ರಾಯಚೂರು | ಗಾಳಿ-ಮಳೆಗೆ ನೆಲಕಚ್ಚಿದ ಸಜ್ಜೆ, ಭತ್ತ; ರೈತರು ಕಂಗಾಲು

Date:

ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಗಲಗ, ಅರಕೇರಾ, ಗಣೇಕಲ್ ಸೇರಿದಂತೆ ರಾಯಚೂರಿನ ಹಲವೆಡೆ ಸಜ್ಜೆ, ಭತ್ತ ಸೇರಿ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ದೇವದುರ್ಗ ಭಾಗದ ರೈತರು ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಎಂದು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರೆ, ಇನ್ನೊಂದು ಕಡೆ ಮಳೆ ಗಾಳಿಯಿಂದ ಬೆಳೆ ಎಲ್ಲಾ ಹಾನಿಯಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

“ಮೂರು ಎಕರೆಯಲ್ಲಿ ಸಜ್ಜೆ ಬೆಳೆದಿದ್ದೆ. ಇನ್ನೊಂದು ವಾರದಲ್ಲಿ ಕೊಯ್ಲಿಗೆ ಸಿದ್ಧತೆ ನಡೆಸಿದ್ದೆ. ಈ ಬಾರಿ ಎಕರೆಗೆ 20 ಚೀಲ ಇಳುವರಿ ನಿರೀಕ್ಷಿಸಿದ್ದೆ. ಈಗ ಶೇ 50ಕ್ಕಿಂತ ಹೆಚ್ಚು ಬೆಳೆ ನಾಶ ಆಗಿದೆ. ಬೆಳೆ ನೋಡಿದರೆ ಕಣ್ಣೀರು ಬರುತ್ತಿದೆ. ರೈತರ ಗೋಳು ಕೇಳುವವರೇ ಇಲ್ಲದಂತಾಗಿದೆ” ಎಂದು ರೈತ ಶಿವನಗೌಡ ನಾಯಕ ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 08 at 1.12.19 PM

“ಬೆಳೆಗೆ ನಾಟಿ ಮಾಡಿ ಆಗಲೇ ಒಂದೆರೆಡು ಬಾರಿ ಕ್ರಿಮಿನಾಶಕ, ಗೊಬ್ಬರ ಸಿಂಪಡಿಸಿ ಲಕ್ಷಾಂತರ ರೂ ಖರ್ಚು ಮಾಡಿದ್ದೇನೆ. ಎಕರೆಗೆ ಏನಿಲ್ಲವೆಂದರೂ 25-30 ಸಾವಿರ ರೂ ಖರ್ಚಾಗಿದೆ. ಇನ್ನೂ ಕೆಲವು ರೈತರು ಲೀಜ್ ಪಡೆದುಕೊಂಡಿದ್ದು ಜಮೀನು ಮಾಲಿಕರಿಗೆ ಆಗಲೇ ಹಣ ಪಾವತಿ ಮಾಡಿದ್ದಾರೆ. ಜತೆಗೆ ಬೆಳೆಗೂ ಖರ್ಚು ಮಾಡಿದ್ದು ನಷ್ಟ ಮೈಮೇಲೆ ಎಳೆದುಕೊಂಡಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಯಚೂರು | ‘ಏಮ್ಸ್ʼ ಮಂಜೂರಿಗೆ ಸಂಸದರ ಸಕರಾತ್ಮಕ ಪ್ರತಿಕ್ರಿಯೆ: ಬಸವರಾಜ ಕಳಸ

ಬೆಳೆದಿದ್ದ ಬೆಳೆಯೆಲ್ಲಾ ಮಳೆ ಗಾಳಿಗೆ ಹಾನಿಯಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದ್ದು, ಸರಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...