ರಾಯಚೂರು | ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ; ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

Date:

ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟಿ ಮತ್ತು ಲರ್ನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಉದ್ಘಾ ಟಿಸಿ ಮಾತನಾಡಿದರು. ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ನೀಡುತ್ತಿದ್ದು, ಇದು ವಿದ್ಯಾರ್ಥಿಗಳ ಜೀವನದಲ್ಲಿ ಮುಖ್ಯ ಘಟ್ಟವಾಗಿದೆ, ಉದ್ಯೋಗ ಅವಕಾಶ ಮಾಹಿತಿ ಪಡೆದುಕೊಂಡು ತಮ್ಮ ಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಈ ಕೇಂದ್ರವನ್ನು ಸ್ಥಾಪಿಸಿದ್ದು, ಜಿಲ್ಲೆಯ ಪದವಿ ಹಂತದ ಯುವಕರು, ಯುವತಿಯರು ಹಾಗೂ ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಲು ಸಂಸ್ಥೆ ಮುಂದೆ ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕರು ಯವತಿಯರಿಗೆ ತರಬೇತಿ ಮತ್ತು ಉದ್ಯೋಗ ಮೇಳದಲ್ಲಿ ಭಾಗವಹಿಸಲು ತರಬೇತಿ ನೀಡಲು ಆಯೋಜಿಸಿದೆ. ಇದು ಕೋವಿಡ್ ಸಂದರ್ಭದಲ್ಲಿ ಬಂದ್ ಮಾಡಲಾಗಿತ್ತು. ಇದೀಗ ಸಂಸ್ಥೆವೊಂದು ಮುಂದೆ ಬಂದಿದೆ. ಈ ಸಂಸ್ಥೆಯಿಂದ ಸಿಎಸ್‌ಆರ್ ಅನುದಾನದಡಿ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟಿ ಮತ್ತು ಲರ್ನಿಂಗ್ ಆರಂಭಿಸಿದೆ. ಈ ಸಂಸ್ಥೆ ಸಾಕಷ್ಟು ತರಬೇತಿ ನೀಡಿದ್ದಾರೆ. ಒಂದು ಉತ್ತಮ ವೇದಿಕೆ ಒದಗಿಸಿದೆ. ಇಲ್ಲಿ 25 ಕಂಪ್ಯೂಟರ್ ವ್ಯವಸ್ಥೆ ಮಾಡಿದ್ದು, ಪ್ರತಿದಿನ ಇಲ್ಲಿಗೆ ಬಂದು ತರಬೇತಿ ಮತ್ತು ಮಾಹಿತಿ ಪಡೆದುಕೊಳ್ಳಲು ತಿಳಿಸಿದರು.

ಉದ್ಯೋಗದಾರಿತ ಮಾಹಿತಿ ನೀಡುತ್ತಿದೆ, ಬೇರೆ ಕಡೆ ಹೋಗಿ ಕೆಲಸ ಮಾಡಲು ಅವಕಾಶಗಳಿದ್ದು, ಇಲ್ಲಿ ಮಾಹಿತಿ ಮತ್ತು ತರಬೇತಿ ಪಡೆಯಬಹುದಾಗಿದೆ. ಉತ್ತಮ ಕೆಲಸವನ್ನು ಪಡೆಯುವುದರ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ, “ಮಹಿಳೆಯರು ಜೀವನದ ಮುಂದೆ ಬರಲು, ಇರುವ ಅವಕಾಶ ಹುಡಿಕೊಂಡು ಹೋಗಬೇಕು, ಇಲ್ಲಿಯೇ ಇದ್ದು ಏನು ಸಾಧಿಸಲಾರರು, ಬೇರೆ ಕಡೆ ಹೋಗಿ ಕೆಲಸ ಮಾಡಿದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ” ಎಂದರು.

“ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಇಲ್ಲಿಗೆ ಬಂದು ಮಾಹಿತಿ ಪಡೆಯುವುದರ ಜೊತೆಗೆ ಉದ್ಯೋಗದ ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕು. ಮಾಹಿತಿ ತಂತ್ರಜ್ಞಾನ ಬೆಳೆಯುತ್ತಿದೆ. ನಾವು ಬೆಳೆಯಬೇಕು. ರಾಜ್ಯದಲ್ಲಿ ಸಾಕಷ್ಟು ಅವಕಾಶಗಳಿವೆ, ತರಬೇತಿ ಮತ್ತು ಮಾಹಿತಿ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬಹುದು” ಎಂದರು.

“ಈ ಭಾಗದಲ್ಲಿ ಇಂಡಸ್ಟ್ರೀಸ್‌ಗಳಿದ್ದು ಹೆಚ್ಚಿನ ಆದ್ಯತೆ ಈ ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯಿಂದ ಸಾಕಷ್ಟು ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಮಾತನಾಡುವ ಕಲೆ ಬೆಳೆಸಿಕೊಳ್ಳಬೇಕು, ಮಾತೃಭಾಷೆಯ ಜೊತೆಗೆ ಇಂಗ್ಲಿಷ್ ಭಾಷೆ ಕಲಿತರೆ ಹೆಚ್ಚಿನ ಅವಕಾಶಗಳಿವೆ. ಕಂಪ್ಯೂಟರ್ ತರಬೇತಿ ಪಡೆಯಬೇಕು, ಉದ್ಯೋಗ ಕಲ್ಪಿಸುವ ಉದ್ದೇಶದಿಂದ ತರಬೇತಿ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಈರೇಶ ನಾಯಕ, ಸಂಸ್ಥೆಯ ಅಧಿಕಾರಿ ಪಂಕಜ್, ಬೆಂಗಳೂರು, ಲರ್ನಿಂಗ್ ಫೌಂಡೇಶನ್ ಮಂಜುನಾಥ ಸೇರಿದಂತೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...