ರಾಯಚೂರು | ಅಭಿವೃದ್ದಿ ಹೆಸರಿನಲ್ಲಿ ಮರಗಳ ಮಾರಣಹೋಮ ಸಂರಕ್ಷಣೆಗೆ ; ಕೆ ಆರ್ ಎಸ್ ಒತ್ತಾಯ

Date:

ಲಿಂಗಸುಗೂರು ತಾಲೂಕಿನಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಮರಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ಕತ್ತಿರಿಸಬಾರದು, ಪರಿಸರ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಮೈ ಸಿಟಿ (NGO) ವತಿಯಿಂದ ಲಿಂಗಸುಗೂರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಹಾಗೂ ಲಿಂಗಸುಗೂರು ತಾಲೂಕಿನಲ್ಲಿ ಪ್ರತಿ ವರ್ಷವೂ ಬೇಸಿಗೆಕಾಲದಲ್ಲಿ ತಾಪಮಾನ ಅತಿ ಹೆಚ್ಚುತ ಬರುತ್ತಿದೆ. ಮಳೆಗಾಲದಲ್ಲಿ ಸುತ್ತಮುತ್ತ ಮಳೆ ಬಂದರೂ ನಮ್ಮ ಲಿಂಗಸುಗೂರು ತಾಲೂಕಿನಲಿ ಮಳೆ ಬಾರದೆ ಬರಗಾಲದ ಹಾಗೆ ಇರುತ್ತದೆ. ಇದಕ್ಕೆ ಮರ-ಗಿಡಗಳ ಕೊರತರಯೇ ಕಾರಣ. ಇರುವ ನೂರಾರು ವರ್ಷ ಹಳೆಯ ಗಿಡಗಳನ್ನು ಅಭಿವೃದ್ಧಿ ಹೆಸರಲ್ಲಿ ಕತ್ತರಿಸುತ್ತಿದ್ದಾರೆ ಎಂದು ದೂರಿದರು.

ಲಿಂಗಸುಗೂರು ತಾಲೂಕಿನಲ್ಲಿ ಅತಿ ಹೆಚ್ಚು ಗುಡ್ಡಗಳು ಹಾಗೂ ಸರ್ಕಾರಿ ಜಾಗ ಇದೆ ಆದರೂ ಇಲ್ಲಿ ಯಾವುದೇ ಅಧಿಕಾರಿಗಳಿಂದ ಮತ್ತು ಜನಪ್ರತಿನಿಧಿಗಳಿಂದ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ನಡೆದಿಲ್ಲ. ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ರೂಪಿಸಬೇಕು ಹಾಗೂ ಸಂಘಟನೆಯ ವಿವಿಧ ಬೇಡಿಕೆಗಳನ್ನು ಈಡೆರಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ಮಸೂದೆ ಅಂಗೀಕಾರದ ವಿರುದ್ಧ ಅಭಿಯಾನ; ವೆಲ್ಫೇರ್ ಪಾರ್ಟಿ ಕರೆ

ರೈತರು ಹೊಲಗಳಲ್ಲಿ ವಿಷಕಾರಿ ಕೀಟನಾಶಕ ಮತ್ತು ವಿಷಕಾರಿ ಗೊಬ್ಬರಗಳನ್ನು ಬಳಸುತ್ತಿದ್ದು ಇದರಿಂದ ಭೂಮಿಯ ಫಲತಾಂಷ ಕಡಿಮೆ ಆಗುತ್ತಿದೆ ಹಾಗೂ ಜೀವರಾಶಿ ಗಳಿಗೆ ವಿಷಕಾರಿ ಆಹಾರ ಆಗುತ್ತಿದೆ, ಇದನ್ನು ಸರ್ಕಾರವು ವಿಷಕಾರಿ ಗೊಬ್ಬರ ಹಾಗೂ ಕೆಮಿಕಲ್ ಗಳನ್ನು ನಿಷೇಧಿಸಬೇಕು.
ಸರ್ಕಾರ ಸಾವಯವ ಕೃಷಿ ಹಾಗೂ ಎರೇ ಹುಳ ಗೊಬ್ಬರ ಹಾಕುವವರಿಗೆ ಪ್ರೋತ್ಸಾಹಿಸಬೇಕು, ಬೆಳೆ ಸಾಲ ಮತ್ತು ಬೆಳೆ ವಿಮೆಯನ್ನು ಇವರಿಗೆ ಮಾತ್ರ ಒದಗಿಸಬೇಕು.

ಪ್ರತಿಯೊಂದು ಹೊಲಗಳ ಬದುವಲ್ಲಿ 10 ರಿಂದ 15 ಗಿಡಗಳನ್ನು ನಡೆಸುವಂತೆ ಸರ್ಕಾರವು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಬೇಕು. ಗ್ರಾಮದ ಸರ್ಕಾರ ಜಾಗಗಳಲ್ಲಿ ಅರಣ್ಯ ಅಧಿಕಾರಿಗಳಿಂದ ಗ್ರಾಮಗಳಲ್ಲಿ ಚಿಕ್ಕ ಅರಣ್ಯ ಸೃಷ್ಟಿಸಬೇಕು. ನಗರ ಪ್ರದೇಶ NA ಲೇಔಟ್, ಸರ್ಕಾರದ ಉದ್ಯಾನವನಗಳಲ್ಲಿ ಅತಿ ಹೆಚ್ಚು ಗಿಡ ಮರಗಳನ್ನು ಹಾಕಬೇಕು. ಯಾರಾದರೂ ಗಿಡಗಳನ್ನು ಹಚ್ಚುವುದಿಲ್ಲವೋ ಅವರಿಗೆ ದುಪ್ಪಟ್ಟು ತೆರಿಗೆಯನ್ನು ವಿಧಿಸುವ ಹಾಗೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಬೇಕು. ತಾಲೂಕಿನ ನಾಲ್ಕು ದಿಕ್ಕುಗಳಲ್ಲಿ ಹಚ್ಚಹಸಿರಾದ ಕಾಡನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡ ವಿಜಯ್ ಪೋಳ, ದ್ಯಾವಣ್ಣ ಅಪ್ಪುಲದಿನ್ನಿ, ಬಸವಪ್ರಭುಮೇಧಾ, ಗಂಗಾ ಕೆ ನಾಯಕ್, ನಿರುಪಾದಿ ಕೆ ಗೋಮರ್ಸಿ, ಕೃಷ್ಣ ಸುಕಲ್ಪೇಟೆ, ರಾಮಸ್ವಾಮಿಅರೋಲಿ, ಶರಣಬಸವ ಕವಿತಾಳ, ಅಲ್ಲಾ ಸಾಬ್, ಗಂಗಪ್ಪ ಕಬ್ಬೇರ್, ಅಮರೇಶ್ ಗುಂಡಸಾಗರ್ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...