ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ; 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ವಿಫಲ

Date:

ತುಂಗಭದ್ರಾ ಎಡದಂಡೆ ಕಾಲುವೆ 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ರಾಯಚೂರು ಆಡಳಿತ ವಿಫಲವಾಗಿರುವುದನ್ನು ಖಂಡಿಸಿ ರೈತರಿಂದ 7 ಮೈಲ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

“ರಾಯಚೂರು ಜಿಲ್ಲಾಡಳಿತ, ಉಸ್ತುವಾರಿ ಸಚಿವರು ನೀಡಿದ್ದ ಭರವಸೆ ಸುಳ್ಳಾಗಿದೆ. ಕಾಲುವೆ ವ್ಯಾಪ್ತಿಯಲ್ಲಿ ನೀರು ನಿರ್ವಹಣಾ ಲೋಪದಿಂದ ಲಕ್ಷಾಂತರ ಬೆಳೆ ಒಣಗಿ ಹೋಗಲು ಕಾರಣವಾಗಿದೆ” ಎಂದು ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು ಆರೋಪಿಸಿದರು.

“ಕಾಲುವೆ ವ್ಯಾಪ್ತಿಗೆ ನೀರು ಬಾರದೇ ಇರುವಾಗ ರಸ್ತೆ ತಡೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಯವರ ಪ್ರಯತ್ನದ ಫಲವಾಗಿ ಕಾಲುವೆ ನೀರು ಹರಿದುಬಂದಿತ್ತು. ಮೂರು ದಿನ ಕಳೆಯುತ್ತಲೇ ಗೇಜ್ ನಿರ್ವಹಣೆಯಾಗದೇ ನೀರು ಹರಿವು ಪ್ರಮಾಣ ಕುಸಿದು ಹೋಯಿತು. ಆಡಳಿತದ ಭರವಸೆ ಮೇಲೆ ರೈತರು ಕಾದು ಕುಳಿತಿದ್ದರು. ಆದರೆ ನೀರು ನಿರ್ವಹಣೆಯಾಗದೇ ನೀರು ಬರುತ್ತಿಲ್ಲವಾದರೂ ನೀರಾವರಿ ನಿಗಮದ ಅಧಿಕಾರಿಗಳೂ ಸ್ಪಂದಿಸುತ್ತಿಲ್ಲ. ಜಿಲ್ಲಾಡಳಿತವೂ ಕ್ರಮಕ್ಕೆ ಮುಂದಾಗುತ್ತಿಲ್ಲ.ಈಗಲಾದರೂ ನೀರು ಹರಿಸದೇ ಹೋದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಡಾ ಶಿವರಾಜ ಪಾಟೀಲ್, ಮಾಜಿ ಶಾಸಕ ಎ ಪಾಪಾರೆಡ್ಡಿ, ರೈತ ಸಂಘದ ಚಾಮರಸ ಮಾಲಿ ಪಾಟೀಲ್, ರಾಘವೇಂದ್ರ ಕುಷ್ಟಗಿ, ನಾಗನಗೌಡ ಹರವಿ, ಮಹಾಂತೇಶ ಪಾಟೀಲ್ ಅತ್ತನೂರು, ಶರಣಪ್ಪ ಕಲ್ಮಲಾ, ಬೆಲ್ಲಂ ನರಸರೆಡ್ಡಿ, ಸಿದ್ದನಗೌಡ ನೆಲಹಾಳ, ವಿಶ್ವೇಶ್ವರ ಸೇರಿದಂತೆ ಹತ್ತಾರು ಗ್ರಾಮಗಳ ರೈತರು, ಮುಖಂಡರುಗಳು ಇದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮೋಸ ಹೋಗಬೇಡಿ; ತೆಲಂಗಾಣದಲ್ಲಿ ಗಡಿಭಾಗದ ರೈತರ ಹೋರಾಟ 

ದಾರಿ: ಮಂಗಳವಾರ ಬೆಳಿಗ್ಗೆಯಿಂದ ಪ್ರತಿಭಟನೆ ಪ್ರಾರಂಭವಾಗಿತ್ತು. ಈ ಮಧ್ಯೆ ಆರೋಗ್ಯ ಚಿಕಿತ್ಸೆಗೆ ತೆರಳುತ್ತಿದ್ದ ದಂಪತಿಗೆ ಅನುವು ಮಾಡಿಕೊಟ್ಟರು. ರೋಗಿಯಿಲ್ಲದೇ ತೆರಳುತ್ತಿದ್ದ ಆಂಬುಲೆನ್ಸ್ ವಾಹನವನ್ನು ತಡೆದರು. ಸಾವಿರಾರು ಜನರು ಪ್ರತಿಭಟನೆ ಬೆಂಬಲಿಸಿದರು. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಂಡು ಹೋದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...