ರಾಯಚೂರು | ರಿ-ಬೂಟ್ ಹೆಸರಿನಲ್ಲಿ ನಗರದ ಸಮಗ್ರ ಅಭಿವೃದ್ದಿ ಅಸಾಧ್ಯ; ಜೆಡಿಎಸ್ ಜಿಲ್ಲಾಧ್ಯಕ್ಷ ಆರೋಪ

Date:

ರಿ-ಬೂಟ್ ಹೆಸರಿನಲ್ಲಿ ರಾಯಚೂರು ನಗರದ ಸಮಗ್ರ ಅಭಿವೃದ್ದಿ ಮಾಡುವುದಾಗಿ ಹೇಳುವ ಸಚಿವ ಎನ್ ಎಸ್ ಬೋಸರಾಜು ಅವರು ಜನರ ಕಣ್ಣೋರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರುಪಾಕ್ಷಿ ಆರೋಪಿಸಿದರು.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಗರದ ಸಮಗ್ರ ಅಭಿವೃದ್ಧಿಗೆ ಹೊಸ ವಿನ್ಯಾಸದ ವರದಿಯನ್ನು ನೀಡಿದ್ದು, ರಿ-ಬೂಟ್ ರಾಯಚೂರು ಪರಿಕಲ್ಪನೆಯೊಂದಿಗೆ 20 ಸಾವಿರ ಎಕರೆ ಪ್ರದೇಶದ ಅಭಿವೃದ್ಧಿ ಮಾಡಲು ಮುಂದಾಗಿರುವ ಸಚಿವ ಎನ್ ಎಸ್ ಬೋಸರಾಜು ಅವರ ದೂರದೃಷ್ಟಿ ಸ್ವಾಗತಾರ್ಹ. ಅದರೆ ಸರ್ಕಾರ ಎಲ್ಲ ಅನುದಾನವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡುತ್ತಿದ್ದು, ಇದಕ್ಕೆ ಅನುದಾನ ನೀಡಲು ಅಸಾಧ್ಯ” ಎಂದರು.

“ಅಭಿವೃದ್ಧಿ ಕೆಲಸಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಕೂಡಿಕೊಂಡು ಕೆಲಸ ಮಾಡದೆ ತಾವೇ ಉಸ್ತುವಾರಿ ಎಂದು ಬೀಗಿ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಮಾಡುವುದು ಸಲ್ಲ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಆಯ್ಕೆಯಾಗದೇ ಇರುವವರಿಗೆ ಸಚಿವ ಸ್ಥಾನ ನೀಡಿದ್ದು, ಕಾಂಗ್ರೆಸ್‌ ಸಚಿವರಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ. ಇದನ್ನು ಮೊದಲು ಬಗೆ ಹರಿಸಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವ ಎನ್ ಎಸ್ ಬೋಸರಾಜು ಅವರು ತಾವೇ ಉಸ್ತುವಾರಿ ಸಚಿವರಂತೆ ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿದ್ದು, ಮತ್ತೊಂಡೆದೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತೇಕ ಸಭೆಗಳು ಮಾಡುತ್ತಿದ್ದಾರೆ. ಇದರ ಜೊತೆಗೆ ಯಾವುದೇ ಜನಪ್ರತಿನಿಧಿಯಲ್ಲದ ಬೋಸರಾಜರ ಮಗ ರವಿ ಬೋಸರಾಜು ಅಧಿಕಾರಿಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ರಿ-ಬೂಟ್ ಹೆಸರಿನಲ್ಲಿ ನಗರ ಸಮಗ್ರ ಅಭಿವೃದ್ಧಿಗೆ ಸಚಿವ ಬೋಸರಾಜು ಮುಂದಾಗಿದ್ದು, 20 ಸಾವಿರ ಎಕರೆಯಲ್ಲಿ ಅಭಿವೃದ್ಧಿ ಮಾಡಲು ವರದಿ ನೀಡಿದ್ದು, ಜಿಲ್ಲೆಯ ಜನರ ಕಿವಿಗೆ ಹೂ ಇಡುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅನುದಾನವಿಲ್ಲ. ಇನ್ನು ಇಂತಹ ದೊಡ್ಡ ಗಾತ್ರದ ಯೋಜನೆಗೆ ಸರ್ಕಾರ ಅನುದಾನ ಕೊಡಲು ಸಾಧ್ಯವೇ?” ಎಂದರು.

