ರಾಯಚೂರು | 18 ಶಾಸಕರ ಅಮಾನತು; ಸಭಾಧ್ಯಕ್ಷರ ಕ್ರಮ ಸಂವಿಧಾನಾತ್ಮಕ: ಡಾ.ರಜಾಕ್ ಉಸ್ತಾದ್

Date:

ಬಿಜೆಪಿ ಶಾಸಕರು ಸದನದಲ್ಲಿ ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರಿಂದ 18 ಜನ ಶಾಸಕರನ್ನು ಅಮಾನತುಗೊಳಿಸಿರುವುದು ಸಂವಿಧಾನಾತ್ಮಕ ಕ್ರಮವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ಡಾ.ರಜಾಕ್ ಉಸ್ತಾದ್ ಹೇಳಿದರು.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಬಿಜೆಪಿ ಶಾಸಕರುಗಳು ರಸ್ತೆಯ ಪುಡಾರಿಗಳ ರೀತಿ ಸದನದಲ್ಲಿ ವರ್ತಿಸಿರುವದು ಅಕ್ಷಮ್ಯ ಅಪರಾಧ. ಅಂತಹ ಶಾಸಕರನ್ನು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಆರು ತಿಂಗಳ ಅವಧಿಗೆ ಅಮಾನತು ಮಾಡಿರುವುದು ಸರಿಯಾದ ಕ್ರಮವಾಗಿದೆ” ಎಂದರು.

“ಬಿಜೆಪಿ ಸದಸ್ಯರ ವರ್ತನೆಗೆ ಬೇಸತ್ತು ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದು ರಾಜ್ಯದ ಜನರಿಗೆ ಬಿಜೆಪಿ ಮಾಡುತ್ತಿರುವ ಅವಮಾನ. ಇತ್ತೀಚಿಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ 140 ಜನ ಸಂಸದರನ್ನು ಅಮಾನತು ಮಾಡಿರುವುದನ್ನು ಬಿಜೆಪಿ ಮರೆತಂತಿದೆ. ಆದರೆ ರಾಜ್ಯದ ಜನತೆ ಮರೆತಿಲ್ಲ. ಅಲ್ಲಿ ಸದಸ್ಯರು ಕೇವಲ ಪ್ರತಿಭಟನೆ ಮಾಡುತ್ತಿದ್ದರೂ ಅಮಾನತು ಮಾಡಲಾಗಿತ್ತು. ಇಲ್ಲಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಪೀಠದ ಮೇಲೆ ಹತ್ತಿ ಸಭಾಧ್ಯಕ್ಷರು ಕೆಲಸ ಮಾಡಲು ಅಡ್ಡಿಪಡಿಸುತ್ತಿದ್ದರು ಮತ್ತು ಕೆಲವೊಬ್ಬರು ಪೇಪರ್ ಹರಿದು ಪೀಠಕ್ಕೆ ಎಸೆಯುತ್ತಿದ್ದರು. ಇದು ಅತ್ಯಂತ ಗಂಭೀರ ವಿಷಯ ಎನ್ನುವದು ಬಿಜೆಪಿಯವರಿಗೆ ಗೊತ್ತಿಲ್ಲವೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಹಿಂದುಳಿದ ವರ್ಗಗಳ 1ಎ, 2ಎ ಮತ್ತು 2ಬಿ ಪ್ರವರ್ಗಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದು, ಇದರಲ್ಲಿ 2ಬಿ ಅಡಿಯಲ್ಲಿ ಬರುವ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದು ಸಂವಿಧಾನಬಾಹಿರ ಎಂದು ಬಿಜೆಪಿ ನಾಯಕರು ದೇಶದ ಮೂಲೆ ಮೂಲೆಯಲ್ಲಿ ನಿಂತು ಬಾಯಿ ಬಡೆದುಕೊಳ್ಳುತ್ತಿರುವುದಲ್ಲದೇ, ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿಯೂ ವಿರೋಧೀಸುತ್ತಿದ್ದಾರೆ. ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿ ಎನ್ನುವುದು ಬಿಜೆಪಿ ಆರೋಪ. ಅದು ಸತ್ಯಕ್ಕೆ ದೂರವಾದ ವಿಷಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ಸಂವಿಧಾನದಲ್ಲಿ ಎಲ್ಲಿಯೂ ಮುಸ್ಲಿಂರಿಗೆ ಮೀಸಲಾತಿ ನೀಡಬಾರದೆಂದು ಹೇಳಿಲ್ಲ, ಸಂವಿಧಾನದ ಅನುಚ್ಛೇದ 16(4)ರಲ್ಲಿ ಸರಕಾರ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬಹುದು ಎಂದು ಹೇಳಿದೆ. ಅದರಲ್ಲಿ ಯಾವುದೇ ಧರ್ಮ ಅಥವಾ ಜಾತಿ ಎಂದು ಸೂಚಿಸಿಲ್ಲ. ಈ ದೇಶದಲ್ಲಿ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಸಾಕಷ್ಟು ವರದಿಗಳು ಇವೆ. ಸಂವಿಧಾನ ಹಿಂದುಳಿದ ವರ್ಗ ಮತ್ತು ಆ ಸಮುದಾಯದ ಪ್ರಾತಿನಿಧ್ಯ ಸರಕಾರದಲ್ಲಿ ಅಷ್ಟೊಂದು ಪ್ರಮಾಣದಲ್ಲಿ ಇರದಿದ್ದರೆ ಅಂತಹ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬಹುದು” ಎಂದು ಹೇಳಿದೆ. ಸಂವಿಧಾನ ತಿಳಿಯದ ಬಿಜೆಪಿ ಇದನ್ನು ವಿರೋಧಿಸುತ್ತಿರುವುದು ಹಾಸ್ಯಾಸ್ಪದ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...