ರಾಯಚೂರು | ಬಿಜೆಪಿ‌ ಅವಧಿಯಲ್ಲಿ ಆತ್ಮಹತ್ಯೆ ಪ್ರಕರಣ ಸಂಬಂಧ ಹೆಸರಿದ್ದರೂ ಯಾಕೆ ರಾಜೀನಾಮೆ ನೀಡಿಲ್ಲ?: ರಜಾಕ್ ಉಸ್ತಾದ್

Date:

ರಾಜ್ಯದಲ್ಲಿ ಬಿಜೆಪಿ ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ಕೇವಲ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ನೀಡಬೇಕೆನ್ನುವದು ಹಾಸ್ಯಾಸ್ಪದ. ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ಡೆತ್‌ನೋಟ್‌ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖವಾಗಿತ್ತು. ಯಾಕೆ ಬಿಜೆಪಿಯವರು ರಾಜೀನಾಮೆ ಬಗ್ಗೆ ಮಾತನಾಡಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ರಜಾಕ್ ಉಸ್ತಾದ್ ಹೇಳಿದರು.

ರಾಯಚೂರು ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸಚಿನ್ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತರು ಎಂದಿರುವುದು ಬಿಜೆಪಿಯವರಿಗೆ ಅರ್ಥವಾಗಿಲ್ಲ. ಹಿಂದೆ ಸ್ವಂತ ಸಹೋದರನ ವಂಚನೆ ಪ್ರಕರಣ ಹೊರಬಂದಾಗ “ನನಗೆ ಸಂಬಂಧವೇ ಇಲ್ಲ” ಎಂದಿದ್ದ ಪ್ರಹ್ಲಾದ್ ಜೋಶಿಯವರ ರಾಜೀನಾಮೆಯನ್ನು ಬಿಜೆಪಿಯವರು ಕೇಳಿದ್ದರೇ?‌. ನೇರವಾಗಿ ಜೋಶಿಯವರ ಹೆಸರಿನಲ್ಲೇ ವಂಚನೆ ನಡೆದಿತ್ತಲ್ಲವೇ, ಆಗ ಯಾಕೆ ರಾಜೀನಾಮೆ ಕೇಳಿಲಿಲ್ಲ” ಎಂದು ಕಿಡಿಕಾರಿದರು.

