ರಾಯಚೂರು | ಬಿಸಿಲ ಝಳ ತಾಳದೇ ವೃದ್ಧ ಸಾವು

Date:

ಇಡೀ ರಾಜ್ಯದಲ್ಲಿ ಬಿಸಿಲಿನ ವಾತಾವರಣವಿದ್ದು, ಉತ್ತರ ಕರ್ನಾಟಕವಂತೂ ಕಾದ ಹಂಚಾಗಿದೆ. ರಾಯಚೂರಿನಲ್ಲಿ ಬಿಸಿಲ ಝಳ ತಾಳಲಾರದೇ ವೃದ್ದರೊಬ್ಬರು ಭಾನುವಾರ ಮೃತ ಬಿಟ್ಟಿದ್ದಾರೆ. ವಾರದ ಹಿಂದೆಯಷ್ಟೇ ರಾಯಚೂರು ಜಿಲ್ಲೆಯಲ್ಲಿಯೇ ವ್ಯಕ್ತಿಯೊಬ್ಬರು ಬಿಸಿಲಿನಿಂದ ಮೃತಪಟ್ಟಿದ್ದರು.

ತಿಂಗಳ ಅಂತರದೊಳಗೆ ರಾಯಚೂರು ಜಿಲ್ಲೆಯಲ್ಲಿ ಬಿಸಿಲಿಗೆ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ರಾಯಚೂರು ನಗರದ ನಿವಾಸಿ ರಾಮಣ್ಣ ಕಬ್ಬೇರ್‌ ಎಂಬುವವರು ಭಾನುವಾರ ಬಿಸಿಲಿನಿಂದ ಬಳಲಿ ಮೃತಪಟ್ಟಿದ್ದು, ಅವರಿಗೆ 70 ವರ್ಷ ವಯಸ್ಸಾಗಿತ್ತು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ರಾಯಚೂರಿನ ಗೋಶಾಲಾ ರಸ್ತೆಯಲ್ಲಿರುವ ಯಕ್ಲಾಸಪುರ ಬಡಾವಣೆ ನಿವಾಸಿಯಾದ ರಾಮಣ್ಣ ಅವರು ಭಾನುವಾರ ಬೆಳಿಗ್ಗೆ ಬಿಸಿಲಿನಲ್ಲಿ ನಡೆದು ಹೊರಟಿದ್ದರು. ನಿಶ್ಯಕ್ತಿಗೆ ಒಳಗಾಗಿ ತಲೆ ಸುತ್ತಿನಿಂದ ಏಕಾಏಕಿ ರಸ್ತೆ ಬದಿಯಲ್ಲಿ ಮಲಗಿದ್ದರು. ಕುಸಿದು ಬಿದ್ದವರು ಅಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ಕುಟುಂಬದವರು ಆಗಮಿಸಿದರೂ, ಅಷ್ಟರಲ್ಲಾಗಲೇ ರಾಮಣ್ಣ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಜರು ಕಾರ್ಯ ನಡೆಸಿದ ರಾಯಚೂರು ನಗರ ಪೊಲೀಸರು, ನಂತರ ಕುಟುಂಬದವರಿಗೆ ರಾಮಣ್ಣ ದೇಹವನ್ನು ಹಸ್ತಾಂತರಿಸಿದ್ದಾರೆ. ರಾಯಚೂರು ನಗರದಲ್ಲಿ ಒಂದೂವರೆ ತಿಂಗಳಿನಿಂದ ಬಿಸಿಲಿನ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲೇ ಇದೆ. ಕೆಲದಿನಗಳಿಂದ ಬಿಸಿಲು ಇನ್ನೂ ಹೆಚ್ಚಿದ್ದು, ಬಿಸಿ ಗಾಳಿಯೂ ಬೀಸುತ್ತಿದೆ. ಇದರಿಂದ ಜನ ಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ.

ಬೆಳಗ್ಗೆ 11ರ ನಂತರ ಹೊರಗೆ ಬರಬೇಡಿ ಎಂದು ಜನರಿಗೆ ತಿಳವಳಿಕೆ ನೀಡಲಾಗುತ್ತಿದೆ. ಆದರೂ, ಸಣ್ಣಪುಟ್ಟ ಕೆಲಸದ ಕಾರಣಕ್ಕೆ ಹೊರಗೆ ಬರುವವರ ಸಂಖ್ಯೆ ಹೆಚ್ಚಿದೆ. ವಯಸ್ಸಾದವರು ಹೊರ ಬಂದು ಸಂಕಷ್ಟಕ್ಕೆ ಸಿಲುಕುವುದು ಹೆಚ್ಚಿದೆ.

ಕಳೆದವಾರ ಲಿಂಗಸುಗೂರಿನ ಬಸ್‌ ನಿಲ್ದಾಣದ ಆವರಣದಲ್ಲಿ ವ್ಯಕ್ತಿಯೊಬ್ಬ ಬಿಸಿಲಿನಿಂದ ಮೃತಪಟ್ಟ ಘಟನೆ ನಡೆದಿತ್ತು. ಮಸ್ಕಿ ತಾಲೂಕಿನ ಆನಂದಗಲ್ಲ ಗ್ರಾಮದ ಕೃಷ್ಣಪ್ಪ ಬಳ್ಳಾರೆಪ್ಪ ಎಂಬಾತ ಬಿಸಿಲಿನಿಂದ ಬಳಲಿ ನಿಲ್ದಾಣದಲ್ಲಿ ಕುಳಿತಲ್ಲೇ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ, ರಾಯಚೂರು, ಬಾಗಲಕೋಟೆ, ಬೀದರ್‌, ವಿಜಯಪುರ, ಬಳ್ಳಾರಿ, ಗದಗ, ಕೊಪ್ಪಳ ಸಹಿತ ಹಲವು ಜಿಲ್ಲೆಗಳಲ್ಲಿ ಬಿಸಿಲಿನಿಂದ ಬಳಲಿ ನಿರ್ಜಲೀಕರಣಕ್ಕೆ ಅಸ್ವಸ್ಥರಾಗುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇನ್ನೂ ಮೂರರಿಂದ-ನಾಲ್ಕು ದಿನಗಳ ಕಾಲ ಬಿಸಿ ಗಾಳಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಲಿದೆ ಎಂದು, ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...