ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

Date:

ಇತ್ತೀಚಿನ ಕಾಲಘಟ್ಟದಲ್ಲಿ ಕನ್ನಡ ಸಾಹಿತ್ಯದ ಹಾದಿ ಬೇರೆಡೆಯೇ ಸಾಗುತ್ತಿದೆ. ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸ ಮಾಡಬೇಕಿದೆ. ಕನ್ನಡ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ, ಕನ್ನಡ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಸಾಗಿಸುವಂತಹ ಚಿಂತನೆಯಾಗಬೇಕಿದೆ ಎಂದು ರಾಯಚೂರಿನ ಹಿರಿಯ ಸಾಹಿತಿ ಶಾಶ್ವತಯ್ಯಸ್ವಾಮಿ ಮುಕ್ಕುಂದಿ ಮಠ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನದಲ್ಲಿ ವಿಮಾಬಾಯಿ ಭಗತ್‌ರಾಜ್ ನಿಜಾಮಕಾರಿ ಪ್ರತಿಷ್ಠಾನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಆಯೋಜಿಸಿದ್ದ ʼಬಿ.ಟಿ ಲಲಿತಾ ನಾಯಕ ಅವರಿಗೆ ಪ್ರೇರಣಾ ಪ್ರಶಸ್ತಿʼ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಗತ್‌ರಾಜ್ ನಿಜಾಮಕಾರರು ಅನೇಕ ವರ್ಷಗಳಿಂದ ಪ್ರೇರಣಾ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಸಾಹಿತ್ಯವನ್ನ ಬೆಳೆಸಬೇಕು ಎನ್ನುವ ಅವರ ಆಸಕ್ತಿ ಇಳಿ ವಯಸ್ಸಿನಲ್ಲೂ ಕಡಿಮೆಯಾಗಿಲ್ಲ. ತಮ್ಮ ಪತ್ನಿಯ ಹೆಸರಿನಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರೇರಣಾ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. ಅವರ ಈ ನಡೆ ಕನ್ನಡ ಸಾಹಿತ್ಯಾಸಕ್ತಿದಾರರಿಗೆ ಮತ್ತಷ್ಟು ಪ್ರೇರಣೆ ನೀಡಲಿದೆ” ಎಂದರು.

ಡಾ. ಸ್ವಾಮಿರಾವ್ ಕಲಬುರಗಿ ಮಾತನಾಡಿ, “ಕನ್ನಡ ಸಾಹಿತ್ಯ ಎತ್ತ ಸಾಗುತ್ತಿದೆ ಅರಿಯದಾಗಿದೆ. ಇಂದಿನ ಪೀಳಿಗೆಗೆ ಕನ್ನಡ ಸಾಹಿತ್ಯದ ಓದು ಬೇಡವಾಗಿದೆ. ಜಾತಿ, ಧರ್ಮ, ಮತ, ಪಂತ, ಪಂಗಡ ಮೀರಿ ಸಾಹಿತ್ಯ, ವೈಚಾರಿಕ ಚಿಂತನೆಗಳ ಮೂಲಕ ಕನ್ನಡ ಕನಸುಗಳನ್ನು ಕಟ್ಟಬೇಕಿದೆ. ಸಮಾಜದಲ್ಲಿ ಸಜ್ಜನರು ಸುಮ್ಮನಿದ್ದರೆ ದುರ್ಜನರು ಘರ್ಜಿಸುತ್ತಾರೆ. ಅನ್ಯಾಯ, ಅನೀತಿಯನ್ನು ಪ್ರತಿಭಟಿಸುವ ಶಕ್ತಿಯನ್ನು ಸಜ್ಜನರ ವರ್ಗ ಕಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ 17 ಕನ್ನಡ ಪ್ರತಿಷ್ಠಾನಗಳು ಕೆಲಸ ಮಾಡುತ್ತಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಒಂದೂ ಇಲ್ಲ. ಬಿಜಾಪುರದಲ್ಲಿ 4, ಬೆಂಗಳೂರಿನಲ್ಲಿ 8, ಧಾರವಾಡದ 6 ಪ್ರತಿಷ್ಠಾನಗಳಿಗೆ ಸರ್ಕಾರವೇ ಧನ ಸಹಾಯ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರವಾಗಿದೆ, ಶರಣರು, ಜೈನರು, ದಾಸರ ಬೀಡಾಗಿದೆ. ಈ ಭಾಗದಲ್ಲಿ ಪ್ರತಿಷ್ಠಾನ ಮಾಡಲು ರಾಜಕಾರಣಿಗಳು ಮನಸ್ಸು ಮಾಡುತ್ತಿಲ್ಲ. ಕೇವಲ ಆಶ್ವಾಸನೆ, ಭರವಸೆಗೆ ಮಾತ್ರ ಸೀಮಿತವಾಗಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ರಾಯಚೂರು | ನಗರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಪಾಲಿಕೆ ಆಯುಕ್ತ ಜುಬಿನ್

ಈ ವೇಳೆ ಚಿಂತಕಿ ಬಿಟಿ ಲಲಿತಾ ನಾಯಕ ಅವರಿಗೆ ಪ್ರೇರಣಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಾಬು ಬಂಡಾರಿಗಲ್, ಕಸಾಪ ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ರಾವುತರಾವ್, ಬಷೀರ್ ಅಹ್ಮದ್ ಹೊಸಮನಿ, ಶಿವಶಂಕರ ನಿಜಾಮ ಕಾರಿ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...