ್ಲಿ ನಿಸ್ವಾರ್ಥದಿಂದ ಕೆಲಸ ಮಾಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಸಕ ಈಶ್ವರ್‌ ಖಂಡ್ರೆಗೆ ಮಂತ್ರಿಗಿರಿ ನೀಡಲು ಆಗ್ರಹ

“ಸಂವಿಧಾನ ವಿರೋಧಿ ಶಕ್ತಿಗಳಿಂದ ನಾಡನ್ನು ರಕ್ಷಿಸಿದ ಸೇನಾನಿಗಳನ್ನು ಗೌರವಿಸಲು, ಎದ್ದೇಳು ಕರ್ನಾಟಕದಲ್ಲಿ ದುಡಿದ ಸ್ವಯಂ ಸೇವಕರಿಗೆ ಅಭಿನಂದಿಸಲು ಈ ಸಮಾವೇಶ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ದರ್ಶನ್ ಪುಟ್ಟಣ್ಣಯ್ಯ ಮತ್ತಿತರರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ಆರ್ ಭೇರಿ, ಖಾಜಾ ಅಸ್ಲಾಂ ಅಹ್ಮದ್,  ಅಸಿಮುದ್ದೀನ್ ಅಖ್ತರ್, ಲಕ್ಷ್ಮಣ ಜಾನೇಕಲ್, ತಿಮ್ಮಪ್ಪ ದಾಸ್, ಹನುಮಂತ ಜೋಗಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...