ರಾಯಚೂರು | ಕೊಪ್ಪರದಲ್ಲಿ ಬಗೆಹರಿಯದ ಡ್ರೈನೇಜ್ ಸಮಸ್ಯೆ; ಕಂಗೆಟ್ಟ ಜನಜೀವನ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದಲ್ಲಿ ಸರಿಯಾದ ಚರಂಡಿ ವ್ಯವಸ್ಥೆಯೇ ಇಲ್ಲದಿರುವುದರಿಂದ ಗ್ರಾಮಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಯೊಂದು ಮನೆಯ ಮುಂದೆ ಮಳೆ ನೀರು ಹಾಗೂ ಮಲಿನ ನೀರು ನಿಂತುಕೊಳ್ಳುತ್ತಿದ್ದು, ಇದರಿಂದಾಗಿ ದೈನಂದಿನ ಜೀವನವೇ ದುಸ್ತರವಾಗಿದೆ. ಗ್ರಾಮದ ಮುಖ್ಯ ರಸ್ತೆಗಳು ಕೆಸರುಮಯವಾಗಿದ್ದು, ನಿವಾಸಿಗಳು ನಿತ್ಯ ಕೆಸರಿನಲ್ಲೇ ನಡೆಯುವಂತಹ ಅನಿವಾರ್ಯ ಸ್ಥಿತಿಯಲ್ಲಿದ್ದು, ತೀವ್ರ ಅಸಮಾಧಾನಗೊಂಡಿದ್ದಾರೆ.

ಗ್ರಾಮದ ರಸ್ತೆಗಳು ಸಂಪೂರ್ಣವಾಗಿ ಕೆಸರಿನಿಂದ ತುಂಬಿಕೊಂಡಿವೆ. “ಕೆಸರಲ್ಲಿ ರಸ್ತೆಯೋ, ರಸ್ತೆಯಲ್ಲಿ ಕೆಸರೋ” ಎಂಬಂತಹ ಹದಗೆಟ್ಟ ಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಶಾಲೆಗೆ ಹೋಗುವಾಗಲೂ ಈ ಮಲಿನ ನೀರಿನ ಮೂಲಕವೇ ನಡೆಯಬೇಕಾದ ಪರಿಸ್ಥಿತಿ ಉಂಟಾಗಿದ್ದು, ಅವರ ಆರೋಗ್ಯಕ್ಕೆ ಗಂಭೀರ ಧಕ್ಕೆಯಾಗುತ್ತಿದೆ. ಮನೆಯ ಮುಂದೆಯೇ ನೀರು ನಿಂತುಕೊಳ್ಳುವುದರಿಂದ ದಿನನಿತ್ಯ ಕೆಟ್ಟ ವಾಸನೆ ಹರಡುತ್ತಿದ್ದು, ಇದು ಗ್ರಾಮದ ವಾತಾವರಣವನ್ನು ಮಲಿನಗೊಳಿಸುತ್ತಿದೆ.

