ರಾಯಚೂರು | ಐದು ಅಂಶಗಳ ಪ್ರಗತಿ; ಜಿಲ್ಲೆಗೆ ದೇಶದಲ್ಲಿಯೇ ಮೊದಲ ಸ್ಥಾನ: ಜಿಲ್ಲಾಧಿಕಾರಿ

Date:

ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಸೇರಿದಂತೆ ಐದು ಅಂಶಗಳ ಪ್ರಗತಿಯ ಆಧಾರದ ಮೇಲೆ ನೀತಿ ಆಯೋಗ ದೇಶದಲ್ಲಿಯೇ ರಾಯಚೂರು ಜಿಲ್ಲೆಗೆ ಮೊದಲ ಸ್ಥಾನ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.

ರಾಯಚೂರು ನಗರದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, “ನೀತಿ ಆಯೋಗ ಪ್ರತಿ ತಿಂಗಳು ಮಾಹಿತಿಯನ್ನು ಕ್ರೋಢೀಕರಣ ಮಾಡುತ್ತದೆ. ಐದು ಅಂಶಗಳಲ್ಲಿಯೂ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಜೂನ್ ತಿಂಗಳ ಮಾಹಿತಿ ಆಧಾರಿಸಿ ಎಲ್ಲದರಲ್ಲಿಯೂ ಮೊದಲ ಸ್ಥಾನ ರಾಯಚೂರು ಜಿಲ್ಲೆಯಿದ್ದು, ಜಿಲ್ಲೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದೆ. 10 ಕೋಟಿ ವಿಶೇಷ ಅನುದಾನ ಬಳಕೆಯ ಕುರಿತು ಸಂಬಂಧಿಸಿದ ಇಲಾಖೆಗಳಿಗೆ ಬೇಕಿರುವ ಅಗತ್ಯತೆ ಆಧಾರದ ಮೇಲೆ ಕ್ರಿಯಾ ಯೋಜನೆ ರೂಪಿಸಿ, ಕೇಂದ್ರಕ್ಕೆ ರವಾನಿಸಲಾಗುತ್ತದೆ. ಕ್ರಿಯಾ ಯೋಜನೆ ಅನುಮೋದನೆ ನಂತರವಷ್ಟೇ ಅನುದಾನ ಬಿಡುಗಡೆಯಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಆರೋಗ್ಯ ಮತ್ತು ಪೌಷ್ಠಿಕತೆ, ಶಿಕ್ಷಣ, ಕೃಷಿ ಮತ್ತು ನೀರಿನ ಸಂಪನ್ಮೂಲ ಬಳಕೆ, ಆರ್ಥಿಕ ಅಭಿವೃದ್ದಿ ಮತ್ತು ಕೌಶಲ್ಯಾಭಿವೃದ್ದಿ, ಮೂಲಭೂತ ಸೌಕರ್ಯಗಳಲ್ಲಿ ಜೂನ್ ತಿಂಗಳಲ್ಲಿ ಆಗಿರುವ ಬದಲಾವಣೆಗೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳ ಶ್ರಮವಿದೆ. ಎಲ್ಲವೂ ಅಭಿವೃದ್ದಿಯಾಗಿದೆ ಎಂದು ಹೇಳಲಾಗದೇ ಇದ್ದರೂ ಬದಲಾವಣೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲಾ ಕಟ್ಟಡ, ಮೂಲಭೂತ ಸೌಕರ್ಯ ಸೇರಿದಂತೆ ಆಯಾ ಇಲಾಖೆ ಯೋಜನೆಗಳ ಅನುಷ್ಠಾನದಲ್ಲಿ ಏರಿಕೆ ಕಂಡಿದೆ. ಇನ್ನೂ ಇರುವ ನ್ಯೂನತೆಗಳನ್ನು ಸರಿಪಡಿಸಿಕೊಂಡು ಕೆಲಸ ಮಾಡಬೇಕಿದೆ. ನೀತಿ ಆಯೋಗದಿಂದ ಲಭ್ಯವಾಗುವ 10 ಕೋಟಿ ರೂ. ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಳಸಿಕೊಳ್ಳುವ ಆದ್ಯತೆಯನ್ನಿಟ್ಟುಕೊಳ್ಳಲಾಗಿದೆ.” ಎಂದು ಹೇಳಿದರು.

ಮಹತ್ವಾಕಾಂಕ್ಷೆ ಜಿಲ್ಲೆಯೆಂದು ಗುರುತಿಸಿರುವ ಜಿಲ್ಲೆಯಲ್ಲಿ ಕೈಗಾ, ಹಟ್ಟಿ, ಕೆಪಿಸಿ ಸೇರಿದಂತೆ ಅನೇಕ ಕಂಪನಿಗಳು, ಉದ್ಯಮಗಳು ನೆರವಿಗೆ ಬಂದಿವೆ. ಜಿಲ್ಲೆಯ ಅಭಿವೃದ್ದಿ ಬದಲಾವಣೆಗೆ ಎಲ್ಲರ ಸಹಕಾರವೂ ಅಗತ್ಯವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರವಾಗಬೇಕು: ಶಾಸಕ ದೇವೇಂದ್ರಪ್ಪ

“ಜಿಲ್ಲೆಯಲ್ಲಿ ನಡೆದಿರುವ ಗಣಿ ಇಲಾಖೆ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಹಿಂದಿರುವ ಶಕ್ತಿಗಳಿಗೂ ಶಿಕ್ಷೆ ವಿಧಿಸಲು ಕ್ರಮ ವಹಿಸಲಾಗುತ್ತದೆ. ಇಂತಹ ಘಟನೆ ಮರುಕಳಿಸದಂತೆ ತಡೆಯಲು ಬೇಕಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಡಿಸಿ ದುರಗೇಶ ಸೇರಿದಂತೆ ಇತರೆ ಅಧಿಕಾರಿಗಲು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...