ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಹುಸೇನ್ ಅಳವಂಡಿ ತಿಳಿಸಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದವರು ನಮ್ಮ ಪಕ್ಷದ ವತಿಯಿಂದ ಈಗಾಗಲೇ ಜನತಾ ಬಜೆಟ್ ಪುಸ್ತಕದಲ್ಲಿ ಮಂಡಿಸಿರುವ ಎಲ್ಲಾ ಜನಪರ ಯೋಜನೆಗಳಿಗೆ ಹಣ ಮೀಸಲಿಡಬೇಕೆಂದು ಎಂದು ಆಗ್ರಹಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷರಾದ ಖಾದರ್ ಭಾಷಾರವರು ಮಾತನಾಡಿ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ನಗರದ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪ್ರತಿ ವರ್ಷ ಸರಾಸರಿ 250ಕ್ಕೂ ಹೆಚ್ಚು ಸಂಭವಿಸುತ್ತಿರುವ ರಸ್ತೆ ಅಪಘಾತ ಮರಣಗಳನ್ನು ತಡೆಯಲು ರಿಂಗ್ ರೋಡ್ ಯೋಜನೆಯನ್ನು 2026ರ ಮುಂಬರುವ ಬಜೆಟ್ನಲ್ಲಿ ತಕ್ಷಣ ಮಂಜೂರು ಮಾಡಬೇಕು.
ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಮಾತ್ರವಲ್ಲದೆ ಕೈಗಾರಿಕಾ ಅಭಿವೃದ್ದಿಗೂ ಮಹತ್ವದ ಉತ್ತೇಜನ ನೀಡಲಿದೆ ಹಾಗೂ ಜಿಲ್ಲೆಯ ಆರ್ಥಿಕ ಪ್ರಗತಿ ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ರಾಯಚೂರಿನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಅನ್ನು ತಕ್ಷಣ ಮಂಜೂರು ಮಾಡಿ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ಕೆಎಸ್ಆರ್ಪಿ 13ನೇ ಪಡೆಯ ಸ್ಥಾಪನೆಯನ್ನು ಘೋಷಿಸಬೇಕು ಮತ್ತು ಜಿಲ್ಲೆಯ ಹಲವಾರು ಸಮಸ್ಯೆಗಳಿಗೆ ಈ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ನೀಡಬೇಕು’ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿಯ ಬಳಿ ಸ್ಫೋಟಕ ವಸ್ತುಗಳು ಪತ್ತೆ; ಪೊಲೀಸರು ತನಿಖೆ ಆರಂಭ
ಈ ಸಂದರ್ಭದಲ್ಲಿ ಅಬ್ದುಲ್ ಮತೀನ್ , ತೌಸೀಫ್ ಅಹಮ್ಮದ್ , ಶೇಖ್ ದಾವೂದ್ ,ಮಹಮ್ಮದ್ ಅತೀಫ್ ಉಪಸ್ಥಿತರಿದ್ದರು.





