ರಾಯಚೂರು | ತುಂಗಭದ್ರ ಹಂಗಾಮಿ ಕಾರ್ಮಿಕರ ಬಾಕಿ ವೇತನ ಪಾವತಿಸದಿದ್ದರೆ ಜನವರಿ 26ಕ್ಕೆ ಕಪ್ಪು ಪಟ್ಟಿ ಪ್ರದರ್ಶನ; ಆರ್‌ ಮಾನಸಯ್ಯ

Date:

ತುಂಗಭದ್ರ ಹಂಗಾಮಿ ನೌಕರರಿಗೆ 08 ತಿಂಗಳಿನಿಂದ ಸಂಬಳವಿಲ್ಲ ವೇತನ ಪಾವತಿಗೆ ಕೊಪ್ಪಳ ಮತ್ತು ರಾಯಚೂರು ಉಸ್ತುವಾರಿ ಸಚಿವರುಗಳು ನಿಗಮದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿ ಬಾಕಿ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕು. ಇಲ್ಲದೇ ಹೋದರೆ ಜನವರಿ 26 ರಂದು ಕಪ್ಪು ಪಟ್ಟಿ ಪ್ರದರ್ಶಿಸಲಾಗುವುದು ಎಂದು ತುಂಗಭದ್ರ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘದ ಆಧಕ್ಷ ಆರ್.ಮಾನಸಯ್ಯ ಹೇಳಿದರು

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಉತ್ಸವಗಳ ಮೇಲೆ ಉತ್ಸವಗಳು ನಡೆಯುತ್ತಿವೆ. ಆದರೆ ಜನರು, ರೈತರು, ಕಾರ್ಮಿಕರ ಸಮಸ್ಯೆಗಳು ಮಾತ್ರ ಪರಿಹಾರವಾಗದೇ ಉಳಿದಿವೆ. ತುಂಗಭದ್ರ ಯೋಜನೆಯಡಿ ಕ್ರಸ್ಟಗೇಟ್ ಅಳವಡಿಸುವುದರಿಂದ ನೀರು ಹರಿಸುವದು ಬಂದ್ ಆಗಿದೆ. ಕಾರ್ಮಿಕರಿಗೆ ಕೆಲಸವೂ ಇಲ್ಲ, ಬಾಕಿಯಿರುವ 8 ತಿಂಗಳ ವೇತನವು ಇಲ್ಲ ಕೂಡಲೇ ಕೊಪ್ಪಳ ಮತ್ತು ರಾಯಚೂರು ಉಸ್ತುವಾರಿ ಸಚಿವರುಗಳು ಮಧ್ಯಪ್ರವೇಶಿಸಿ ಬಾಕಿ ವೇತನವನ್ನು ನೀಡುವಂತೆ ಒತ್ತಾಯಿಸಬೇಕೆಂದರು.

ಬಾಕಿಯಿರುವ 8 ತಿಂಗಳ ವೇತನಕ್ಕೆ ಕೊಪ್ಪಳ ಮತ್ತು ರಾಯಚೂರು ಉಸ್ತುವಾರಿ ಸಚಿವರುಗಳು ಅಧಿಕಾರಿಗಳಿಗೆ ಪತ್ರ ಬರೆದು ಬಾಕಿ ವೇತನ ನೀಡುವಂತೆ ಸೂಚಿಸಿದ್ದರು ನಿಗಮದ ಅಧಿಕಾರಿಗಳು ವೇತನ ಪಾವತಿಸುತ್ತಿಲ್ಲ. ಈ ಹಿಂದೆ ವರ್ಷವಿಡಿ ಕೆಲಸ ಕೊಡುವುದಾಗಿ ನಿಗಮದ ಆದೇಶವಾಗಿತ್ತು ಆದರೆ ವೇತನವಿಲ್ಲ, ಕೆಲಸವುವಿಲ್ಲ ಹಾಗೂ ಬೆಳೆಯು ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಂಗಭದ್ರ ಯೋಜನೆಯಡಿ 6 ಲಕ್ಷ ಎಕರೆ ನೀರುಣಿಸುವದು, ಎರಡು ಮಹಾನಗರಪಾಲಿಕೆ, ಮೂರು ಪಟ್ಟಣ ಪಂಚಾಯತಿ 180 ಗ್ರಾಮಗಳ ಕುಡಿಯುವ ನೀರು ಸರಬರಾಜ ಅವಲಂಬಿತರಾಗಿದ್ದು ವೇತನವಿಲ್ಲದೇ ಕಾರ್ಮಿಕರು ಕೆಲಸ ಮಾಡುವಂತಾಗಿದೆ ವೇತನವಿಲ್ಲದೇ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿರುವುದು ಖಂಡನೀಯ. ದುಡಿಯಲು ಬಿಡುತ್ತಿಲ್ಲ,ಕೂಲಿಯೂ ಕೊಡುತ್ತಿಲ್ಲ. ಭತ್ತಕ್ಕೆ ವೈರಸ್ ರೋಗದೊಂದಿಗೆ ಬೆಲೆಯಿಲ್ಲದೇ ರೈತರು ಸಂಕಷ್ಟದಲ್ಲಿದ್ದರು ಸರಕಾರ ಜಿಲ್ಲೆಉತ್ಸವ ಮಾಡಲು ಹೊರಟಿರುವುದಕ್ಕೆ ಧಿಕ್ಕಾರವಿರಲಿ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾಕ್ಟರ್ ಗೆ ಟಿಪ್ಪರ್‌ ಡಿಕ್ಕಿ; ಓರ್ವ ಸಾವು

ಈ ಸಂದರ್ಭದಲ್ಲಿ ಸಂಘದ ಪ್ರಧಾನಕಾರ್ಯದರ್ಶಿ ಅಡವಿರಾವ್, ಮುಖಂಡರುಗಳಾದ ಲೋಕಪ್ಪ, ರಾಧಾಕೃಷ್ಣ, ಮುದುಕಪ್ಪ, ಸಿದ್ದಪ್ಪ, ಶಂಕರಪ್ಪ, ನಾಗರಾಜ, ಮಹದ ಸಫಿಯುದ್ದೀನ್, ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...