ಮಾನ್ವಿ ತಾಲ್ಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಮಧ್ಯ ಸೇವಿಸಿ ಶಾಲೆಗೆ ಬಂದು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಜಾನೇಕಲ್ ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಸ್ಥಳೀಯ ಮಾಹಿತಿಯ ಪ್ರಕಾರ, ಶಾಲೆಯ ಮುಖ್ಯೋಪಾಧ್ಯಾಯ ಕಂಪಳಪ್ಪ ಅವರು ಪಾಠದ ಸಮಯದಲ್ಲಿ ಮಧ್ಯಪಾನದ ಅಳಿವಿನಲ್ಲಿ ವಿದ್ಯಾರ್ಥಿಗಳೊಂದಿಗೆ ದುರುಕ್ತವಾಗಿ ಮಾತನಾಡಿ, ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಹಾಗೂ ಅವರು ಸರಿಯಾಗಿ ಶಾಲೆಯಲ್ಲಿ ಇರಲ್ಲ ಬೆಳಿಗ್ಗೆ ಹಾಜರಾತಿ ಹಾಕಿ ಶಾಲೆಯಿಂದ ತೆರಳಿ ಬಿಡುತ್ತಾರೆ ಎನ್ನಲಾಗಿದೆ.
ಗ್ರಾಮಸ್ಥರು ಹಲವು ಬಾರಿ ಮುಖ್ಯೋಪಾಧ್ಯಾಯರಿಗೆ ಈ ಕುರಿತು ಎಚ್ಚರಿಕೆ ನೀಡಿದ್ದರೂ ತಿದ್ದುಕೊಳ್ಳದಿರುವುದಾಗಿ ಗ್ರಾಮಸ್ಥರು ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ಗ್ರಾಮಸ್ಥರು ಕೈಗೊಂಡ ಪ್ರಯತ್ನಗಳಿಗೆ ಸಹ ಅವರು ಯಾವುದೇ ರೀತಿಯ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಎರಡನೇ ಬೆಳೆಗೆ ನೀರು ಕೊಡುವಂತೆ ಪಕ್ಷಾತೀತವಾಗಿ ಜಿಲ್ಲಾ ಉಸ್ತುವಾರಿಗೆ ಮನವಿ
ಗ್ರಾಮಸ್ಥರಾದ ಕೊಂಡಯ್ಯ, ಬಸವರಾಜ, ವೀರೇಶ್, ಗೋಪಾಲ, ಇನ್ನಿತರರು ಹಾಜರಿದ್ದರು.





