ರಾಯಚೂರು | ‘ಮನ್ ಕಿ ಬಾತ್ ನಿಲ್ಲಿಸಿ, ಜನರ ಮಾತು ಕೇಳಿ’; ರೇಡಿಯೋ ಒಡೆದು ಪ್ರಧಾನಿ ವಿರುದ್ಧ ಆಕ್ರೋಶ

Date:

ಕಳೆದ ಹತ್ತು ವರ್ಷದಿಂದ ಮೋದಿಯ ಮನ್ ಕೀ ಬಾತ್ ಕೇಳಿ ಮನೆ ಹಾಳಾಯ್ತು, ದೇಶ ಹಾಳಾಯ್ತು. ಮೋದಿ ಬೇಡ ಮೋದಿ ಸುಳ್ಳುಗಳು ಬೇಡ ಎಂಬ ಧ್ಯೇಯ ವಾಕ್ಯದಡಿ, ‘ಮನ್ ಕಿ ಬಾತ್’ ರೇಡಿಯೋ ಪ್ರಸಾರ ವಿರೋಧಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷ ರಾಯಚೂರು ಜಿಲ್ಲಾ ಘಟಕದಿಂದ ಕೇಂದ್ರ ಸರ್ಕಾರ ಬಹಿಷ್ಕಾರ ಚಳವಳಿ ನಡೆಯಿತು.

ರಾಯಚೂರು ನಗರದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಪಕ್ಷದ ಪದಾಧಿಕಾರಿಗಳು ರೇಡಿಯೋ ಒಡೆಯುವ ಮೂಲಕ, ಪ್ರಧಾನಿ ಮೋದಿ ಹಾಗೂ‌ ಕೇಂದ್ರ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

“ಕೇಂದ್ರದ ಮೋದಿ ಸರ್ಕಾರ ಕಳೆದ 9 ವರ್ಷಗಳಿಂದ ಮನ್ ಕಿ ಬಾತ್ ಹೇಳುತ್ತಿದೆ. ಜನರ ಮಾತು ಕೇಳುತ್ತಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿ, ಬಡತನ ನಿರ್ಮೂಲನೆ ಮಾಡದೇ ದಿನಬಳಕೆಯ ವಸ್ತುಗಳ ಬೆಲೆ ಕಡಿಮೆ ಮಾಡದೆ ಜನ ವಿರೋಧಿ‌ ನೀತಿ ಅನುಸರಿಸುತ್ತಿದೆ. ದೇಶದ ನಾಗರಿಕರ ಸಮಸ್ಯೆ ಆಲಿಸದೆ ಅಂತಾರಾಷ್ಟ್ರೀಯ ಮಟ್ಟದ ವಿಷಯದ ಬಗ್ಗೆ ಕಣ್ಣೀರು ಸುರಿಸುತ್ತಿದೆ. ದೇಶದ ನಾಗರಿಕರ ಜೀವಕ್ಕಿಂತ  ಪ್ರಧಾನಿ ಮೋದಿಗೆ ಪರದೇಶದ ಚಿಂತೆ ಹೆಚ್ಚಾಗಿದೆ” ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾನಿರತ ಸಿಪಿಐಎಲ್‌ರೆಡ್ ಸ್ಟಾರ್ ರಾಜ್ಯ ಸಮಿತಿಯ ಸದಸ್ಯ ಜಿ ಅಮರೇಶ್ ಮಾತನಾಡಿ, “ಪ್ರಧಾನಿ ಮೋದಿ ಕೇಂದ್ರ‌ ಸರ್ಕಾರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಜನರ ಬದುಕು ದುಸ್ತರವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡದೇ ಕೇವಲ ಮನ್ ಕಿ‌ ಬಾತ್ ಹೇಳುತ್ತಿದೆ. ನಮಗೆ ಮನ್ ಕಿ‌ ಬಾತ್ ಬೇಕಾಗಿಲ್ಲ. ಕಾಮ್ ಕಿ ಬಾತ್( ಕೆಲಸದ ಮಾತು) ಬೇಕು. ಯುವಕರಿಗೆ ಉದ್ಯೋಗ ಬೇಕು” ಎಂದು ಆಗ್ರಹಿಸಿದರು.

“15 ಲಕ್ಷ ಹಾಕುತ್ತೇನೆಂದು ಹೇಳಿ ಒಂದು‌ ನಯಾ ಪೈಸಾನೂ ಹಾಕಿಲ್ಲ. ಕೇವಲ‌ ಸುಳ್ಳಿನ ಭರವಸೆ ನೀಡುತ್ತಿದ್ದು, ಆರ್ ಎಸ್ ಎಸ್ ಅಣತಿಯಂತೆ ಮೋದಿ ಸರ್ಕಾರ ನಡೆಯುತ್ತಿದೆ. ದೇಶದ ಅಲ್ಪಸಂಖ್ಯಾತರ, ದಲಿತರ ರಕ್ಷಣೆ ಮಾಡುತ್ತಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರವನ್ನು ಸೋಲಿಸಲು ಪ್ರಗತಿಪರ ಸಂಘಟನೆಗಳು, ಜಾತ್ಯಾತೀತ, ಅಲ್ಪಸಂಖ್ಯಾತರ, ದಲಿತರ ಧ್ಯೇಯ ಹೊಂದಿರುವ ಎಲ್ಲ ರಾಜಕೀಯ ಪಕ್ಷಗಳೂ ಒಂದಾಗಬೇಕು” ಎಂದು ಮಾನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೆರೆಯಲ್ಲಿ ನವ ವಿವಾಹಿತೆ ಶವವಾಗಿ ಪತ್ತೆ; ಕೊಲೆ ಆರೋಪ

ಪ್ರತಿಭಟನೆಯಲ್ಲಿ ಪಕ್ಷದ ತಾಲೂಕು ಕಾರ್ಯದರ್ಶಿ ಆರ್ ಹುಚ್ಚ ರೆಡ್ಡಿ, ಪಕ್ಷದ‌ ಪದಾಧಿಕಾರಿಗಳಾದ ಅಝೀಝ್ ಜಾಗೀರದಾರ್, ಮಲ್ಲಯ್ಯ ಕಟ್ಟಿಮನಿ,‌ ಆದೇಶ‌ ನಗನೂರು, ಜಿ ಅಡವಿರಾವ್, ವೆಂಕಟೇಶ ಚಿಲ್ಕರಾಗಿ, ನಿರಂಜನ ಕುಮಾರ, ನಿಸರ್ಗ, ಹನೀಫ್ ಅಬಕಾರಿ, ಲಕ್ಷ್ಮಣ, ನಾರಾಯಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...