ರಾಯಚೂರು | ಹಿಂದುಳಿದ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರಲು ಮುಂದಾಗಬೇಕು: ಅಪರ ಜಿಲ್ಲಾಧಿಕಾರಿ

Date:

ಕಂದಾಯ ಇಲಾಖೆಯಿಂದ ಅನುಷ್ಠಾನಗೊಳಿಸುವ ಬೆಳೆಹಾನಿ, ವಿಪತ್ತು ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಸಾಧನೆಯಲ್ಲಿ ರಾಯಚೂರು ಜಿಲ್ಲೆಯ ಹೆಸರನ್ನು ಪ್ರಥಮ ಸ್ಥಾನಕ್ಕೆ ತರಲು ಎಲ್ಲ ಹಂತದ ಅಧಿಕಾರಿಗಳು ಒಗ್ಗೂಡಿ ಕೆಲಸ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಮನವಿ ಮಾಡಿದರು.

ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಹಿಂದುಳಿದ ಹಣೆಪಟ್ಟಿ ಕಟ್ಟಿಕೊಂಡಿರುವ ಜಿಲ್ಲೆಯನ್ನು ಪ್ರಥಮ ಹಂತಕ್ಕೆ ತರಲು ಎಲ್ಲ ಹಂತದ ಅಧಿಕಾರಿಗಳ ತೊಡಗುಸುವಿಕೆ ಮಹತ್ವದ್ದಾಗಿದೆ” ಎಂದು ಸಲಹೆ ನೀಡಿದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆನ್‌ಲೈನ್ ಮೂಲಕ ಜಾರಿಗೊಳಿಸಬೇಕಾದ ಯೋಜನೆಗಳಲ್ಲಿ ಗ್ರಾಮಲೆಕ್ಕಾಧಿಕಾರಿ, ಗ್ರಾಮಸೇವಕರಿಂದ ಹಿಡಿದು ವಿಭಾಗ ಮಟ್ಟದ ಎಲ್ಲ ಅಧಿಕಾರಿಗಳು ಒಗ್ಗೂಡಿ ಕಾರ್ಯ ನಿರ್ವಹಿಸದಲ್ಲಿ ರಾಜ್ಯದಲ್ಲಿಯೇ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರುವುದರಲ್ಲಿ ಸಂಶಯವಿಲ್ಲ. ಆಧಾರ್ ಜೋಡಣೆಯಲ್ಲಿ ಈಗಾಗಲೇ ಪ್ರತಿಶತ 61 ರಷ್ಟು ಸಾಧನೆಯಾಗಿದ್ದು, ಅನೇಕರು ನೂರಕ್ಕೆ ನೂರರಷ್ಟು ಸಾಧನೆ ಸಾಧಿಸಿದ್ದೇವೆ” ಎಂದರು.

“ಬೆಳೆಹಾನಿ, ಪರಿಹಾರ ವಿತರಣೆ, ಕಂದಾಯ ದಾಖಲೆಗಳ ನಿರ್ವಹಣೆ ಒಳಗೊಂಡಂತೆ ಎಲ್ಲವನ್ನೂ ಆನ್‌ಲೈನ್ ಮೂಲಕ ನಿರ್ವಹಿಸುತ್ತಿರುವುದರಿಂದ ಮತ್ತಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ಅವಶ್ಯಕತೆಯಿದೆ. ಯೋಜನೆಗಳ ಪ್ರಗತಿಯನ್ನು ದಾಖಲಿಸಲು ಏನೇ ಸಂಶಯಗಳಿದ್ದರೂ ಅವುಗಳನ್ನು ನಿವಾರಿಸಿಕೊಂಡು ನಿಗದತ ಗುರಿ ಸಾಧಿಸುವುದಕ್ಕೆ ಶ್ರಮಿಸಬೇಕು” ಎಂದು ಕರೆ ನೀಡಿದರು.

ತಹಶೀಲ್ದಾರ್ ಸುರೇಶ ವರ್ಮಾ ಮಾತನಾಡಿ, “ಕಂದಾಯ ಇಲಾಖೆ ಎಲ್ಲ ಇಲಾಖೆಗಳಿಗೆ ಮಾತೃ ಇಲಾಖೆಯಾಗಿದ್ದು, ಗ್ರಾಮ ಲೆಕ್ಕಿಗರಿಂದ ಹಿಡಿದ ಎಲ್ಲ ಹಂತದ ಅಧಿಕಾರಿಗಳೂ ಕೂಡಾ ಕೆಲಸ ನಿರ್ವಹಿಸುತ್ತಿದ್ದಾರೆ. ಮತ್ತಷ್ಟು ಚುರುಕಾಗಿ ಕಾರ್ಯನಿರ್ವಹಿಸಿದಲ್ಲಿ ಜಿಲ್ಲೆ ರ‍್ಯಾಂಕಿಂಗ್ ಬದಲಾಗಲು ಸಾಧ್ಯವಿದೆ. ಭೂಮಿ ತಂತ್ರಾಂಶ ಸೇರಿದಂತೆ ವಿಪತ್ತು ನಿರ್ವಹಣೆ, ಬೆಳೆ ಪರಿಹಾರ, 1-5 ದಾಖಲೆಗಳ ನಿರ್ವಹಣೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ” ಎಂದರು.

ಕಾರ್ಯಾಗಾರದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದರು ವೇದಿಕೆಯಲ್ಲಿ ಸಹಾಯಕ ಆಯುಕ್ತೆ ಮಹಿಬೂಬಿ, ತಹಸೀಲ್ದಾರರುಗಳಾದ ಚನ್ನಪ್ಪ ಘಂಟಿ ಸೇರಿದಂತೆ ವಿವಿಧ ತಾಲೂಕಿನ ತಹಸೀಲ್ದಾರರು, ಗ್ರಾಮಲೆಕ್ಕಾಧಿಕಾರಿಗಳು, ಶಿರೆಸ್ತೇದಾರರು, ಕಂದಾಯ ನಿರೀಕ್ಷಕರು ಭಾಗಿಯಾದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...