ರಾಯಚೂರು | ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯ; ಬಯಲಲ್ಲೇ ಶೌಚ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಲಕರ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯದಿಂದ ಕೂಡಿದ್ದು, ಉತ್ತಮ ಊಟ ನೀಡದೆ ಬೇಕಾಬಿಟ್ಟಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

“ಗ್ರಾಮೀಣ ಭಾಗದ ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲೆಂದು ವಸತಿ ನಿಲಯಗಳಿಗೆ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತದೆ.‌ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲವೆಂಬ ಗಾದೆ ಮಾತು ನೆನಪಾಗುತ್ತದೆ” ಎಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ಹೇಳುತ್ತಾರೆ.

“ಉನ್ನತ ದರ್ಜೆಯ ವಿದ್ಯಾಭ್ಯಾಸಕ್ಕಾಗಿ ಮನೆ-ಮಠ ಬಿಟ್ಟು ನಗರಕ್ಕೆ ಬಂದು ವಸತಿ ನಿಲಯದಲ್ಲಿ ವಾಸ್ತವ್ಯವಿರುತ್ತೇವೆ. ಆದರೆ ಇಲ್ಲಿನ ಪರಿಸ್ಥಿತಿ ನೋಡಿದರೆ ನಮ್ಮ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತೆಂದು ಭಯವಾಗುತ್ತದೆ” ಎಂದು ಹೆಸರೇಳಲಿಚ್ಛಿಸದ ವಿದ್ಯಾರ್ಥಿ ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000078919

“ವಸತಿಯ ನಿಲಯದ ಮೂಲಸೌಕರ್ಯ, ಊಟ, ಸ್ವಚ್ಚತೆ ಬಗ್ಗೆ ನಿತ್ಯವೂ ವಸತಿ ಸಿಬ್ಬಂದಿಗಳ ಜತೆಗೆ ವಾದ ವಿವಾದಗಳು ಸಂಭವಿಸುತ್ತಿರುತ್ತವೆ. ಶಿಕ್ಷಣಕ್ಕೆ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ ಕಳಪೆ ಊಟ ಸೇವಿಸುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಸ್ಥಳೀಯ ಹೋರಾಟಗಾರ ಜಾವೀದ್ ಖಾನ್ ವಸತಿ ನಿಲಯಕ್ಕೆ ಭೇಟಿ ನೀಡಿ ಈ‌ ದಿನ.ಕಾಮ್ ಜತೆಗೆ ಮಾತನಾಡಿ, “ಮಕ್ಕಳಿಗೆ ನೀಡುವ ಊಟವನ್ನು ವಸತಿಯ ಸಿಬ್ಬಂದಿ ಹಾಗೂ ಅಧಿಕಾರಿಗಳೇ ಸೇವಿಸಲಿ. ಕಳಪೆ ಊಟ ನೀಡಿ, ಉಳಿದ ಪದಾರ್ಥಗಳು ಹಾಗೂ ಕಾಳನ್ನು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಗರ್ ಹುಕುಂ ಭೂಮಂಜೂರಾತಿಗೆ ತೊಡಕಾಗಿರುವ ಕಾನೂನು ತಿದ್ದುಪಡಿ ಮಾಡಿ: ಭೂಮಿ ವಂಚಿತರ ಆಗ್ರಹ

“ಕಳಪೆ ಊಟವನ್ನು ಸೇವಿಸಲಾಗದೆ ಮಕ್ಕಳು ಊಟವನ್ನು ಹಾಗೆ ಬಿಡುತ್ತಾರೆ. ಈ ರೀತಿ ಉಳಿದ ಆಹಾರವನ್ನು ನಿತ್ಯವೂ ಚೀಲಗಟ್ಟಲೆ ಆಹಾರವನ್ನು ಜಾನುವಾರು ಸಾಕುವವರಿಗೆ ಚೀಲಕ್ಕೆ ಇಂತಿಷ್ಟರಂತೆ ಮಾರಾಟ ಮಾಡುತ್ತಾರೆ. ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಜತೆಗೆ ಸಂವಾದ ಮಾಡಲಿ ಎಲ್ಲ ಸಮಸ್ಯೆಗಳು ಹೊರಬರುತ್ತವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ವಸತಿ ನಿಲಯದಲ್ಲಿ ಶೌಚಾಲಯವಿದ್ದರೂ ಮಕ್ಕಳು ಬಯಲು ಶೌಚಾಲಯಕ್ಕೆ ತೆರಳುತ್ತಿದ್ದಾರೆ. ನಿಲಯದ ಮಕ್ಕಳು ಯಾರಿಗೂ ಹೇಳದ ಪರಿಸ್ಥಿತಿಯಲ್ಲಿದ್ದಾರೆ. ಕಳಪೆ ಊಟ ಸೇವಿಸಿ ಶಾಲೆ ಕಾಲೇಜಿಗೆ ತೆರಳುತ್ತಿದ್ದಾರೆ. ಇದನ್ನು ಆದಷ್ಟು ಮೇಲಧಿಕಾರಿಗಳು ಗಮನಿಸಿ ಸೂಕ್ತ ಕ್ರಮ ಕೈಗೊಂಡು ಉತ್ತಮ ಊಟ, ಮೂಲ ಸೌಕರ್ಯ ಒದಗಿಸಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...