WhatsApp Image 2025 10 17 at 2.08.22 PM 2

ಈ ಸಮಸ್ಯೆಯಿಂದಾಗಿ ಗ್ರಾಮದಲ್ಲಿ ಡೆಂಗ್ಯೂ, ಮಲೇರಿಯಾ ಹಾಗೂ ಚರ್ಮರೋಗಗಳು ಹಬ್ಬುತ್ತಿವೆ. ಹತ್ತಾರು ಮಂದಿ ಈಗಾಗಲೇ ಜ್ವರದಿಂದ ಬಳಲುತ್ತಿದ್ದಾರೆ. ಹಿರಿಯರು ಮತ್ತು ಮಕ್ಕಳ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಆಸ್ಪತ್ರೆಗಳಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡುವಂತಹ ಅನಿವಾರ್ಯತೆ ಉಂಟಾಗಿದೆ. “ನಮ್ಮ ಗ್ರಾಮದಲ್ಲಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸದಿದ್ದರೆ ಆರೋಗ್ಯ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ” ಎನ್ನುತ್ತಾರೆ ಗ್ರಾಮಸ್ಥರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ನಿವಾಸಿ ಚನ್ನಬಸವ ಮಾತನಾಡಿ, “ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ, ನೀರು ಬೇರೆ ಕಡೆ ಹೋಗದೆ ಅವರವರ ಮನೆಯ ಮುಂದೆಯೇ ನಿಲ್ಲುತ್ತಿದೆ. ಮಳೆ ಬಂದಾಗಲಂತೂ ಹಳ್ಳವೇ ನಿರ್ಮಾಣವಾಗಿಬಿಟುತ್ತದೆ. ತಗ್ಗುಗಳಲ್ಲಿ ಮನೆ ಒಳಗೇ ನೀರು ನುಗ್ಗುತ್ತದೆ. ಇಡೀ ಗ್ರಾಮದ ಜನತೆಯ ಸಂಕಟವನ್ನು ಕೇಳುವವರೇ ಇಲ್ಲದಂತಾಗಿದೆ. ಗ್ರಾಮದ ಆಸ್ಪತ್ರೆ ಹಿಂಭಾಗ ಇರುವ ವಾರ್ಡ್‌ನಲ್ಲಿ ಸುಮಾರು ಮೂರು ವರ್ಷಗಳಿಂದಲೂ ಇದೇ ಪರಿಸ್ಥಿತಿ. ಗ್ರಾಮದಲ್ಲಿರುವ ಸುಮಾರು 80 ಕುಟುಂಬಗಳು ನಿತ್ಯ ಇದೇ ಗೋಳಿನಲ್ಲಿ ಜೀವನ ನಡೆಸುವಂತಾಗಿದೆ. ಚುನಾವಣೆ ಬಂದಾಗ ರಾಜಕಾರಣಿಗಳು ಗ್ರಾಮಕ್ಕೆ ಆಗಮಿಸಿ ದೊಡ್ಡ ದೊಡ್ಡ ಭಾಷಣಗಳನ್ನು ಮಾಡುತ್ತಾರೆ. ಚರಂಡಿ, ರಸ್ತೆ, ಆರೋಗ್ಯ ಸೌಲಭ್ಯಗಳನ್ನು ಸರಿಪಡಿಸುವ ಭರವಸೆ ನೀಡುತ್ತಾರೆ. ಆದರೆ ಚುನಾವಣೆ ಮುಗಿದ ಕೂಡಲೇ ಕಾಣೆಯಾಗುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 10 17 at 2.08.22 PM

ಗ್ರಾಮಸ್ಥರು ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಆಡಳಿತದ ಬಳಿ ಮನವಿ ಮಾಡಿಕೊಂಡರೂ, ಯಾವುದೇ ಗಮನಾರ್ಹ ಕ್ರಮ ಕೈಗೊಳ್ಳಲಾಗಿಲ್ಲ. ಪ್ರತಿ ಚುನಾವಣೆಯಲ್ಲೂ ಭರವಸೆಗಳ ಸುರಿಮಳೆ, ಆದರೆ ಕೆಲಸ ಶೂನ್ಯ. ಈಗಲಾದರೂ ಚರಂಡಿ ವ್ಯವಸ್ಥೆಗೆ ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸರಕಾರ ಮತ್ತು ಜನಪ್ರತಿನಿಧಿಗಳು ಈ ಸಮಸ್ಯೆಗೆ ಗಂಭೀರವಾಗಿ ಸ್ಪಂದಿಸದಿದ್ದರೆ, ಗ್ರಾಮಸ್ಥರು ಮುಂದಿನ ದಿನಗಳಲ್ಲಿ ಪ್ರತಿಭಟನೆಗೆ ಇಳಿಯುವ ಸಾಧ್ಯತೆ ಇದೆ. ಸ್ಥಳೀಯ ಆಡಳಿತದಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ದೊರೆಯದಿರುವುದು ಗ್ರಾಮಸ್ಥರ ಕೋಪಕ್ಕೆ ಇನ್ನಷ್ಟು ಕಾರಣವಾಗಿದೆ ಎಂದರು.