“ಜಿಲ್ಲೆಯ ಜನರಿಗೆ ಅಭಿವೃದ್ಧಿ ಹೆಸರಿನಲ್ಲಿ ಮೊಸ ಮಾಡಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಬಣ ರಾಜಕೀಯದಲ್ಲಿ ಜಿಲ್ಲೆಯ ಅಭಿವೃದ್ಧಿ ಅಸಾಧ್ಯವಾಗಿದೆ. ಉಸ್ತುವಾರಿ ಸಚಿವ ಶರಣ ಪ್ರಕಾಶ ಜೊತೆಗೆ ಕಾಂಗ್ರೆಸ್‌ನ 3 ಮಂದಿ ಶಾಸಕರು ಮತ್ತು ಎನ್ ಎಸ್ ಬೋಸರಾಜು ಅವರ ಬಣದ ರಾಜಕೀಯ ನಡೆದಿದೆ. ಶಾಸಕರಲ್ಲದವರಿಗೆ ಮಂತ್ರಿ ಸ್ಥಾನ ನೀಡಿದರ ಬಗ್ಗೆ ಅಸಮಾನವಿದೆ. ಜೊತೆಗೆ ಯಾವುದೇ ಶಾಸಕರಿಗೆ ಸರ್ಕಾರದ ಅನುದಾನ ನೀಡುವುದಿಲ್ಲವೆಂದು ತಿಳಿಸಿದೆ. ಇದರ ಮಧ್ಯೆ ಜಿಲ್ಲೆಯ ಅಭಿವೃದ್ಧಿ ಶ್ಯೂನ್ಯವಾಗಿದೆ” ಎಂದರು.

“ನಗರ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ರಸ್ತೆಗಳು, ಕಾಲುವೆಗಳು, ಸೇತುವೆಗಳು ಹಾಳಾಗಿ ಹೋಗಿವೆ. ಸ್ವಚ್ಛತೆ ಮರೆಯಾಗಿದೆ. ಜೊತೆಗೆ ಕಾರ್ಮಿಕರಿಗೆ ವೇತನ ನೀಡಿಲ್ಲ. ಸಾಕಷ್ಟು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕಿದೆ” ಎಂದರು.

“ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ 11 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದು, ದಲಿತರು ಅಭಿವೃದ್ಧಿಯಾಗಬಾರದು ಎನ್ನುವ ಉದ್ದೇಶ ಹೊಂದಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಎಸ್‌ಸಿಎಸ್‌ಪಿ/ಟಿಎಸ್‌ಪಿ ವಾಪಸ್ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ ಎಚ್ಚರಿಕೆ

“ರವಿ ಬೋಸರಾಜ ಅವರು ದೇವದುರ್ಗ ತಾಲೂಕಿನ ಬಾಗೂರಿನಲ್ಲಿ ಅಕ್ರಮ ಮರಳು ಸಾಗಾಣೆಗೆ ಮುಂದಾಗಿದ್ದಾರೆ. ಬಾಬು ಎನ್ನುವ ಗುತ್ತಿಗೆದಾರರ ಮೂಲಕ ಅಕ್ರಮ ಮರಳು ಸಾಗಾಣೆ ಮಾಡುತ್ತಿದ್ದಾರೆ” ಎಂದು ದೂರಿದರು.

“ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಜಿಲ್ಲೆಗೆ 2 ಬಾರಿ ಉಸ್ತುವಾರಿ ಸಚಿವರಾಗಿದ್ದು, ಅವರಿಂದ ಯಾವುದೇ ಅಭಿವೃದ್ಧಿ ಅಸಾಧ್ಯ. ತಿಂಗಳಿಗೊಮ್ಮೆ ಬಂದು ಹಣ ಲೂಟಿ ಮಾಡಿ ಸೂಟ್‌ಕೇಸ್ ತುಂಬಿಕೊಂಡು ಹೋಗುವ ಸಚಿವರಾಗಿದ್ದಾರೆ. ಇವರ ಜೊತೆಗೂಡಿ ಕಾಂಗ್ರೆಸ್ ಶಾಸಕರು ಬಣ ರಾಜಕೀಯ ಮಾಡುತ್ತಿದ್ದಾರೆ. ಇವರಿಂದ ಜಿಲ್ಲೆಯ ಅಭಿವೃದ್ಧಿ ಅಸಾಧ್ಯ” ಎಂದರು.

ಈ ಸಂದರ್ಭದಲ್ಲಿ ಶಿವಶಂಕರ ವಕೀಲ, ವಿಶ್ವನಾಥ ಪಟ್ಟಿ ಸೇರಿ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...