ರಾಯಚೂರು | ಛಲವಾದಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ – ಅರ್ಚನಾ ಸುಂಕಾರಿ

Date:

ಆಗಸ್ಟ್ 24 ರಂದು ಬೆಳಿಗ್ಗೆ 10 ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅರ್ಚನಾ ಸುಂಕಾರಿ ತಿಳಿಸಿದರು.

ಅವರಿಂದು ಸುದ್ದಿಗೋಷ್ಠಿ ಮಾತನಾಡಿ, ಛಲವಾದಿ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 70 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಸಮಾಜದ ವಿದ್ಯಾರ್ಥಿಗಳನ್ನು ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡಲು ಪ್ರೋತ್ಸಾಹಿಸುವ ದೃಷ್ಟಿಯಿಂದ ಮಹಿಳಾ ಘಟಕದಿಂದ ಈ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿಭಾವಂತ ಸಮುದಾಯ ವಿದ್ಯಾರ್ಥಿಗಳು ಆಗಸ್ಟ್ 17 ರ ಒಳಗಾಗಿ ದೂರವಾಣಿ ಸಂಖ್ಯೆ 9353659741, 9611308882, 9113677939, 8867465204 ಸಂಪರ್ಕಿಸಿ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಗೋಷ್ಠಿಯಲ್ಲಿ ಛಲವಾದಿ ಮಹಾಸಭಾ ಮಹಿಳಾ ಘಟಕ ಪದಾಧಿಕಾರಿಗಳಾದ ಲಲಿತಾ ಅರೋಲಿಕರ್, ಸಾವತ್ರಿ ಪುಲಿ, ಜಯಶ್ರೀ ಮಾರೆಪ್ಪ , ಮೀನಾಕ್ಷಿ , ಪ್ರಿಯದರ್ಶಿನಿ ನಂದಿನಿ,ಸುಜಾತ ದಾದಸ್, ನಾಗರತ್ನ ಆರ್ ಉಪಸ್ಥಿತರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...