ರಾಯಚೂರು | ಜಗತ್ತೇ ಇಂಟರ್‌ನೆಟ್ ಜಾಲದಲ್ಲಿ ತೇಲುತ್ತಿದೆ, ಎಚ್ಚರಿಕೆಯಿಂದ ಬಳಸಿ:ಇಂಟರ್‌ನೆಟ್

Date:

ಜಗತ್ತು ಇಂಟರ್‌ನೆಟ್‌ ಎಂಬ ಜಾಲದಲ್ಲಿ ಮುಳುಗಿದ್ದು, ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಈ ಜಾಲತಾಣವು ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್‌ನೆಟ್‌ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಲಹೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ವಿಶ್ವ ಸುರಕ್ಷಿತ ಅಂತರ್ಜಾಲ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಮೊಬೈಲ್‌ನಲ್ಲಿ ಹಲವು ಆನ್‌ಲೈನ್ ವ್ಯವಹಾರವನ್ನು ಮಾಡುತ್ತಿದ್ದೇವೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡು ಹಲವು ವಂಚಕರು ದುರುಪಯೋಗಪಡಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಹಾಗಾಗಿ ಒಟಿಪಿ ಇನ್ನಿತರ ಕೋಡ್‌ಗಳನ್ನು ಅನ್ಯರಿಗೆ ನೀಡದೆ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೆ ನೇರವಾಗಿ ವಂಚನೆಗಳು ದರೋಡೆ, ಕಳ್ಳತನ ಇಂತಹ ವಂಚನೆಗಳಾಗುತ್ತಿದ್ದವು. ಆದರೆ ಈಗ ಆನ್‌ಲೈನ್ ಮೂಲಕ ಉದ್ಯೋಗಾವಕಾಶ, ಹಣಕಾಸು, ವೈಯಕ್ತಿಕ ಮಾಹಿತಿ, ದಾರಿತಪ್ಪಿಸುವ, ಸುಳ್ಳು, ಟ್ರೋಲ್, ಬೆದರಿಕೆ, ಕಿರುಕುಳ, ಅನಿಯಂತ್ರಿತ ವೆಚ್ಚಗಳು, ಸ್ಕ್ಯಾಮ್ ಹೀಗೆ ಹಲವು ರೀತಿಯ ಅಪರಾಧಗಳು ನಡೆಯುತ್ತಿವೆ. ಯಾವುದೇ ಆನ್‌ಲೈನ್ ಅಥವಾ ಸೈಬರ್ ಅಪರಾಧಗಳಾದಾಗ ಸಂಬಂಧಿಸಿದವರಿಗೆ ಕರೆಮಾಡಿ ದೂರು ದಾಖಲಿಸಬಹುದು” ಎಂದರು.

“ಯಾವುದೇ ಬ್ಯಾಂಕ್‌ಗಳು ಕರೆ ಮಾಡಿ ಒಟಿಪಿಯನ್ನು ಕೇಳುವುದಿಲ್ಲ. ಬೇರೆ ಅನ್ಯತಾ ಕಾಲ್ ಬಂದರೆ ಯಾರಿಗೂ ಅನಗತ್ಯ ಒಟಿಪಿ ನೀಡುವ ಕೆಲಸವನ್ನು ಮಾಡಬೇಡಿ. ಪ್ರತಿಯೊಬ್ಬರೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಬಳಸುವ ಪ್ರತಿಯೊಬ್ಬರಿಗೂ ಸುರಕ್ಷಿತ ಬಳಕೆಯ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಸದ್ಯ ಕಚೇರಿ ಕೆಲಸಗಳನ್ನು ಕುಳಿತಲ್ಲಿಂದಲೇ ಮಾಡುವ ಪರಿಣಿತಿಯನ್ನು ಹೊಂದಿದ ಬಳಕೆದಾರರು ಅನೇಕರಿದ್ದಾರೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಬಳಕೆ ಮತ್ತು ಅದರ ಉಪಯೋಗವಾಗುತ್ತಿದೆ. ಆದರೆ ಇಷ್ಟೆಲ್ಲ ಲಾಭದ ಮಧ್ಯೆಯೂ ತೊಂದರೆಯನ್ನೂ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಧ್ವಾನದ ಆಗರ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆ

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ಹಾಗೂ ಪೊಲೀಸ್ ಇಲಾಖೆಯ ಸೈಬರ್ ಘಟಕದ ನಿರ್ದೇಶಕ ರವಿಶೇಖರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಂದ್ರ ಬಾಬು, ಆಯುಷ್ ಇಲಾಖೆಯ ಅಧಿಕಾರಿ ಡಾ. ಶಂಕರಗೌಡ ಎಸ್ ಪಾಟೀಲ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೃಷ್ಣ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ನಂದಿತಾ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ಮಹ್ಮದ್ ಶಾಕೀರ ಮೊಹಿಯುದ್ದೀನ್, ಸೈಬರ್ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ರಾಜಕುಮಾರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...