ರಾಯಚೂರು | ತುಂಗಭದ್ರಾ ಜಲಾಶಯದ ಎಡದಂಡೆ ನಾಲೆಗಳಿಗೆ ನೀರು ಹರಿಸುವಂತೆ ಸೂಚನೆ

Date:

ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ನೀರು ಹರಿಸಿದ್ದು ಮೇಲ್ಬಾಗದಲ್ಲಿ ಅಕ್ರಮವಾಗಿ ಹೆಚ್ಚಿನ ನೀರಾವರಿ ಬೆಳೆಗೆ ನೀರು ಬಳಸಿಕೊಳ್ಳುತ್ತಿರುವುದರಿಂದ ಕೊನೆ ಭಾಗದ ಸಿರವಾರ ವ್ಯಾಪ್ತಿಯಲ್ಲಿ ಗೇಜ್ ನಿರ್ವಹಣೆಯಾಗದೇ ನೀರು ತಲುಪುತ್ತಿಲ್ಲ. ಅಕ್ರಮ ನೀರಾವರಿಗೆ ಅಳವಡಿಸಿರುವ ಟಿಸಿ ತೆರವುಗೊಳಿಸುವುದರ ಜೊತೆಗೆ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು. ಗೇಜ್ ನಿರ್ವಹಣೆಗೆ ಟೆಲಿ ಮೀಟರ್ ಅಳವಡಿಕೆ ಮಾಡಲು 07 ದಿನಗಳ ಕಾಲ ಗಡುವು ನೀಡಲಾಗುವುದು. ಸರಿಪಡಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವುದಾಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಎಚ್ಚರಿಕೆ ನೀಡಿದ್ದಾರೆ.

ರಾಯಚೂರಿನಲ್ಲಿ ನಡೆದ ತುಂಗಭದ್ರಾ ಜಲಾಶಯದ ಎಡದಂಡೆ ನಾಲೆಯ ಕಾಲುವೆಗಳಿಗೆ ನೀರು ಹರಿಸುವ ಕುರಿತು ನೀರಾವರಿ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಸಭೆಯಲ್ಲಿ ಅವರು ಮಾನತಾಡಿದರು. “ಮೇಲ್ಬಾಗದಲ್ಲಿ ಅಕ್ರಮ ನೀರಾವರಿಯಿಂದ ಕೆಳಭಾಗಕ್ಕೆ ನೀರು ತಲುಪದೇ ರೈತರು ಹೋರಾಟ ಮಾಡಿದ್ದು, ಮೇಲ್ಭಾಗದಲ್ಲಿ ಅಕ್ರಮ ನೀರಾವರಿ ತಡೆಗೆ ವಿದ್ಯುತ್ ಸಂಪರ್ಕ ಕಡಿತದ ಜೊತೆಗೆ ಟಿ ಸಿ ಅಳವಡಿಕೆ ಮಾಡಿರುವುದನ್ನು ತೆರವುಗೊಳಿಸಬೇಕು. 47 ಮೈಲ್‌ನಲ್ಲಿ 11.80 ರಿಂದ 11.90 ವರೆಗೆ ನಿರ್ವಹಣೆ ಆಗಬೇಕು. ಕೆಳಭಾಗದಲ್ಲಿಯೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು” ಎಂದು ಸೂಚಿಸಿದರು.

“ಈ ಹಿಂದೆ ಕೊಪ್ಪಳ ಸಭೆಯಲ್ಲಿ ಸೂಚಿಸದಂತೆ ವಡ್ಡರಹಟ್ಟಿಯಿಂದ ಹಿಡಿದು ಕೊನೆ ಭಾಗದವರೆಗೆ ಗೇಜ್ ನಿರ್ವಹಣೆ ಮಾಡಿದರೆ, ರೈತರಿಗೆ ನೀರು ದೊರೆಯುತ್ತದೆ. ಮೈಲ್ ನಂ.104 ರಲ್ಲಿ 5.5 ಗೇಜ್ ನಿರ್ವಹಣೆ ಮಾಡಿದರೆ ನೀರು ದೊರೆಯಲು ಸಾಧ್ಯ. ಮೈಲ್ ನಂ.69ರಲ್ಲಿ ಪ್ರಸ್ತುತ 8.5೦ ಅಡಿ ಮತ್ತು 104 ರಲ್ಲಿ 5.5 ಅಡಿ ಗೇಜ್ ನಿರ್ವಹಣೆ ಆಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಲ್ ನಂ.47ರಲ್ಲಿ 11.50 ಅಡಿ ಮೈಲ್ ನಂ.8.40 ಅಡಿ ನಿರ್ವಹಣೆಯಾಗಬೇಕಿದೆ. ಕೆಳಬಾಗಕ್ಕೆ ಸಂಪೂರ್ಣವಾಗಿ ನೀರು ಒದಗಿಸಲು ಮೇಲ್ಬಾಗದಿಂದ ಕೆಳ ಭಾಗದವರೆಗೆ ಕಾಲುವೆಗಳ ಗೇಜ್ ಪರಿಶೀಲನೆ ಮತ್ತು ಗೇಜ್ ಅಳವಡಿಕೆ ಕ್ರಮವಹಿಸಲು ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಸಭೆ ಮಾಡಿ ಮೇಲ್ಭಾಗದಿಂದ ಕೆಲ ಭಾಗದವರೆಗೆ ಗೇಜ್ ಪರಿಗಣಿಸಿ ಸರಿಪಡಿಸಬೇಕು” ಎಂದು ತಿಳಿಸಿದರು.

