ರಾಯಚೂರು | ಶಿಕ್ಷಕರ ವರ್ಗಾವಣೆ; ಬದಲಿ ಶಿಕ್ಷಕರ ನೇಮಕಾತಿಗೆ ಆಗ್ರಹ

Date:

ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗದ ಸಾಮಾಜಿಕ ಕಾರ್ಯಕರ್ತ ಶಿವರಾಜ ನಾಯಕ ಆಗ್ರಹಿಸಿದರು.

ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿಕ್ಷಕರ ಕೊರತೆಯ ಮಧ್ಯೆಯೂ ಶಿಕ್ಷಕರ ವರ್ಗಾವಣೆ ಮಾಡಲಾಗಿದೆ. ಶೇ.42.8ರಷ್ಟು ಶಿಕ್ಷಕರ ಕೊರತೆಯಾಗಿದೆ. ಅವೈಜ್ಞಾನಿಕ ವರ್ಗಾವಣೆಯಿಂದ ಶಿಕ್ಷಕರೇ ಇಲ್ಲದಂತಾಗಿದೆ. ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಶಾಲೆಯಲ್ಲಿ ಐದು ಮಂದಿ ಶಿಕ್ಷಕರಿದ್ದು, ನಾಲ್ಕು ಮಂದಿ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. 650 ಮಂದಿ ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಒಬ್ಬ ಶಿಕ್ಷಕರಿಂದ ಪಾಠ ಪ್ರವಚನ ಮಾಡಲು ಸಾಧ್ಯವೇ?” ಎಂದರು.

“ಕೆ.ಇರಬಗೇರಾ ಗ್ರಾಮದಲ್ಲಿ 7 ಮಂದಿ ಶಿಕ್ಷಕರಿದ್ದು, 6 ಮಂದಿ ಶಿಕ್ಷಕರನ್ನು ವರ್ಗ ಮಾಡಲಾಗಿದೆ. ಮಟ್ಲೇರದೊಡ್ಡಿ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದು, ಇಬ್ಬರನ್ನೂ ವರ್ಗಾವಣೆ ಮಾಡಲಾಗಿದೆ. ರಾಮನಾಳದಲ್ಲಿ ಇಬ್ಬರ ಶಿಕ್ಷಕರಲ್ಲಿ ಒಬ್ಬರ ವರ್ಗವಾಗಿ ಒಬ್ಬರು ಮಾತ್ರ ಉಳಿದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್‌: ಸರ್ಕಾರದ ವಿರುದ್ಧ ಪ್ರಲ್ಹಾದ್‌ ಜೋಶಿ ಆರೋಪ

ತಾಲೂಕು ಸೇರಿದಂತೆ ಜಿಲ್ಲೆಯ ಬಹುತೇಕ ತಾಲೂಕಗಳಲ್ಲಿಯೂ ಶಿಕ್ಷಕರಿಲ್ಲದೆ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಜಿಲ್ಲೆಯ ಎಲ್ಲ ಶಾಸಕರುಗಳು ಸರ್ಕಾರದ ಮೇಲೆ ಒತ್ತಡ ಹಾಕಿ ವರ್ಗಾವಣೆಯಾದ ಶಿಕ್ಷಕರ ಹುದ್ದೆಗೆ ಬದಲಿ ಶಿಕ್ಷಕರನ್ನು ನೇಮಿಸಲು ಒತ್ತಡ ಹಾಕಬೇಕು. ಕೆಲವು ಶಾಲೆಗಳು ಅತಿಥಿ ಶಿಕ್ಷಕರಿಂದ ನಡೆಯುತ್ತಿವೆ. ಕೂಡಲೇ ಶಿಕ್ಷಕರ ವರ್ಗಾವಣೆಯಿಂದ ಶಾಲೆಗಳು ಮುಚ್ಚಿ ಹೋಗುವ ಮುಂಚೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೊನ್ನಪ್ಪ ನಾಯಕ, ಸಾಬಣ್ಣ ನಾಯಕ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...