ರಾಯಚೂರು | ಜಾತಿಗಣತಿ ವಿರುದ್ಧ ವೀರಶೈವ, ಲಿಂಗಾಯತ ಸಮಾಜದಿಂದ ಬೃಹತ್‌ ರ್‍ಯಾಲಿ

Date:

ರಾಜ್ಯದಲ್ಲಿ ಅವೈಜ್ಞಾನಿಕ ಜಾತಿಗಣತಿ(caste census) ನಡೆಸಲಾಗಿದ್ದು, ಜನಸಂಖ್ಯೆ ಆಧಾರದ ಮೇಲೆ ವೀರಶೈವ, ಲಿಂಗಾಯತ ಸಮಾಜದ ಬಲವನ್ನು ಕುಗ್ಗಿಸಿ ಸಮಾಜ ಒಡೆಯುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆರೋಪಿಸಿ ವೀರಶೈವ ಹಾಗೂ ಲಿಂಗಾಯತ ಸಮಾಜದ ಮುಖಂಡರು ಸೋಮವಾರ ರಾಯಚೂರು ನಗರದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಬೈಪಾಸ್ ರಸ್ತೆಯ ರೇಣುಕಾಚಾರ್ಯ ವೃತ್ತದ ಸಮೀಪದ ಹರ್ಷಿತಾ ಗಾರ್ಡನ್ ಬಳಿ ಮುಖಂಡರು ತಲೆಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನಾ ಸಭೆ ನಡೆಸಿದರು. ನಂತರ ನೂತನ ಜಿಲ್ಲಾಡಳಿತ ಕಚೇರಿವರೆಗೂ ಬ್ಯಾನರ್‌ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಜಿಲ್ಲೆಯ ಮಠಾಧೀಶರು, ಶಾಸಕರು ಹಾಗೂ ಸಮಾಜ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

“2015ರ ಕಾಂತರಾಜು ವರದಿಯ ದತ್ತಾಂಶವನ್ನು ಬದಲಾಯಿಸಿ 2024ರಲ್ಲಿ ಜಯಪ್ರಕಾಶ್ ಹೆಗಡೆ ಸರ್ಕಾರಕ್ಕೆ ನೀಡಿದ ಸಮೀಕ್ಷಾ ವರದಿಯನ್ನು ಅಂಗೀಕರಿಸಬಾರದು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಹೆಸರಲ್ಲಿ 2015ರಲ್ಲಿ ಪ್ರಾರಂಭವಾದ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯು 51 ಮಾನದಂಡಗಳು ಮೇಲೆ ಕಾಲಂವಾರು 54 ಪ್ರಶ್ನಾವಳಿಗಳನ್ನು ಒಳಗೊಂಡ ಸಮೀಕ್ಷೆಯ ನಮೂನೆಯನ್ನು ಬಳಸಿಕೊಂಡು ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯು ನೈಜತೆಯಿಂದ ಕೂಡಿರದೆ ಜಾತಿ ಹಾಗೂ ಪ್ರವರ್ಗಕ್ಕೆ ಅದರಲ್ಲಿಯೂ ವಿಶೇಷವಾಗಿ ಉಪಜಾತಿಗಳ ವಿಂಗಡಣೆ ಮತ್ತು ಕ್ರೋಢೀಕರಣಕ್ಕೆ ಸೀಮಿತವಾದಂತೆ ಮಾಡಲಾಗಿದೆ” ಎಂದು ಆರೋಪಿಸಿದರು.

