ರಾಯಚೂರು | ಕೊನೆ ಭಾಗಕ್ಕೆ ತಲುಪದ ತುಂಗಭದ್ರಾ ನೀರು; ಹೋರಾಟದ ಎಚ್ಚರಿಕೆ

Date:

ಚುಕ್ಕಿ ನಂಜುಂಡಸ್ವಾಮಿ ನೇತೃತ್ವದ ರೈತ ಸಂಘದ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ರಾಯಚೂರು ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಬಾರದೇ ನಿರ್ಲಕ್ಷ್ಯ ಹಾಗೂ ತುಂಗಭದ್ರಾ ಜಲಾಶಯದ 104 ಮೈಲ್ ಕೊನೆಭಾಗಕ್ಕೆ ನೀರು ತಲುಪದೇ ಇರುವುದನ್ನು ವಿರೋಧಿಸಿ ಹೋರಾಟ ನಡೆಸಲಿದೆ ಎಂದು ಸಮಿತಿ ಮುಖಂಡ ನರಸಪ್ಪ ಯಾದವ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಬರ ಘೋಷಣೆ ಮಾಡಿದ್ದು ಬಿಟ್ಟರೆ, ಬೇರೆ ಯಾವ ಪರಿಹಾರ ಕಾರ್ಯಗಳೂ ಪ್ರಾರಂಭವಾಗಿಲ್ಲ. ಕೇಂದ್ರ ಬರ ಅಧ್ಯಯನ ತಂಡ ಕೆಲವೇ ಜಿಲ್ಲೆಗಳಿಗೆ ಭೇಟಿ ನೀಡಿ ಹೋಗಿದೆ.ರಾಯಚೂರು ಜಿಲ್ಲೆಗೆ ಆಗಮಿಸದೆ ಪರಿಸ್ಥಿತಿ ನೋಡದೇ ಇರುವುದು ಖಂಡನೀಯ” ಎಂದರು.

“ಗ್ರಾಮೀಣ ರೈತರಿಗೆ 12 ತಾಸು ವಿದ್ಯುತ್ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಸರ್ಕಾರ, ಈಗ ಮರೆತುಬಿಟ್ಟಿದೆ. 5 ತಾಸುಗಳಾದರೂ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಕೃಷಿ ಪಂಪ್‌ಸೆಟ್ ಅವಲಂಬಿತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ರೈತ ಸಂಘ ಹೋರಾಟ ನಡೆಸಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಂಗದೊಡ್ಡಿ ಮಾತನಾಡಿ, “ಸರ್ಕಾರದ ತಾರತಮ್ಯ ಧೋರಣೆಯಿಂದ ರೈತರ ಸಮಸ್ಯೆಗಳು ಹೆಚ್ಚುತ್ತಿವೆ. ಕೊನೆಭಾಗದ ರೈತರಿಗೆ ನೀರು ಬಾರದೇ ಇದ್ದು, ಎಪಿಎಂಸಿಗಳಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ. ಹತ್ತಿಗೆ ಪ್ರತಿ ಕೆ ಜಿ ಬಾಡ್ ತೆಗೆಯುವ ಪದ್ಧತಿ ನಿಲ್ಲಿಸಬೇಕು. ಇಲ್ಲದೇ ಹೋದಲ್ಲಿ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್ ಮಜೀದ್, ಈರಣ್ಣ ಗೋರ್ಕಲ್, ಅಕ್ಕಮ್ಮ, ನರಸಪ್ಪ ಹೊಕ್ರಾಣ, ನರಸಿಂಗರಾವ ಕುಲ್ಕಣ, ಹುಚ್ಚಪ್ಪ ನಾಯಕ, ರಮೇಶ, ಹುಲಿಗೆಪ್ಪ ಜಾಲಿಬೆಂಚಿ ಿದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...