ರಾಯಚೂರು | ಮುಖ್ಯ ಶಿಕ್ಷಕಿಯಿಂದ ದುರ್ವರ್ತನೆ ಆರೋಪ: ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

ಮುಖ್ಯ ಶಿಕ್ಷಕಿ ದುರ್ವರ್ತನೆ ತೋರುತ್ತಿರುವುದರಿಂದ ಶಾಲೆಯಲ್ಲಿದ್ದ ಇತರೆ ಶಿಕ್ಷಕರು ಕೆಲಸ ತೊರೆಯುತ್ತಿದ್ದಾರೆ. ಇದರಿಂದಾಗಿ ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ, ಕೂಡಲೇ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ತೆಗೆಯಬೇಕು. ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮುಂಡರಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಅವರು ಶಾಲೆಯಲ್ಲಿ ಗುಂಪುಗಾರಿಕೆ, ಸರ್ವಾಧಿಕಾರದಿಂದ ಆಡಳಿತ ನಡೆಸುತ್ತಿದ್ದಾರೆ. ಶಾಲಾ ಅಭಿವೃದ್ಧಿ ಕಡೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಬೇಸತ್ತು ಹಾಗೂ ಮುಖ್ಯ ಶಿಕ್ಷಕಿಯ ಕಿರುಕುಳದಿಂದ ನಾಲ್ಕು ಶಿಕ್ಷಕರು ಶಾಲೆಯಿಂದಲೇ ರಾಜೀನಾಮೆ ನೀಡಿದ್ದಾರೆ. ಶಾಲೆಯಲ್ಲಿ ಶಿಕ್ಷಕರಿಲ್ಲದೆ ಮಕ್ಕಳ ಬೋಧನೆ ಕುಂಟಿತಗೊಳ್ಳುತ್ತಿದೆ. ಇದರಿಂದಾಗಿ ಪ್ರತಿಭಟನೆ ನಡೆಸುವ ಅನಿವಾರ್ಯತೆ ಬಂದೊದಗಿದೆ ಎಂದು ಮುಂಡರಗಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಅವರ ಆಡಳಿತ ಸರ್ವಾಧಿಕಾರದಿಂದ ನಡೆಸುತ್ತಿದ್ದಾರೆ. ಶಾಲೆಯ ಇನ್ನಿತರ ಕೆಲಸದ ಚಟುವಟಿಕೆಗಳನ್ನು ಮಕ್ಕಳಿಂದ ಮಾಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಗಮನಕ್ಕೆ ತಂದರೂ, ಸುಮ್ಮನಿರುತ್ತಿಲ್ಲ. ಎರಡು ದಿನದ ಹಿಂದೆ ನಾಲ್ಕು ಜನ ಅತಿಥಿ ಶಿಕ್ಷಕರು ಮುಖ್ಯ ಶಿಕ್ಷಕಿ ಕಿರುಕುಳಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕಿಯ ವರ್ತನೆಗೆ ಬೇಸತ್ತು ಮಕ್ಕಳು ಕಣ್ಣೀರು ಹಾಕಿ ಶಾಲೆಯಿಂದ ಹೊರ ನಡೆದಿದ್ದಾರೆ. ಶಾಲೆಯಲ್ಲಿ ಅತಿಥಿ ಶಿಕ್ಷಕರಿಗೆ ಮೂರು ತಿಂಗಳು ಕೆಲಸ ಮಾಡಲು ಬಿಡುತ್ತಿಲ್ಲ. ಮುಖ್ಯ ಶಿಕ್ಷಕಿ ಸರ್ವಾಧಿಕಾರಿಯಾಗಿ ದುರ್ವತನೆ ತೋರುತ್ತಿದ್ದಾರೆ. ಅವರ ಪತಿ ಸಿಬ್ಬಂದಿಯೂ ಅಲ್ಲ, ಪಾಲಕರು ಅಲ್ಲ. ಆದರೂ, ಶಾಲೆಯಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ದೂರಿದರು.

ಮುಖ್ಯ ಶಿಕ್ಷಕಿ ಗೀತಾ ಮನ ಬಂದಂತೆ ಮಾತನಾಡುವ ಮೂಲಕ ವಿದ್ಯಾರ್ಥಿಗಳನ್ನು ನಿಂದಿಸುತ್ತಿದ್ದಾರೆ. ಶೈಕ್ಷಣಿಕ ಅಭಿವೃದ್ಧಿಗೆ ಅವರು ಕೆಲಸ ಮಾಡುತ್ತಿಲ್ಲ. ಕರ್ತವ್ಯದ ವೇಳೆ ದುರ್ನಡತೆ ತೋರುತ್ತಿರುವ ಬಗ್ಗೆ ಪಾಲಕರಿಗೆ ತಿಳಿಸಿದರೆ ವರ್ಗಾವಣೆ ಪ್ರಮಾಣ ಪತ್ರ ನೀಡುವುದಾಗಿ ಬೆದರಿಸುತ್ತಿದ್ದಾರೆ. ಮುಖ್ಯ ಶಿಕ್ಷಕಿ ದುರ್ನಡತೆಗೆ ಶಾಲೆಗೆ ಬರಲು ಭಯವಾಗಿದ್ದು, ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು. ಅಲ್ಲಿಯವರೆಗೆ ಎಸ್ ಡಿ ಎಂ ಸಿ ರಚನೆಗೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಹೋಟೆಲ್ ಮೇಲೆ ದಾಳಿ: ಬಾಲ ಕಾರ್ಮಿಕನನ್ನು ರಕ್ಷಿಸಿ ಶಾಲೆಗೆ ಸೇರಿಸಿದ ಅಧಿಕಾರಿಗಳು

ಗೀತಾ ಮೇಡಂ ರವರು ತಕ್ಷಣ ವರ್ಗಾವಣೆ ಮಾಡಬೇಕೆಂದು ಆರು ತಿಂಗಳ ಹಿಂದೆಯೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಶಾಲಾ ಮಕ್ಕಳ ಮುಂದಿನ ಭವಿಷ್ಯಕ್ಕೆ ಅಧಿಕಾರಿಗಳೇ ಹೊಣೆಯಾಗಿರುತ್ತಾರೆಂದು ಎಂದು ಗ್ರಾಮಸ್ಥರು ತಿಳಿಸಿದರು.

ಮಲ್ಲಯ್ಯ ಕಟ್ಟಿಮನಿ ಶಿವರಾಜ್ ತಳವಾರ್, ಮಾರುತಿ, ಶರಣಬಸವ, ಶಿವರಾಜ್ ಭಟ್ಟರ್, ಶಿವಪ್ಪ ದನಕಾಯ, ಹನುಮಂತ ಹದಿನಾಳ ಮತ್ತು ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...