ರಾಯಚೂರು | ವೇತನ ಕಡಿತ, ದೌರ್ಜನ್ಯದ ಆರೋಪ; ರಿಮ್ಸ್ ಹೊರಗುತ್ತಿಗೆ ನೌಕರರಿಂದ ಮಿಂಚಿನ ಪ್ರತಿಭಟನೆ

Date:

ಗುತ್ತಿಗೆ ಸಂಸ್ಥೆಯಿಂದ ವೇತನ ಕಡಿತಗೊಳಿಸಿ ಪಿಎಫ್,ಎಸ್ ಐ ಹಣ ವನ್ನು ಸರಿಯಾಗಿ ಜಮಾ ಮಾಡದೇ ಡಿಗ್ರುಪ್ ನೌಕರರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ‌ ರಿಮ್ಸ್ ಆಸ್ಪತ್ರೆಯ ಆವರಣದ ಮುಂದೆ ಹೊರಗುತ್ತಿಗೆ ನೌಕರರು ಗುರುವಾರ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರು.

ಮೈಸೂರು ಮೂಲದ ‌ಸ್ವಿಸ್ ಎಂಬ ಗುತ್ತಿಗೆ ಸಂಸ್ಥೆ ಡಿ ಗ್ರುಪ್ ನೌಕರರ ಮೇಲೆ ಮಾನಸಿಕ ಹಿಂಸೆ ನೀಡುತ್ತಿದೆ, ತಿಂಗಳಿಗೊಮ್ಮೆ ವೇತನ ಜಮಾ ಮಾಡದೇ ಮೂರ್ನಾಲ್ಕು ತಿಂಗಳಿಗೆ ವೇತನ ಜಮಾ ಮಾಡಲಾಗುತ್ತಿದೆ ಎಂದು ದೂರಿದರು.

ಎರೆಡು ತಿಂಗಳ ವೇತನ ಬಾಕಿ ಇಟ್ಟು ಇತ್ತೀಚೆಗೆ ವೇತನ ಪಾವತಿ ಮಾಡಿದ್ದು ಅನೇಕರಿಗೆ 3-5 ಸಾವಿರ ವೇತನ ಕಡಿತಗೊಳಿಸಿದ್ದಾರೆ, ಏಜೆನ್ಸಿ ಅವರಿಗೆ ಕೇಳಿದರೆ ಸಮವಸ್ತ್ರ ಬದಲಾಬಣೆಗೆ ಕಡಿತಗೊಳಿಸಿದ್ದೇವೇ ಎಂದು ಉಡಾಫೆಯ ಉತ್ತರ ನೀಡುತ್ತಿದ್ದಾರೆ. ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಪಾವತಿ ಮಾಡಲಾಗುತ್ತಿದ್ದು ಅದರಲ್ಲಿಯೂ ಸಮವಸ್ತ್ರದ ಹೆಸರಿನಲ್ಲಿ 5ಸಾವಿರ ಕಡಿತಗೊಳಿಸಿದರೆ ಕುಟುಂಬ ನಿರ್ವಹಣೆ ಮಾಡುವುದಾದರು ಹೇಗೆ ಎಂದು ಏಜೆನ್ಸಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ( ರಿಮ್ಸ್) ಭೋದಕ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡಲು ಸಿಬ್ಬಂದಿಯ ಕೊರತೆ‌ಇದೆ‌ ಮೂವರ ಕೆಲಸ ಒಬ್ಬರೇ ಮಾಡಬೇಕಿದೆ, ಗುತ್ತಿಗೆ ಸಂಸ್ಥೆಯವರು ಗೌರವಯುತವಾಗಿ ನಡೆದುಕೊಳ್ಳದೇ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ರಾಜ್ಯದಲ್ಲಿನ ಖಾಲಿ ಹುದ್ದೆಗಳನ್ನು ಒಳ ಮೀಸಲಾತಿ ಆಧರಿಸಿ ಭರ್ತಿಗಾಗಿ ಒತ್ತಾಯಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರಾದ ಆನಂದ, ಪ್ರಶಾಂತ, ರಮೇಶ, ಸಂದೀಪ, ನರೇಶ, ಮಲ್ಲಿಕಾರ್ಜುನ, ವಿನೋದ,ಅನುರಾದ,ಸುನೀತ, ಪುಷ್ಪ, ಈರಮ್ಮ, ಶ್ರೀನಿವಾಸ, ಅಮರಮ್ಮ, ವಿಶ್ವನಾಥ,ನವೀನ ಕುಮಾರ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...