ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರತಿನಿತ್ಯವೂ ಹೆಚ್ಚಳ: ದೇವಿ

Date:

ಮಹಿಳೆ ಮಹಿಳೆಯಾಗಿ, ಕಾರ್ಮಿಕಳಾಗಿ ನಾಗರಿಕಳಾಗಿ ಪ್ರತಿನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾಳೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಹೇಳಿದರು.

ಹಟ್ಟಿ ಪಟ್ಟಣದ ಪೈ ಭವನದ ಆವರಣದಲ್ಲಿ ಬುಧವಾರ ನಡೆದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಲಿಂಗಸುಗೂರು ತಾಲೂಕು ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ಮಹಿಳೆಯರ ಮೇಲೆ ದೌರ್ಜನ್ಯಗಳು ದಬ್ಬಾಳಿಕೆ ಲೈಂಗಿಕ ಕಿರುಕುಳ ಜಾತಿ ಧರ್ಮದ ಜನಾಂಗ ಹೆಸರಿನಲ್ಲಿ ನಿರಂತರವಾಗಿ ನಡೆಯುತ್ತಿದೆ. ಮೋದಿ ಅವರು ಭೇಟಿ ಬಚಾವ್ ಭೇಟಿ ಪಡಾವ್ ಘೋಷಣೆ ಘೋಷಣೆಗಳಾಗಿಯೇ ಉಳಿದಿವೆ. ಕಳೆದ 10 ವರ್ಷದ ಅವಧಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಾಳಿಯಿಂದಾಗಿ ಮಂಡ್ಯ ,ಕಲಬುರ್ಗಿ, ಕೊಪ್ಪಳ ,ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಏತರ ಸಂಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ‌. ನರೇಂದ್ರ ಮೋದಿ ಕಾರ್ಪೊರೇಟ್ ಚೇಲಾಗಳ ಪರವಾಗಿ ಬಜೆಟ್ ನಲ್ಲಿ ಆದ್ಯತೆ ನೀಡಿ ಮಹಿಳಾ ಸಬಲೀಕರಣಕ್ಕೆ ಉದ್ಯೋಗ ಖಾತ್ರಿ ಯೋಜನೆ ಬ್ಯಾಂಕ್‌ಗಳಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯ ಕೊಡುವುದರಲ್ಲಿ ವಿಫಲವಾಗಿದೆ ಎಂದರು.

ಜನವಾದಿ 1

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಮಾತನಾಡಿ, ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ಗ್ರಂಥಾಲಯ, ವಿದ್ಯುತ್ ದೀಪಗಳು, ಉತ್ತಮ ಪರಿಸರ ಇಲ್ಲದೇ ಜನ ಜ್ವಲಂತ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಇನ್ನೊಂದು ಕಡೆ ಮಟಕಾ, ಇಸ್ಪೀಟ್, ಕ್ರಿಕೇಟ್ ಬೆಟ್ಟಿಂಗ್, ಗಾಂಜಾ ದಂಧೆಗಳು ಪಟ್ಟಣ ಸೇರಿ ಸುತ್ತಮುತ್ತಲ ಗ್ರಾಮಗಳ ಕುಟುಂಬಗಳನ್ನು ಬೀದಿಗೆ ತಂದಿವೆ ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಠಾಣೆ ಈ ದಂಧೆಗಳಲ್ಲಿ ಸಂಪೂರ್ಣವಾಗಿ ಶಾಮೀಲಾಗಿದೆ. ಇದರ ವಿರುದ್ಧವಾಗಿ ಮಹಿಳಾ ಸಂಘಟನೆ ಹೋರಾಟ ರೂಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು, ಅಧಿಕಾರಿಗಳು ಸ್ಪಂದಿಸದೇ ಅಸಡ್ಡೆ ತೋರುತ್ತಿದ್ದಾರೆ. ಹಟ್ಟಿಯ ಮಹಿಳೆಯರಿಗೆ ನಿಜವಾದ ಸ್ವಾತಂತ್ರ್ಯ ಸಿಗಬೇಕಿದೆ ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಹುಚ್ಚು ನಾಯಿ ಕಡಿತ: ಬಾಲಕನಿಗೆ ಗಂಭೀರ ಗಾಯ

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಶಕುಂತಲಾ ಪಾಟೀಲ್, ಕಾರ್ಯದರ್ಶಿ, ವರಲಕ್ಷ್ಮೀ, ಮುಖಂಡರಾದ ದಿಲ್ ಶಾದ್, ರಾಜೇಶ್ವರಿ, ಯಮನಮ್ಮ ನಾಯಕ್, ರಾಧಿಕಾ, ಉಮಾದೇವಿ, ನಾಗಮ್ಮ, ಹುಲಿಗೆಮ್ಮ, ಸಾಹಿರಾ ಬೇಗಂ, ಕುಮಾರಿ, ಲಕ್ಷ್ಮೀ ಒಡಕಿ, ಫಾತೀಮಾ, ಅಮೀನುದ್ದೀನ್ ಸಾಸಿಹಾಳ, ಚನ್ನಬಸವ ಅಂಬೇಡ್ಕರ್ ನಗರ, ನಿಂಗಪ್ಪ, ಹನೀಫ್, ಮಹಾಂತೇಶ್, ದಾವೂದ್, ಅಲ್ಲಾಭಕ್ಷ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜನವಾದಿ1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...