ರಾಯಚೂರು | ಸಂವಿಧಾನದಲ್ಲಿ ನಮಗೂ ಹಕ್ಕಿದೆ, ನಮಗೂ ಗೌರವ ಕೊಡಿ: ಅಕ್ಕಯ್ ಪದ್ಮಶಾಲಿ

Date:

ಲಿಂಗತ್ವ ಅಲ್ಪಸಂಖ್ಯಾತರಾದ ನಾವು ಅಂತರಲಿಂಗವನ್ನು ನಿರ್ಧರಿಸುವ ಮಹಾಲಿಂಗಿಗಳಾಗಿದ್ದೇವೆ. ನಾವು ಭಿಕ್ಷಾಟನೆ ಮಾಡುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಸಂವಿಧಾನದಲ್ಲಿ ನಮಗೂ ಹಕ್ಕಿದೆ. ನಮ್ಮನ್ನು ಗೌರವದಿಂದ ನಡೆಸಿಕೊಳ್ಳಿ ಎಂದು ಲೇಖಕಿ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಹೇಳಿದರು.

ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಎಲ್ಲಾ ಮಹಿಳೆಯರು ಮತ್ತು ಹುಡುಗಿಯರಿಗಾಗಿ ಹಕ್ಕುಗಳು, ಸಮಾನತೆ, ಸಬಲೀಕರಣ” ವಿಷಯ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಂವಿಧಾನ ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರೂ ಸೇರಿದಂತೆ ಸರ್ವರಿಗೂ ಸಮಾನ ಅವಕಾಶ ನೀಡಿದೆ. ಅಲ್ಪಸಂಖ್ಯಾತರ ಕುರಿತು ಸಮಾಜಕ್ಕಿರುವ ತಾತ್ಸಾರದ ವಿರುದ್ಧ ಧ್ವನಿ ಎತ್ತಬೇಕಾಗಿದೆ. ಸಮುದಾಯದ ನೋವುಗಳನ್ನು ಹಂಚಿಕೊಳ್ಳುವುದರ ಜೊತೆಗೆ ಹೋರಾಟದಿಂದಲೇ ಸಂವಿಧಾನದ ಗುರಿಗಳನ್ನು ತಲುಪಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ಎಸ್‌ಸಿ ಎಸ್‌ಟಿ ಹಣ ದುರ್ಬಳಕೆ; ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಈ ವೇಳೆ ವಿವಿಯ ಹಂಗಾಮಿ ಕುಲಪತಿ ಡಾ.ಸುಯಮೀಂದ್ರ ಕುಲಕರ್ಣಿ, ಉಪ ಕುಲಸಚಿವ ಡಾ.ಕೆ.ವೆಂಕಟೇಶ್, ಡೀನರಾದ ಶಿಕ್ಷಣ ನಿಕಾಯದ ಪ್ರೊ.ಪಾರ್ವತಿ ಸಿ.ಎಸ್ ವೇದಿಕೆ ಮೇಲೆ ಉಪಸ್ಥಿತರಿದ್ದರು, ವಾಣಿಜ್ಯ ನಿಕಾಯದ ಪ್ರೊ.ಪಿ.ಭಾಸ್ಕರ್, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಜಿ.ಎಸ್.ಬಿರಾದಾರ, ತಾಯಪ್ಪ.ಟಿ, ಸಸ್ಯಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕಿ ಪನ್ನಗವೇಣಿ, ಮಹಿಳಾ ಅಧ್ಯಯನ ವಿಭಾಗದ ಅತಿಥಿ ಉಪನ್ಯಾಸಕ ಡಾ.ಭೀಮೇಶ ಮಾಚನೂರು, ಕಾರ್ಯಕ್ರಮ ಸಂಯೋಜಕಿ ಡಾ.ಶಾಂತಾದೇವಿ ಪಾಟೀಲ, ಪೂಜಾ ಮುರಾರಿ, ಅನಿಲ್ ಮಾಣಿಕ್ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...