ರಾಯಚೂರು | ಪಶ್ಚಿಮ ಬಂಗಾಳದ ವರದಿಗಾರ ಸಂತುಪನ್ ಬಂಧನಕ್ಕೆ ಖಂಡನೆ

Date:

ಪಶ್ಚಿಮ ಬಂಗಾಳದ ಸಂದೇಶ ಕಾಲಿಯಲ್ಲಿ ರಿಪಬ್ಲಿಕ್ ಟಿವಿ ನ್ಯೂಸ್ ಚಾನಲ್‌ನ ವರದಿಗಾರ ಸಂತುಪನ್ ಅವರ ಬಂಧನ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

“ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ತನ್ನದೇ ಆದ ಸ್ವಾತಂತ್ರ್ಯ ಇದೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಕರ್ತವ್ಯ ನಿರತ ಪತ್ರಕರ್ತನನ್ನು ಬಂಧನ ಮಾಡುವ ಮೂಲಕ ಮಾಧ್ಯಮ ಸ್ವಾತಂತ್ರ್ಯ ಹರಣ ಮಾಡಲು ಹೊರಟಿರುವುದನ್ನು ಖಂಡಿಸಿದರು. ಕೂಡಲೇ ಬಂಧಿತ ಪತ್ರಕರ್ತನನ್ನು ಬಿಡುಗಡೆ ಮಾಡಬೇಕು ಮತ್ತು ಅವರ ಮೇಲೆ ಹಾಕಿರುವ ಎಲ್ಲ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

“ಪತ್ರಕರ್ತರ ಮೇಲೆ ಹಲ್ಲೆ, ಕೊಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಅಘಾತಕಾರಿಯಾಗಿದೆ. ಪತ್ರಕರ್ತರ ರಕ್ಷಣೆ ಕಾನೂನು ರೂಪಿಸಬೇಕು. ಮುಕ್ತ ಪತ್ರಿಕೋದ್ಯಮಕ್ಕೆ ಅವಕಾಶ ನೀಡಬೇಕು.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇರುವ ಸಮಿತಿ ನಿಯಮಿತ ಸಭೆ ನಡೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ: ಶಿವಾನಂದ್ ಕರಾಳೆ

ಪ್ರತಿಭಟನೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್ ಗುರುನಾಥ, ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಮಡಿವಾಳರ್, ಪತ್ರಕರ್ತರುಗಳಾದ ಕೆ ಸತ್ಯನಾರಾಯಣ, ದತ್ತು ಸರ್ಕಿಲ್, ಬಸವರಾಜ ನಾಗಡದಿನ್ನಿ, ವಿಜಯಕುಮಾರ ಜಾಗಟಗಲ್, ಭೀಮೇಶ ಪೂಜಾರಿ, ಧೀರೇಂದ್ರ ಕುಲಕರ್ಣಿ, ಮಲ್ಲಿಕಾರ್ಜುನಯ್ಯ ಸ್ವಾಮಿ, ವೆಂಕಟೇಶ ಹೂಗಾರ, ರಂಗನಾಥ, ಎಚ್ ವೀರನಗೌಡ, ಮುತ್ತಣ್ಣ ಹೇಳವರ, ಗಿರಿಧರ ಕುಲಕರ್ಣಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...