“ಪ್ರತಿ 10 ವರ್ಷಗಳ ಅವಧಿಯಲ್ಲಿ ಹಿಂದುಳಿದ ಜಾತಿ, ಸಮುದಾಯಗಳನ್ನು ಇಂತಹ ಪಟ್ಟಿಯಿಂದ ಕೈಬಿಡುವ ಅಥವಾ ಹೊಸದಾಗಿ ಸೇರಿಸುವ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪರಿಷ್ಕರಣೆಯನ್ನು ಕೈಗೊಳ್ಳಬಹುದಾಗಿದೆ ಎಂದು ಕೆಎಸ್‌ಸಿಬಿಸಿ ಅಧಿನಿಯಮ 1995ರ ಪ್ರಕರಣ 2ರಲ್ಲಿ ಸ್ಪಷ್ಟಪಡಿಸಲಾಗಿದೆ. 10 ವರ್ಷಗಳಿಗೂ ಹಿಂದಿನ ಈ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರದ ಜಾತಿ ಗಣತಿ ವರದಿಯನ್ನು ಈಗ ಪರಿಗಣನೆಗೆ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಚಿನ್ನಪ್ಪರೆಡ್ಡಿ ಆಯೋಗದಲ್ಲಿ ವೀರಶೈವ ಸಮಾಜದ 61 ಉಪಪಂಗಡಗಳನ್ನು ಗುರುತಿಸಿದ್ದು, ಅದರಲ್ಲಿ ಶೇಕಡ 17ರಷ್ಟು ಜನಸಂಖ್ಯೆ ಇವೆ. ಶೇಕಡವಾರು 11ಕ್ಕೆ ಇಳಿದಿರುವುದು ಸಮೀಕ್ಷೆಯಲ್ಲಿರುವ ದೋಷವನ್ನು ತೋರಿಸುತ್ತದೆ” ಎಂದು ಅಸಮಾಧಾನ ಹೊರಹಾಕಿದರು.

“ವೀರಶೈವ, ಲಿಂಗಾಯತ ಉಪಪಂಗಡಗಳಿರುವ ಸುಮಾರು ಉಪಪಂಗಡಗಳ ಹೆಸರುಗಳು ಕೆಟಗರಿ 3ಬಿ, 2ಎ, ಕೆಟಗರಿ 1, 1ಎ ಮತ್ತು 1ಬಿನಲ್ಲಿ ಇವೆ. ಕೆಟಗರಿಯಲ್ಲಿರುವ ಸಮಾನರೂಪದ ಪಂಗಡಗಳಲ್ಲಿಯೂ ಕೂಡ ಏರಿಕೆಯಾಗಿರುವುದು ಕಂಡುಬಂದಿರುವುದಿಲ್ಲ” ಎಂದು ದೂರಿದರು.

ನಗರ ಶಾಸಕ ಡಾ. ಶಿವರಾಜ ಪಾಟೀಲ್ ಮಾತನಾಡಿ, “ಜಾತಿ ಗಣತಿ ಕೈ ಬಿಡದಿದ್ದರೆ ರಕ್ತಕ್ರಾಂತಿ ನಡೆಸಲು ಹಿಂಜರಿಯುವುದಿಲ್ಲ. ಇದು ವೀರಶೈವ ಲಿಂಗಾಯತ ಸಮಾಜ ಒಡೆಯುವ ಕೃತ್ಯವಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ನಲ್ಲಿ ವಕ್ಪ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನಾ ರ್‍ಯಾಲಿ

ಕಾಂಗ್ರೆಸ್ ಎಂಎಲ್‌ಸಿ ಬಸನಗೌಡ ಬಾದರ್ಲಿ ಮಾತನಾಡಿ,‌ “ಸಮಾಜದಿಂದ ನಾವು ವಿನಃ, ನಮ್ಮಿಂದ ಸಮಾಜವಲ್ಲ. ಈಗಾಗಲೇ ಸರ್ಕಾರಕ್ಕೆ ಪರಿಸ್ಥಿತಿ ಮನವರಿಕೆ ಮಾಡಿಕೊಡಲಾಗಿದೆ. ಸಮಯ ಬಂದರೆ ನಾವು ರಾಜಿನಾಮೆ ಕೊಡಲು ಸಿದ್ಧ” ಎಂದು ಎಚ್ಚರಿಸಿದರು.

ಶರಣಗೌಡ ಬಯ್ಯಾಪೂರ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ವೀರಶೈವ ಲಿಂಗಾಯತ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ, ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರ, ವೀರಶೈವ ರುದ್ರಸೇನ ಜಿಲ್ಲಾ ಘಟಕದ ಅಧ್ಯಕ್ಷ ಶಿವಶರಣರಡ್ಡಿ, ಮಠಾದೀಶರು ಹಾಗೂ ವೀರಶೈವ, ಲಿಂಗಾಯತ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...