ರಾಯಚೂರು | ರೈತ ಮಾರುಕಟ್ಟೆ ಕರ ವಸೂಲಿಗೆ ಟೆಂಡರ್; ನಿಯಮ ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲು 

Date:

ಉಸ್ಮಾನೀಯ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ರೈತರ ಮತ್ತು ವ್ಯಾಪಾರಸ್ಥರಿಂದ ಕರ ವಸೂಲಿಗೆ ಟೆಂಡರ್ ಕರೆದಿದ್ದಾರೆ. ಕಾನೂನು ಬಾಹಿರ ಅನಧಿಕೃತ ತರಕಾರಿ ಮಾರುಕಟ್ಟೆಯನ್ನು ಸ್ಥಳಾಂತರಿಸಿದ ಮೇಲೆ ಟೆಂಡರ್ ಕರೆಯುವುದು ಸೂಕ್ತವಾಗಿದೆ. ರಾಯಚೂರು ನಗರಸಭೆಯು ನಿಯಮ ಮತ್ತು ಷರತ್ತುಗಳನ್ನು ಉಲ್ಲಂಘನೆ ಮಾಡಿದಲ್ಲಿ ಗುತ್ತೆದಾರರ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್ ಮಹಾವೀರ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ನಗರದ ಉಸ್ಮಾನೀಯ ತರಕಾರಿ ಮಾರುಕಟ್ಟೆ ಹಿಂಭಾಗದ ರೈತ ಮಾರುಕಟ್ಟೆಯಲ್ಲಿ ರೈತರಿಂದ ಹಾಗೂ ವ್ಯಾಪಾರಸ್ಥರಿಂದ ಕರವಸೂಲಿ ಮಾಡಲು ನಗರಸಭೆ ಟೆಂಡರ್ ಕರೆದಿದೆ. ರೈತ ಮಾರುಕಟ್ಟೆಯಲ್ಲಿ ರೈತರು, ವ್ಯಾಪಾರ ವಹಿವಾಟು ನಡೆಸುತ್ತಿಲ್ಲ. ಹಾಗೂ ತರಕಾರಿ ವ್ಯಾಪಾರಸ್ಥರು ರೈತ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿಲ್ಲ. ಕರವಸೂಲಿ ಗುತ್ತಿಗೆ ಪಡೆದ ಗುತ್ತೆದಾರರು ಯಾರಿಂದ ಕರ ವಸೂಲಿ ಮಾಡಬೇಕು” ಎಂದರು.

“ಕಳೆದ 9 ತಿಂಗಳುಗಳಿಂದ ಅನಧಿಕೃತ ತರಕಾರಿ ಮಾರುಕಟ್ಟೆಯನ್ನು ಸ್ಥಳಾಂತರಗೊಳಿಸಿ ಎಂದು ಜಿಲ್ಲಾಧಿಕಾರಿಗೆ, ಪೌರಾಯುಕ್ತರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ. ಹಿಂದಿನ ನಗರಸಭೆ ಪೌರಾಯುಕ್ತರು, ಎರಡು ತಿಂಗಳ ಹಿಂದೆ ಅನಧಿಕೃತ ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರು ಹಾಗೂ ರೈತರನ್ನು ಉಸ್ಮಾನೀಯ ಮಾರುಕಟ್ಟೆ ಹಿಂಭಾಗದಲ್ಲಿ ಕುಳಿತು ವ್ಯಾಪಾರ ಮಾಡಲು ಪ್ರಕಟಣೆ ನೀಡಿದ್ದರು. ಗುತ್ತೆದಾರರು ಹಾಗೂ ರೈತರು ಮತ್ತು ವ್ಯಾಪಾರಸ್ಥರು ನಗರಸಭೆ ಪೌರಾಯುಕ್ತರ ಆದೇಶಕ್ಕೆ ಮನ್ನಣೆ ನೀಡದೆ ಧಿಕ್ಕರಿಸಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾರ್ಚ್‌ 6ರಂದು ನಡೆಯುವ ಟೆಂಡರ್‌ನಲ್ಲಿ ನಿಯಮ ಷರತ್ತುಗಳನ್ನು ಪಾಲಿಸುವ ಗುತ್ತೇದಾರರಿಗೆ ಟೆಂಡರ್ ನೀಡಲಿ ಇಲ್ಲದಿದ್ದರೆ ಗುತ್ತಿಗೆದಾರರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುತ್ತದೆ. ಲೀಜ್ ಕಂ ನಿವೇಶನ ಹಂಚಿಕೆ ಪ್ರಕ್ರಿಯಲ್ಲಿ ತರಕಾರಿ ಮಾರಾಟಗಾರರು ನಿವೇಶನ ಹಂಚಿಕೆಗಾಗಿ ಮುಂಗಡ ಹಣ ಶೇ.25ರಷ್ಟು ಹಣ ಕಟ್ಟಲಾಗಿತ್ತು. ಆದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಲೀಜ್ ಕಂ ನಿವೇಶನ ಹಂಚಿಕೆ ತಡೆ ಹಿಡಿದಿದ್ದು ಸಮಂಜಸವಲ್ಲ” ಎಂದರು.

“6 ತಿಂಗಳ ಹಿಂದೆ ಕಾನೂನಾತ್ಮಕವಾಗಿ ನಿವೇಶನ ಹಂಚಿಕೆಯಾಗಿದೆ. 2004ರಲ್ಲಿ ಚದರ ಅಡಿಗೆ ₹80ರಂತೆ ನಿಗಧಿಪಡಿಸಿ ಅಂದು ನಿವೇಶನ ಹಂಚಿಕೆ ಮಾಡಿದೆ. 200 ಚದರ ಅಡಿಗೆ ನಿವೇಶನ ಹಂಚಿಕೆಗೆ ಅಂದಿನ ಕೃಷಿ ನಿರ್ದೇಶಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಜನಾಂಗದ ನ್ಯಾಯಾಲಯದಲ್ಲಿ ನಿವೇಶನ ಹಂಚಿಕೆಗೆ ಒಪ್ಪಿಕೊಂಡಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ಕುತಂತ್ರ ನಡೆಸುತ್ತಿದೆ: ಮುಖ್ಯಮಂತ್ರಿ ಚಂದ್ರು

“ಸಚಿವರು ಕೂಡಲೇ ಪ್ರತಿ ಚದರ ಅಡಿಗೆ ₹200ರಂತೆ ಒಪ್ಪಿಗೆ ಸೂಚಿಸಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಿಗೆ ಕಾರ್ಯದರ್ಶಿಗೆ ನಿವೇಶನ ಹಂಚಿಕೆಗೆ ಸೂಕ್ತ ನಿರ್ದೇಶನ ನೀಡಬೇಕು. ಇಲ್ಲದಿದ್ದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗುವುದು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಭು ನಾಯಕ, ರಿಜ್ವಾನ್, ಬಸವರಾಜ, ಉದಯ ಕುಮಾರ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...