ರಾಯಚೂರು | ಬಿಸಿಯೂಟಕ್ಕೆ ನೀರು ತರಲು ಹೋದ ವಿದ್ಯಾರ್ಥಿಗೆ ಗಾಯ; ಕ್ರಮಕ್ಕೆ ಆಗ್ರಹ

Date:

ಬಿಸಿಯೂಟ ತಯಾರಿಕೆಗಾಗಿ ನೀರು ತರಲು ಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಕಳುಹಿಸಿದ್ದು, ನೀರು ತರುವ ವೇಳೆ ವಿದ್ಯಾರ್ಥಿಗೆ ಗಾಯಗಳಾಗಿವೆ. ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿದ ಮುಖ್ಯ ಶಿಕ್ಷಕ ಮತ್ತು ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.

ರಾಯಚೂರು ಜಿಲ್ಲೆಯ ಮಸೀದಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ನೀರು ತರಲು ಕಳುಹಿಸಲಾಗಿತ್ತು. 5ನೇ ತರಗತಿ ವಿದ್ಯಾರ್ಥಿ ಭರತ್ ಎಂಬಾತ ಆಟೋದಿಂದ ನೀರಿನ ಕೊಡ ಒಯ್ಯುವಾಗ ನೀರಿನ ಕೊಡ ಬಿದ್ದು, ಆತನ ಕೈ ಮುರಿದಿದೆ ಎಂದು ಸಂಘದ ಮುಖಂಡರು ಆರೋಪಿಸಿದ್ದಾರೆ.

ಆತನನ್ನು ರಾಯಚೂರಿನ ಸುರಕ್ಷಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೂಡಲೇ ತಪ್ಪಿತಸ್ಥ ಮುಖ್ಯ ಶಿಕ್ಷಕ ಮತ್ತು ಪಿಡಿಒ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ತಿಮ್ಮಪ್ಪ ಮಲದಕಲ್, ಉಪಾಧ್ಯಕ್ಷ ನಾಗರಾಜ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...