ರಾಯಚೂರು | ಬೀಡಾಡಿ ದನಗಳ ಹಾವಳಿ; ಸ್ಥಳೀಯರಿಗೆ ಕಿರಿಕಿರಿ

Date:

ರಾಯಚೂರು ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಅಡ್ಡಾದಿಡ್ಡಿಯಾಗಿ ತಿರುಗಾಡುವುದರಿಂದ ತರಕಾರಿ ವ್ಯಾಪಾರಿಗಳಿಗೆ, ಹಣ್ಣು ಹಂಪಲ ವ್ಯಾಪಾರಸ್ಥರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆ ಎದುರಾಗಿದೆ.

“ನಗರದ ಮುಖ್ಯ ರಸ್ತೆಗಳಲ್ಲಿ, ಕೇಂದ್ರ ಬಸ್ ನಿಲ್ದಾಣದಿಂದ ತೀನ್ ಖಂದಿಲ್ ಹೋಗುವ ರಸ್ತೆ, ಸ್ಟೇಶನ್ ರಸ್ತೆ, ಗಂಜ್ ರಸ್ತೆ ಸೇರಿದಂತೆ ಮಾರ್ಕೆಟ್ ಮುಂಭಾಗ ಸೇರಿ ಪ್ರಮುಖ ರಸ್ತೆಗಳಲ್ಲಿ ಬೀಡಾಡಿ ದನಗಳು ಅಡ್ಡಾದಿಡ್ಡಿಯಾಗಿ ಓಡಾಡುತ್ತವೆ. ಹಲವು ಬಾರಿ ವಾಹನ ಸವಾರರ ಮೇಲೆ ದಾಳಿ ಮಾಡಿದ್ದು, ಬೀಡಾಡಿ ದನಗಳಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ” ಎಂದು ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದರು.

“ರಾಯಚೂರು ನಗರಸಭೆಯಿಂದ ಜುಲೈ 11ರಂದು ಆದೇಶ ನೀಡಿ 24 ತಾಸಿನೊಳಗೆ ದನಗಳನ್ನು ಸುಪರ್ದಿಗೆ ಪಡೆಯಲು ಹೇಳಿತ್ತು.‌ 26 ದಿನಗಳಾದರೂ ಒಂದೇ ಒಂದು ಬೀಡಾಡಿ ದನವನ್ನು ಹಿಡಿದು ಗೋಶಾಲೆಗೆ ಒಪ್ಪಿಸುವ ಕಾರ್ಯಾಚರಣೆ ನಡೆದಿಲ್ಲ” ಎಂದು ವ್ಯಾಪಾರಸ್ಥರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೀಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳು ಸಂಭವಿಸಿ ಹಲವಾರು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದಾರೆ. ಈ ಕುರಿತು ಎಚ್ಚರ ವಹಿಸಬೇಕಾದ ಪೊಲೀಸ್‌ ಇಲಾಖೆ ಮತ್ತು ನಗರಸಭೆ ನಿದ್ರೆಗೆ ಜಾರಿದೆ. ಬೀದಿ ಬದಿಯ ವ್ಯಾಪಾರಿಗಳು ಬೀಡಾಡಿ ದನಗಳ ಹಾವಳಿಗೆ ತತ್ತರಿಸಿ ಹೋಗಿದ್ದಾರೆ” ಎಂದು ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿಗೆ ಪಶು ಪಶುಪಾಲನೆ ಇಲಾಖೆ ಸಚಿವ ವೆಂಕಟೇಶ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಒಂದು ಬಾರಿ ಮಾಲೀಕರಿಗೆ ನೋಟೀಸ್ ನೀಡಿ ಎರಡನೇ ಬಾರಿಗೆ ಗೋಶಾಲೆಗೆ ಹಾಕುವುದಕ್ಕೆ ನಿರ್ದೇಶನ ನೀಡಿದ್ದಾರೆ. ಸಭೆ ನಡೆಸಿ ಒಂದು ವಾರವಾದರೂ ನಗರಸಭೆ ಅಧಿಕಾರಿಗಳು ಬೀಡಾಡಿ ದನಗಳ ನಿಯಂತ್ರಣ ಮಾಡಲು ಮುಂದಾಗುತ್ತಿಲ್ಲ.

ದ್ವಿಚಕ್ರ ವಾಹನ ಓಡಿಸುವಾಗ ಬೀಡಾಡಿ ದನ ಢಿಕ್ಕಿಯಾಗಿ ಅಪಘಾತ ಎದುರಿಸಿದ ಅಜೀಜ್ ಜಾಗಿರದಾರ ಈ‌ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬೀಡಾಡಿ ದನಗಳ ಹಾವಳಿಯಿಂದ ಜನರು, ವ್ಯಾಪಾರಸ್ಥರು ಸೋತು ಹೋಗಿದ್ದಾರೆ. ನಾನು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ದನಗಳ ಗುಂಪು ಅಡ್ಡಾದಿಡ್ಡಿ ರಸ್ತೆ ಮೇಲೆ ಬಂದವು. ಇದರಿಂದ ನನ್ನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು. ಹೀಗೆ ನಿತ್ಯ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಅಪಘಾತದಿಂದ ಎಷ್ಟೋ ದನಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದನ್ನು ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಆದಷ್ಟು ಬೇಗ ಎಚ್ಚೆತ್ತುಕೊಂಡು ಕಡಿವಾಣ ಹಾಕಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾರ್ವಜನಿಕರಿಗೆ ನೋಟಿಸ್ ನೀಡಿ ಒಂದು ವಾರದಲ್ಲಿ ಬೀಡಾಡಿ ದನಗಳನ್ನು ಗೋಶಾಲೆಗೆ ಒಪ್ಪಿಸುವ ಕೆಲಸ ಮಾಡಲಾಗುವುದು” ಎಂದು ಭರವಸೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...