“ಬಿಜೆಪಿ ಆಡಳಿತದ ಕೆಲವೊಂದು ವಿಷಯಗಳನ್ನು ಬಯಲಿಗೆಳೆಯುವೆ. ಬಿಜೆಪಿ ಅಧಿಕಾರದ ಸಂದರ್ಭದಲ್ಲಿ ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ಚಿತ್ರನಟಿಯೊಂದಿಗೆ ವಿರೋಧ ಪಕ್ಷದ ನಾಯಕರ ಆಪ್ತನ ಬಂಧನವಾಗಿತ್ತಲ್ಲವೇ? ಆಗ ಅವರು ತಮ್ಮ ಆಪ್ತನ ಹಗರಣದ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದರೇ? ಸ್ವಂತ ತಂದೆಯೇ ಪೋಕ್ಸೊ ಪ್ರಕರಣ ಎದುರಿಸುತ್ತಿರುವಾಗ ವಿಜಯೇಂದ್ರ ರಾಜೀನಾಮೆ ಕೊಡಬೇಕಲ್ಲವೇ? ತಂದೆಯ ಮೇಲೆ ಕೋವಿಡ್ ಹಗರಣದಲ್ಲಿ ಲೂಟಿಗೈದ ಆರೋಪವಿರುವಾಗ ವಿಜಯೇಂದ್ರ ಯಾವ ಮುಖ ಹೊತ್ತುಕೊಂಡು ತಿರುಗುತ್ತಿದ್ದಾರೆ?. ಬಿಜೆಪಿ ನಿಯೋಗವು ಸತ್ಯಶೋಧನೆಗಾಗಿ ಭೇಟಿ ನೀಡುವ ಜಾಗಗಳು ಬೇರೆಯೇ ಇವೆ. ಬಿಜೆಪಿಯ ಸತ್ಯಶೋಧನಾ ನಿಯೋಗ ಮುನಿರತ್ನನವರ ಮನೆಗೆ ಹಾಗೂ ಅವರಿಂದ ಸಂತ್ರಸ್ತರಾದ ಮಹಿಳೆಯರ ಮನೆಗೆ ಹೋಗಿ ಸತ್ಯಶೋಧನೆ ಮಾಡಲಿ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್ ಹಗರಣದ ಬಗ್ಗೆ ನ್ಯಾ.ಕುನ್ಹಾ ಅವರ ವರದಿಯ ಅಂಶಗಳ ಬಗ್ಗೆ ಬಿಜೆಪಿಯ ನಿಯೋಗ ಸತ್ಯಶೋಧನೆ ಮಾಡಲಿ. ವಿಜಯೇಂದ್ರ ವಿರುದ್ಧ ಇ.ಡಿಯಲ್ಲಿ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆಯ ಬಗ್ಗೆ ಸತ್ಯಶೋಧನೆ ಮಾಡಲಿ. ವಿಜಯೇಂದ್ರ ಮಾರಿಷಸ್, ಮಾಲ್ಡಿವ್ಸ್‌ನಲ್ಲಿ ಅಕ್ರಮ ಹಣ ಹೂಡಿಕೆ ಮಾಡಿದ್ದಾರೆಂಬ ಯತ್ನಾಳ್ ಅವರ ಹೇಳಿಕೆಯ ಬಗ್ಗೆ ಸತ್ಯಶೋಧನೆ ಮಾಡಲಿ” ಎಂದು ತಾಕೀತು ಮಾಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ: ಹೋರಾಟ ಸಮಿತಿ ಸಂಭ್ರಮ

“ಸರ್ಕಾರ ಉರುಳಿಸಲು ಒಂದೂವರೆ ಸಾವಿರ ಕೋಟಿ ಹಣ ಸಂಗ್ರಹಿಸಿ ಇಡಲಾಗಿದೆಯೆಂಬ ಬಿಜೆಪಿ ಶಾಸಕರ ಹೇಳಿಕೆಯ ಬಗ್ಗೆ, ಆ ಹಣದ ಮೂಲದ ಬಗ್ಗೆ ಸತ್ಯಶೋಧನೆ ಮಾಡಲಿ. ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಸಂಘದಲ್ಲಿ ನೂರಾರು ಕೋಟಿ ಹಗರಣ ನಡೆಸಿದ್ದಾರಲ್ಲ, ಅದರ ಬಗ್ಗೆ ಸತ್ಯಶೋಧನೆ ಮಾಡಲಿ. ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣ, ಭೋವಿ ಅಭಿವೃದ್ಧಿ ನಿಗಮ ಹಾಗೂ ನೀರಾವರಿ ಹಗರಣದ ಬಗ್ಗೆ ಸತ್ಯಶೋಧನೆ ಮಾಡಲಿ” ಎಂದರು.

“ಸುಳ್ಳಿನ ಶೂರರು ಸತ್ಯಶೋಧನೆ ಮಾಡುತ್ತೇವೆ ಎನ್ನುವುದು ದೊಡ್ಡ ಜೋಕ್, ಬಿಜೆಪಿಯವರಿಗೆ ಸುಳ್ಳಿನ ಶೋಧನೆ ಮಾಡುವುದು ಮಾತ್ರ ತಿಳಿದಿದೆ. ರಾಜ್ಯಾಧ್ಯಕ್ಷ ಹಾಗೂ ವಿರೋದ ಪಕ್ಷದ ನಾಯಕರ ಮಾತಿಗೆ ಸ್ವಂತ ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಹೀಗಿರುವಾಗ ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟುಬಿಡಬೇಕೆ?” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...