ರಾಯಚೂರು | ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಬೆಂಬಲಿಸಲು ಮನವಿ

Date:

ಸಂವಿಧಾನ ಸಂಪೂರ್ಣ ಜಾರಿಗೆ ಹಿಂದೇಟು ಹಾಕುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಸೋಲಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಮನವಿ ಮಾಡಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ದಲಿತ, ಕಾರ್ಮಿಕರ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಲಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ದಿ ಹೆಸರಿನಲ್ಲಿ ಅನ್ಯಾಯ ಮಾಡುತ್ತಲೇ ಬಂದಿವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು ಹಣ, ಹೆಂಡ, ಆಮಿಷೆಗಳಿಗೆ ಬಲಿಯಾಗದೇ ಶೇ.80 ರಷ್ಟು ಇರುವ ಶೋಷಿತ ಸಮುದಾಯಗಳು ಆರ್‌ಪಿಐ ಪಕ್ಷದ  ಚಿಹ್ನೆ ಪೆನ್ನು ಗುರುತಿನ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಲದ ಹಣದಲ್ಲಿ ಬಜೆಟ್ ಮಂಡಿಸಿ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಲಿವೆ. ದೇಶದ ಸಾಲ 188 ಲಕ್ಷ ಕೋಟಿಯಾಗಿದ್ದರೆ, ರಾಜ್ಯ ಸರ್ಕಾರದ ಸಾಲ 5.65 ಲಕ್ಷ ಕೋಟಿಯಾಗಿದೆ. ವಜ್ರ, ಚಿನ್ನ ,ಬೆಳ್ಳಿಗೆ ತೆರಿಗೆ ಇಳಿಸಿರುವ ಕೇಂದ್ರ ಸರ್ಕಾರ ಬಡವರು ಉಣ್ಣುವ ಹಾಲು, ಮೊಸರು, ರಸಗೊಬ್ಬರ, ಇಂಧನಗಳ ತೆರಿಗೆ ಹೆಚ್ಚಿಸಿದೆ. ದೇಶದಲ್ಲಿ 9 ಕೋಟಿ  ಜನರು ಹಸಿವಿನಿಂದ ಸಾಯುತ್ತಿದ್ದಾರೆ. 67 ಲಕ್ಷ ಮಕ್ಕಳು ಒಪ್ಪೊತ್ತಿನ ಊಟವಿಲ್ಲದ ಸ್ಥಿತಿಯಲ್ಲಿದ್ದಾರೆ. 60 ಲಕ್ಷ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ರದ್ದುಗೊಳಿಸಲಾಗಿದೆ. ರೈತರ ಮೂರು ಕಾಯ್ದೆಗಳನ್ನು ರದ್ದುಗೊಳಿಸಿದ್ದರೂ ಅಧಿಕೃತವಾಗಿ ರೈತರ ರಕ್ಷಣೆಗೆ ಮುಂದಾಗುತ್ತಿಲ್ಲ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನದ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗೆ ಬಳಿಸಿಕೊಂಡು ಪರಿಶಿಷ್ಟ ಅಭಿವೃದ್ದಿ ಬದ್ದವೆಂದು ಹೇಳುತ್ತಲಿದೆ. ಅನುದಾನ ಅನ್ಯ ಕಾರ್ಯಗಳಿಗೆ ಬಳಸದಂತೆ ಕಾಯ್ದೆ ತಂದಿರುವುದಾಗಿ ಹೇಳುವ ಸರ್ಕಾರವೇ ಬೇರೆ ಯೋಜನೆಗಳಿಗೆ ಅನುದಾನ ಬಳಸಿದೆ. ವಸತಿ ನಿಲಯಗಳ ಅವ್ಯವಸ್ಥೆ ಸರಿಪಡಿಸುತ್ತಿಲ್ಲ. ಶಿಷ್ಯವೇತನ ನೀಡುತ್ತಿಲ್ಲ. ಮುಖ್ಯಮಂತ್ರಿಗಳ ಗಮನಕ್ಕೆ ತಂದರೂ, ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಕಾಂಗ್ರೆಸ್-ಬಿಜೆಪಿ ಪಕ್ಷಗಳಿಂದ ಡಾ. ಬಿ.ಆರ್. ಅಂಬೇಡ್ಕರ ಕನಸು ನನಸು ಮಾಡಲು ಸಾಧ್ಯವಿಲ್ಲ ಎಂದರು.

ಎರಡು ಪಕ್ಷಗಳನ್ನು ತಿರಸ್ಕರಿಸಿ ಪರ್ಯಾಯ ರಾಜಕೀಯಕ್ಕಾಗಿ ಆರ್‌ಪಿಐ ಬೆಂಬಲಿಸಬೇಕೆಂದರು. ಪರಿಶಿಷ್ಟರ ಕಲ್ಯಾಣಕ್ಕಾಗಿ ಮಾಡಿರುವ ಖರ್ಚು ವೆಚ್ಚದ ಕುರಿತ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ಜನರಲ್ಲಿ ಜಾಗೃತಿ ಮೂಡಿಸಲು ನಾಲ್ಕು ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭೀಮ ಜಾಥಾ ಪ್ರಾರಂಭಿಸಿದೆ. ಆ.27ರಂದು ರಾಯಚೂರು ಜಿಲ್ಲೆಗೆ ಜಾಥಾ ಆಗಮಿಸಲಿದೆ. ಏ.15ರಂದು ದಲಿತ ಸಂಘರ್ಷ ಸಮಿತಿಯ 50ನೇ ವರ್ಷ ವಜ್ರಮಹೋತ್ಸವ ಐತಿಹಾಸಿಕ ಸಮಾವೇಶ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಬುದ್ದಿಜೀವಿಗಳು, ಪ್ರಗತಿಪರರು, ಸಾಹಿತಿಗಳು, ಹೋರಾಟಗಾರರು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಹುಜನರ ಒಲುವು ನಿಲುವು ಕುರಿತು ಚರ್ಚಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಅಶೋಕ್ ನಂಜಲದಿನ್ನಿ, ಎಂ. ಮನೋಹರ, ಬಷೀರ್ ಅಹ್ಮದ್, ಬಸವರಾಜ, ರಂಗಪ್ಪ ಕೋತಿಗುಡ್ಡ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...