ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಮೇಶ ಗುಡದಪ್ಪ (25 ) ಪತ್ನಿ ಅನುಸೂಯ ರಮೇಶ ( 22 ) ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದರೆ ಅವರ ಮಗಳಾದ ಸೌಜನ್ಯ ರಮೇಶ ( 3) ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮುದಗಲ್ ಪಟ್ಟಣದಿಂದ ನಾಗಲಾಪೂರು ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ. ಹತ್ತಿರ ಇರುವ ದೊಡ್ಡ ಮರದ ಕೆಳಗೆ ಮೂವರು ಆಶ್ರಯ ಪಡೆದಿದ್ದರು. ಈ ವೇಳೆ ಗಾಳಿಯ ಜತೆಗೆ ಬಲವಾದ ಮಳೆಯ ಪರಿಣಾಮ ಮರವು ಬೇರು ಸಹಿತ ಕಿತ್ತು ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗಾಗಿ ರೈತ ಭೂಮಿ ಕಬಳಿಕೆ ಯತ್ನ ; ಗ್ರಾಮಸ್ಥರಿಂದ ಪ್ರತಿಭಟನೆ
ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.