ಇನ್ನೋರ್ವ ಗ್ರಾಮದ ನಿವಾಸಿ ಮಲ್ಲಯ್ಯ ಮಾತನಾಡಿ, “ಬೀದಿಗಳಿಗೆ ಚರಂಡಿ ಹಾಗೂ ರಸ್ತೆ ವ್ಯವಸ್ಥೆ ಇಲ್ಲ. ಪರಿಣಾಮ ನಿವಾಸಿಗಳು ಮನೆ ಬಳಕೆ ನೀರನ್ನು ಹೊರಗೆ ಬಿಡಲು ಸ್ಥಳವಿಲ್ಲದೆ ಮನೆಯ ಮುಂದೆ ಗುಂಡಿ ನಿರ್ಮಿಸಿಕೊಂಡು ಅಲ್ಲಿ ಮಲಿನ ನೀರನ್ನು ಬಿಡುವ ಸ್ಥಿತಿ ಇದೆ. ಗ್ರಾಮದ ಕೆಲ ಮನೆಗಳ ಮುಂದೆ ಮನೆಯಲ್ಲಿ ಬಳಸಿದ ನೀರನ್ನು ರಸ್ತೆ ಬದಿಗೆ ಬಿಡಲಾಗುತ್ತಿದೆ. ಅದು ಮುಂದಕ್ಕೆ ಹೋಗಲು ಆಗದೇ ಅಲ್ಲೆ ನಿಂತು ದೊಡ್ಡ ಗುಂಡಿಯಾಗಿ ದುರ್ನಾತ ಬೀರುತ್ತಿದೆ. ಕೆಲಮನೆಗಳ ಮುಂದೆ ಮಣ್ಣು ರಸ್ತೆಯ ನಡುವೆ ಚರಂಡಿಯಿಲ್ಲದೇ ಸಣ್ಣದಾಗಿ ಅಗೆದು ನೀರು ಬೀಡುತ್ತಿದ್ದಾರೆ. ಕೊಳಚೆ ನೀರಿನ ಜತೆಗೆ ಕಾಡು ಜಾತಿಯ ಹುಲ್ಲು ಬೆಳೆದಿರುವುದು ಇಡೀ ಪ್ರದೇಶವನ್ನು ಕೊಳಚೆ ತಾಣವಾಗಿ ಮಾರ್ಪಾಡು ಮಾಡಿದೆ. ಮನೆಯ ಮುಂದೆ ಕೊಳಚೆ ನೀರು ನಿಂತ ಪರಿಣಾಮ ಸೊಳ್ಳೆ ಕಾಟ ವಿಪರೀತ ವಾಗಿದೆ. ಈಗ ಎಲ್ಲೂ ಸಮರ್ಪಕ ಮಳೆಯಾಗದೇ ಕಸಕಡ್ಡಿ ಹೊರಹೋಗಲು ಜಾಗವೇ ಇಲ್ಲ. ಆ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಸೊಳ್ಳೆಗಳ ಕಾಟವಂತೂ ಹೇಳ ತೀರವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಬಡಾವಣೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಾಯಚೂರು | ಗ್ಯಾರಂಟಿ ಯೋಜನೆಗಳ ಅರ್ಥ ತಿಳಿಯದವರು ಮಾತ್ರ ಅದರ ವಿರುದ್ಧ ಮಾತನಾಡುತ್ತಾರೆ — ಪಾಮಯ್ಯ ಮುರಾರಿ

ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಮತ್ತು ತಾಲೂಕು ಆಡಳಿತದಿಂದ ಯಾವುದೇ ಪ್ರತಿಕ್ರಿಯೆ ದೊರೆಯದಿರುವುದು ಗ್ರಾಮಸ್ಥರ ಕೋಪಕ್ಕೆ ಕಾರಣವಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...