ಆಹ್ವಾನಿಸಿ ಭಾಷಣಕ್ಕೆ ಅವಕಾಶ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎಂಎಲ್ ಬೆಂಬಲಿಗರು ಡಿಪೋ ಮ್ಯಾನೇಜರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.
ನಗರದಲ್ಲಿ 14 ಹೊಸ ಬಸ್ಗಳ ಚಾಲನಾ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳೊಂದಿಗೆ ಶಾಸಕರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಭಾಗವಹಿಸಿದ್ದರು.
ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಬಸ್ ಚಾಲನೆಗೆ ಮುಂದಾದ ವೇಳೆ, ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಗೆ ಮಾತನಾಡಲು ಅವಕಾಶ ನೀಡಲಾಗಲಿಲ್ಲ. ಇದನ್ನು ಡಿಪೋ ಮ್ಯಾನೇಜರ್ ಮಾಡಿದ ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿದ ಬಸನಗೌಡ ಬಾದರ್ಲಿ ಬೆಂಬಲಿಗರು ಡಿಪೋ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವರ್ಣಾಶ್ರಮ ಪೋಷಣೆಗೆ ಕರೆ ನೀಡಿದ ಕನೇರಿ ಶ್ರೀ ವಿರುದ್ಧ ಕ್ರಮ ಜರುಗಿಸಿ : ಆರ್. ಮಾನಸಯ್ಯ
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.





