ರಾಯಚೂರು | ಎಂಎಸ್‌ಪಿ, ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಸುವರ್ಣ ಸೌಧ ಮುತ್ತಿಗೆ : ಚುನ್ನಪ್ಪ ಪುಜೇರಿ

Date:

ರೈತರ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಖಾತ್ರಿಪಡಿಸುವುದು ಹಾಗೂ ಡಾ.ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪ ಪುಜೇರಿ ನೇತೃತ್ವದಲ್ಲಿ ಡಿ.11 ರಂದು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಪ್ರತಿಭಟನೆ ನಡೆಸುವದಾಗಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಪ್ಪ ಮರಳಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಕನಿಷ್ಟ ಬೆಂಬಲ ನೀತಿಯೇ ಅವೈಜ್ಞಾನಿಕವಾಗಿದ್ದು ರೈತರು ಬೆಳೆದ ಬೆಲೆ ಮಾರುಕಟ್ಟೆ ಪ್ರವೇಶಿಸುತ್ತಿದ್ದಂತೆ ಬೆಲೆಗಳು ಕುಸಿತವಾಗುತ್ತಿವೆ. ಕನಿಷ್ಟ ಬೆಂಬಲ ಬೆಲೆಯಿಲ್ಲದೇ ಆರ್ಥಿಕ ನಷ್ಟಕ್ಕೆ ರೈತರು ಗುರಿಯಾಗುತ್ತಿದ್ದರೆ, ಪ್ರತಿ ಬೆಲೆಗೆ ಬೆಲೆ ನೀಡಲು ರೈತರು ಹೋರಾಟ ನಡೆಸಬೇಕಾದ ಸ್ಥಿತಿ ನಿರ್ಮಾಣ ವಾಗಿದೆ. ನೆರೆ, ಅತಿವೃಷ್ಟಿ ,ಬರದಿಂದ ರೈತರು ಮಾಡಿದ ಸಾಲ ತೀರಿಸಲಾಗದ ರೈತರು ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ೨೦೦೨ ರಲ್ಲಿ ರೈತರ ಆತ್ಮಹತ್ಯೆ ತಡೆಯಲು ಡಾ.ಸ್ವಾಮಿನಾಥನ ನೇತೃತ್ವದ ನೀಡಲಾಗಿರು ವರದಿಯನ್ನು ಜಾರಿಗೊಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಮುಂದಾಗುತ್ತಿಲ್ಲ. ಕೃಷಿ ವೆಚ್ಚಕ್ಕೆ ಶೇ.50 ಹೆಚ್ಚುವರಿಯಾಗಿ ಸೇರಿ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕೆಂಬ ಶಿಫಾರಸ್ಸು ಜಾರಿಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಮಾರಕ ಕಾಯ್ದೆಗಳನ್ನು ರೈತರ ಪ್ರತಿರೋಧದಿಂದ ಹಿಂಪಡೆಯಲಾಯಿತು ಆದರೆ ರಾಜ್ಯದಲ್ಲಿರುವ ಸರ್ಕಾರಗಳು ಮಾತ್ರ ಮುಂದುವರೆಸಿಕೊಂಡು ಹೊರಟಿವೆ. ಬಿಜೆಪಿ ಸರ್ಕಾರದೊಂದಿಗೆ ಕಾಂಗ್ರೆಸ್ ಸಹ ಕಾಯ್ದೆಗಳನ್ನು ಹಿಂಪಡೆಯಲು ಮುಂದಾಗುತ್ತಿಲ್ಲ. ಕೃಷಿಯೇ ಸಂಕಷ್ಟದಲ್ಲಿರುವಾಗ ಸರ್ಕಾರಗಳು ಸಹ ರೈತರನ್ನು ಒಕ್ಕಲೆಬ್ಬಿಸುವ ನೀತಿಗಳನ್ನು ಅನುಸರಿಸುತ್ತಿವೆ. ಬೆಳೆಹಾನಿ ಸಂದರ್ಬದಲ್ಲಿಯೂ ಬ್ಯಾಂಕ್‌ಗಳು ಸಾಲ ವಸೂಲಿಗೆ ನೋಟಿಸ್ ನೀಡುತ್ತಿವೆ. ಸರ್ಕಾರಗಳ ಸೂಚನೆಯೂ ಪಾಲಿಸದೇ ಇದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ನಡೆಯಲಿರುವ ಮುತ್ತಿಗೆ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ರೈತರು ಭಾಗಿಯಾಗಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧ್ಯಕ್ಷ ರಾಮಯ್ಯ ಜವಳಗೇರಾ ಮಾತನಾಡಿ ಹವಮಾನ ವೈಪರಿತ್ಯದಿಂದಾಗಿ ಭತ್ತ ಜೊಳ್ಳಾಗಿದೆ. ಸೂಕ್ತ ಬೆಲೆಯಿಲ್ಲದೇ ಇದ್ದಾಗ ಖರೀದಿ ಕೇಂದ್ರಗಳು ಸಹ ಪ್ರಾರಂಭವಾಗಿಲ್ಲ. ಭತ್ತ ಬೆಳೆದ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ತುಂಗಭದ್ರ ಅಚ್ಚುಕಟ್ಟು ಪ್ರದೇಶಕ್ಕೆ ಎರಡನೇ ಬೆಳೆಗೆ ನೀರು ಇಲ್ಲ. ಬೆಳೆದ ಭತ್ತಕ್ಕೆ ಬೆಲೆಯೂ ಇಲ್ಲದೇ ದಯನೀಯ ಸ್ಥಿತಿಯಲ್ಲಿದ್ದು ಸರ್ಕಾರ ಕೂಡಲೇ ಭತ್ತ ಖರೀಧಿ ಕೇಂದ್ರ ಸ್ಥಾಪಿಸಿ ನೆರವಿಗೆ ಬರಬೇಕೆಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಖಾಲಿ ಭರವಸೆ; ರೈತರನ್ನು ಮೋಸಗೊಳಿಸಿದ ಕಾಂಗ್ರೆಸ್ ಸರಕಾರ: ಶಾಸಕ ಶಿವರಾಜ ಪಾಟೀಲ ಟೀಕೆ

ಈ ಸಂದರ್ಬದಲ್ಲಿ ಸಂಘಟನೆ ಪದಾಧಿಕಾರಿಗಳಾದ ತಿಮ್ಮಪ್ಪ ಭೋವಿ, ಚನ್ನಪ್ಪ ಹುಣಸಿಹಾಳ ಹುಡಾ, ವೆಂಕಟೇಶ ಸಂತೆಕಲ್ಲೂರು, ಲಾಲಸಾಬ ನಾಡಗೌಡ, ಇನ್ನಿತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...