ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಚಿವ, ಶಾಸಕರ ಮನೆಯ ಮುಂದೆ ತಮಟೆ ಚಳುವಳಿ

Date:

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲೆಯ ಎಲ್ಲಾ ಶಾಸಕರ ಮನೆಯ ಮುಂದೆ ಮಾದಿಗ ಮತ್ತು ಮಾದಿಗ ಉಪ ಜಾತಿಗಳ ಸಂಘಟನೆಗಳ ಒಕ್ಕೂಟ ವತಿಯಿಂದ ತಮಟೆ ಚಳುವಳಿ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ತಮಟೆ ಚಳುವಳಿ ಬೈಕ್ ಮೂಲಕ ಸಚಿವ ಎನ್.ಎಸ್. ಬೋಸರಾಜು , ನಗರ ಶಾಸಕ ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಮನೆಯ ಮುಂದೆ ತಮಟೆ ಚಳುವಳಿ ನಡೆಸಿ ಬಳಿಕ ಮನವಿ ಸಲ್ಲಿಸಿದರು.

ಆ.1 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿ ನಾಲ್ಕು ತಿಂಗಳಾದರೂ ರಾಜ್ಯ ಸರ್ಕಾರ ಅಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾಯ ಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿದ್ದು, ಬಿಟ್ಟರೆ ಬೇರೆ ಏನು ಮಾಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ, ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ಕೂಡ ಕೊಡದೆ ಕಾಲಹರಣ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

2011ರಲ್ಲಿ ಜನಗಣತಿಯ ಅಂಕಿ-ಅಂಶಗಳ ವರ್ಗೀಕರಣ ಮಾಡಿದರೂ ಕೂಡ ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಹಿಂತಿರುಗಿ ಅಂಕಿ ಅಂಶಗಳ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ಒಳಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ಆ ಭರವಸೆ ಜಾರಿಯಾಗಿಲ್ಲ. ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ನಡೆಯುತ್ತಿವೆ. ರಾಜ್ಯದಲ್ಲಿ ಒಳಮೀಸಲಾತಿಯನ್ನು ತಕ್ಷಣವೇ ಜಾರಿಗೆ ಕಾಂಗ್ರೆಸ್ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಪ್ರತಿಭಟನೆಯಲ್ಲಿ ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಸಂಘಟನೆಗಳ ಮುಖಂಡರುಗಳಾದ ರವೀಂದ್ರ ಜಲ್ದಾರ್, ಪಿ. ಯಲ್ಲಪ್ಪ, ಸುಭಾಷ್, ಶಂಶಾಲ, ಭೀಮಣ್ಣ ಮಂಚಾಲ್, ನಾಗರಾಜ, ರವಿ ಗಿಲ್ಲೆಸೂಗುರು, ರಂಜಿತ್ ದಂಡೋರಾ, ಶಾಂತಪ್ಪ ಮಿಡಗಲ್‌ದಿನ್ನಿ, ಎಂ.ಪಿ. ರೆಡ್ಡಿ ಗೋನ್ವಾರ್, ಅಶೋಕ ದುಗನೂರು, ದುಳ್ಳಯ್ಯ ಗುಂಜಹಳ್ಳಿ, ಜಕ್ರಪ್ಪ ಹಂಚಿನಾಳ, ಶರಣಪ್ಪ ಚಂದ್ರಬಂಡಾ, ಭೀಮೇಶ್ ತುಂಟಾಪೂರ, ದಾವೀದ್ ಮರ್ಚೆಟಾಳ, ನವೀನ್ ಕುಮಾರ ಉಪ್ರಾಳ, ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...