ರಾಯಚೂರು | ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತಾಯ

Date:

ದೇವಿನಗರ ಹಾಗೂ ಚಂದ್ರಬಂಡಾ ರಸ್ತೆಯಲ್ಲಿರುವ ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಕುಡಿಯುವ ನೀರು ಸರಬರಾಜಿಗೆ ಕ್ರಮ ವಹಿಸಬೇಕು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಹಾ ನಗರ ಪಾಲಿಕೆ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದರು.

ನಗರದ ಸಿದ್ರಾಮೇಶ್ವರ ಬಡಾವಣೆಯಲ್ಲಿ ಕುಡಿಯುವ ನೀರು, ಸಮರ್ಪಕ ರಸ್ತೆ, ಚರಂಡಿ ಕಾಲುವೆ, ವಿದ್ಯುತ್ ದೀಪ, ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು,
ಈ ಬಡಾವಣೆಯಲ್ಲಿ ಕೆಲ ರಾಜಕೀಯ ಮುಖಂಡ ಹಿಂಬಾಲಕರು ದೌರ್ಜನ್ಯ ಮಾಡುತ್ತಿದ್ದು ಕ್ರಮ ಕೈಗೊಳ್ಳಬೇಕು, ಬಡವರಿಗೆ ಕಾನೂನು ರಕ್ಷಣೆ ನೀಡಬೇಕು. ಹಾಗೂ , ಸರಕಾರಿ ಜಾಗವನ್ನು ಹದ್ದುಬಸ್ತು ಮಾಡಿಸಿ ಕೂಡಲೇ ತಹಶೀಲ್ದಾರರು, ಮಹಾನಗರಪಾಲಿಕೆಯ ಅಧಿಕಾರಿಗಳು ಜಂಟಿ ಪರಿಶೀಲನೆಗೆ ಮುಂದಾಗಿ, ಕಡುಬಡವರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ



ಸಿದ್ರಾಮೇಶ್ವರ ಬಡಾವಣೆಯಲ್ಲಿ ಸಮೀದಲ್ಲಿ ಎರಡು ಟ್ಯಾಂಕರ್‌ಗಳಿದ್ದು ಪೈಪ್‌ಲೈನ್ ಮೂಲಕ ಸಂಪರ್ಕ ಒದಗಿಸಿ ನೀರು ಸರಬರಾಜಿಗೆ ಕ್ರಮ ವಹಿಸಬೇಕು, ಇದೀಗ ಬೇಸಿಗೆ ಇರುವುದರಿಂದ ತಾತ್ಕಾಲಿಕವಾಗಿ ಮಹಾ ನಗರ ಪಾಲಿಕೆಯ ಅನುದಾನದಲ್ಲಿ ನೀರಿನ ಟ್ಯಾಂಕರ್ ಮೂಲಕ ಸರಬರಾಜು, ಜೊತೆಗೆ ಬೋರ್‌ವೆಲ್‌ಗಳನ್ನು ಹಾಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಬೇಡಿಕೆಗೆ ಕ್ರಮ ಕೈಗೊಳ್ಳದಿದ್ದರೆ ಮಹಾ ನಗರ ಪಾಲಿಕೆ ವಿರುದ್ಧ ಚಕ್ರ ಕೈಗೊಳ್ಳಬೇಕು, ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹೇಮರಾಜ ಅಸ್ಕಿಹಾಳ, ಚಂದ್ರು, ಅನ್ವರ್, ಶ್ರೀನಿವಾಸ ಕೊಪ್ಪರ, ಆಂಜನೇಯ ಕುರುಬದೊಡ್ಡಿ, ಶ್ರೀನಿವಾಸ ಕಲವಲದೊಡ್ಡಿ, ಪ್ರಸಾದ್, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...