ರಾಯಚೂರು | ಕಿರಾಣಿ ಅಂಗಡಿಯಲ್ಲಿ ಕಳ್ಳತನ ; ಇಬ್ಬರ ಬಂಧನ

Date:

ಕಿರಾಣಿ ಅಂಗಡಿಗೆ ನುಗ್ಗಿ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಯಾರ್ಡ್ ಪೊಲೀಸರು ಬಂಧಿಸಿ, 30 ಸಾವಿರ ರೂ.ನಗದು ಹಣವನ್ನು ವಶಪಡಿಸಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.

ಬಂಧಿತರನ್ನು ಸಿಯಾತಲಾಬ್ ಬಡಾವಣೆಯ ನಿವಾಸಿ ಎಂ.ಡಿ ಸೋಹೆಲ್ (22) ಹಾಗೂ ಜಲಾಲ್‌ನಗರ ನಿವಾಸಿ ಸದ್ದಾಮ್(21) ಎಂದು ಹೇಳಲಾಗಿದೆ.

ಇಬ್ಬರು ಜೂನ್ 8ರ ಮಧ್ಯರಾತ್ರಿ ಬಸವನಭಾವಿ ವೃತ್ತದಲ್ಲಿ ನಿಖಿಲ್ ಎಂಬುವವರ ಕಿರಾಣಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಇದರ ಬಗ್ಗೆ ಜೂ.11ರಂದು ನೇತಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಕಳ್ಳರನ್ನು ಸೆರೆಹಿಡಿದು. ವಿಚಾರಣೆ ನಡೆಸಿದಾಗ ಖದೀಮರು 1.35 ಲಕ್ಷ ನಗದು ಹಣ ಹಾಗೂ ಒಂದು ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಅವರಿಂದ 30 ಸಾವಿರ ನಗದು ಹಣ ಜಪ್ತಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ; ವಕೀಲರ ಪ್ರತಿಭಟನೆ

ಕಳ್ಳತನ ಮಾಡಿದ ಡಿವಿಆರ್ ಅನ್ನು ಬಸವನಭಾವಿ ವೃತ್ತದ ಬಳಿ ಇರುವ ರಾಜಕಾಲುವೆಯಲ್ಲಿ ಹಾಕಲಾಗಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪಂಚನಾಮೆ ಮಾಡಿದರು. ನಂತರ ಇಬ್ಬರು ಆರೋಪಿಗಳನ್ನು ಕಾರಾಗೃಹಕ್ಕೆ ಒಪ್ಪಿಸಲಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...