ರೈತ ಮುಖಂಡ ಚಾಮರಸ ಮಾಲಿ ಪಾಟೀಲ್ ಮಾತನಾಡಿ, “ಮೇಲ್ಬಾಗದಲ್ಲಿ ಅಕ್ರಮ ನೀರಾವರಿಯಿಂದ ಕೆಳಭಾಗಕ್ಕೆ ನೀರು ತಲುಪುತ್ತಿಲ್ಲ. ಜೊತೆಗೆ ಎಡದಂಡೆ ಕಾಲುವೆ ಮೇಲೆ ಹೋಗಲು ಸೂಕ್ತ ರಸ್ತೆ ನಿರ್ಮಿಸಿ ಜಂಗಲ್ ಕಟಿಂಗ್ ಮಾಡಬೇಕು ಹಾಗೂ ಅಕ್ರಮವಾಗಿ ಅಳವಡಿಸಿರುವ ಪೈಪ್‌ಗಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು” ಎಂದು ಒತ್ತಾಯಿಸಿದರು.

“ಮೇಲ್ಬಾಗದಲ್ಲಿ ಅಕ್ರಮ ತಡೆದರೆ ಕೆಳಭಾಗಕ್ಕೆ ನೀರು ತಲುಪಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನೀರಾವರಿ ಅಧಿಕಾರಿಗಳಿಗೆ ಆದೇಶ ಮಾಡಿ ಸಮರ್ಪಕ ಗೇಜ್ ನಿರ್ವಹಣೆಗೆ ಆದೇಶಿಸಬೇಕು” ಎಂದರು.

ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಮಾತನಾಡಿ, “ಕಾಲುವೆಯಲ್ಲಿ ಗೇಜ್ ನಿರ್ವಹಣೆ ಇಲ್ಲದೆ ಇರುವುದರಿಂದ ಕೆಳ ಭಾಗಕ್ಕೆ ನೀರು ತಲುಪುತ್ತಿಲ್ಲ. ಗೇಜ್ ನಿರ್ವಹಣೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು. ಹಂತ ಹಂತವಾಗಿ ಅಧಿಕಾರಿಗಳು ಕಾಲುವೆ ಮೇಲೆ ಪರಿಶೀಲನೆ ಮಾಡಿ, ಗೇಜ್ ನಿರ್ವಹಣೆಗೆ ಸೂಚನೆ ನೀಡಬೇಕು” ಎಂದು ತಿಳಿಸಿದರು.

ಮಾನ್ವಿ ಶಾಸಕ ಹಂಪಯ್ಯ ಸಾಹುಕಾರ ಮಾತನಾಡಿ, “ಕಾಲುವೆ ಮೇಲೆ ಪೋಲಿಸ್ ಬಂದೋಬಸ್ತಿನೊಂದಿಗೆ ಕಾಲುವೆ ಗೇಜ್ ನಿರ್ವಹಣೆ ಮಾಡಬೇಕು. ರೈತರೂ ಕೂಡ ಕಾಲುವೆ ಮೇಲೆ ಬರಲು ಹೆದರುತ್ತಾರೆ. ಆಗ ಸುಲಭವಾಗಿ ನೀರನ್ನು ಕೊನೆಭಾಗದವರೆಗೆ ಹರಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಎಸ್‌ಸಿಬಿ ನಿಖಿಲ್, ಸಹಾಯಕ ಆಯುಕ್ತೆ ಮಹೆಬೂಬಿ, ನೀರಾವರಿ ಅಧಿಕಾರಿಗಳು, ರೈತ ಮುಖಂಡರುಗಳಾದ ನಾಗನಗೌಡ ಹರವಿ, ಶಂಕರ್ ಗೌಡ ಹರವಿ, ಅಮರೇಶ ಬಲ್ಲಟಗಿ, ಮಾಜಿ ಶಾಸಕ ಗಂಗಾಧರ ನಾಯಕ ಸೇರಿದಂತೆ ರೈತರು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...