ರಾಯಚೂರು | ಸರ್ಕಾರಗಳ ಗುತ್ತಿಗೆ ಪದ್ಧತಿಯಿಂದ ಕಾರ್ಮಿಕರನ್ನು ಒಕ್ಕಲೆಬ್ಬಿಸುತ್ತಿದ್ದಾರೆ: ಸೈಯದ್ ಮುಜೀಬ್

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯಂ ನೇಮಕಾತಿ ಪದ್ದತಿ ತೆಗೆದು ವ್ಯವಸ್ಥಿತವಾಗಿ ಗುತ್ತಿಗೆ ಪದ್ದತಿ ಜಾರಿ ಮಾಡಿ ಕೆಲಸದ ಅಭದ್ರತೆ ಮಾಡುತ್ತಿವೆ ಹಾಗೂ ಉದ್ಯೋಗ ಸೃಷ್ಟಿಮಾಡುವಲ್ಲಿ ವಿಫಲವಾಗಿವೆ ಎಂದು ಸಿಪಿಎಂ ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್ ಹೇಳಿದರು.

ರಾಯಚೂರು ನಗರದ ರಂಗ ಮಂದಿರದಲ್ಲಿ ರಾಯಚೂರು ಜಿಲ್ಲಾ ಸಿಪಿಎಂ 14ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ ಮಾಡಿ ಮಾತನಾಡಿದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಿರುವ ಉದ್ಯೋಗಗಳಿಗೆ ಭದ್ರತೆ ಕೊಡುತ್ತಿಲ್ಲ. ಆಡಳಿತ ಸರ್ಕಾರ ಕಾರ್ಮಿಕರ ಪರವಾಗಿದ್ದ ನಲವತ್ತು ಸೌಲಭ್ಯಗಳಿರುವ ಕಾನೂನುಗಳನ್ನ ತೆಗೆದು ನಾಲ್ಕು ಕಾರ್ಮಿಕ‌ ಕಾಯ್ದೆ ಸಂಯುಕ್ತ ಮಾಡಿ ಕಾರ್ಮಿಕರನನ್ನು ಬೀದಿಪಾಲು ಮಾಡುತ್ತಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೇತನದಲ್ಲಿಯೂ ಕೂಡ ಕನಿಷ್ಠ ವೇತನ ಜಾರಿ ಮಾಡಲಾಗದೆ ಮಾಲೀಕರ ಪರವಾಗಿ ಸರ್ಕಾರಗಳು ಕೆಲಸ ಮಾಡುತ್ತಿವೆ. ದೇಶ ಕಟ್ಟುವ ರೈತ, ಕಾರ್ಮಿಕರ ವಿರೋಧಿ ನೀತಿಗಳನ್ನು ಸರ್ಕಾರ ಜಾರಿಗೆ ತಂದು ಒಕ್ಕಲೆಬ್ಬಿಸುತ್ತಿವೆ. ದೇಶದಲ್ಲಿರುವ ರೈತರ ಭೂಮಿಯನ್ನು ಕಸಿದುಕೊಂಡು ಬಹುರಾಷ್ಟ್ರೀಯ ಕಂಪನಿಗಳಿಗೆ ಕೋಡಲು ಮುಂದಾಗಿವೆ‌. ಇದರಿಂದಾಗಿ ದೇಶದಲ್ಲಿ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗುತ್ತದೆ. ಈ ಸರ್ಕಾರಗಳ ನೀತಿ ವಿರುದ್ಧ ದೊಡ್ಡ ಮಟ್ಟದಲ್ಲಿ ರೈತ ಕಾರ್ಮಿಕರು ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಎಚ್ಚರಿಸಬೇಕಾಗಿದೆ” ಎಂದು ಸಲಹೆ ನೀಡಿದರು.

ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ ಕೆ ಪ್ರಕಾಶ ಮಾತನಾಡಿ‌, “ದೇಶದಲ್ಲಿ ಕೇಂದ್ರ ಸರ್ಕಾರ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುತ್ತದೆ. ನಿಜವಾದ ಜನರ ಸಂಕಷ್ಟಗಳಾದ ಬಡತನ, ನಿರುದ್ಯೋಗ, ರೈತರು ಬೆಳೆದ ಬೆಳೆಗಳಿಗೆ ಬೆಂಬಲಿತ ಬೆಲೆ ಕೊಡಲಾರದೆ ಧರ್ಮದ ಅಫೀಮಿನಲ್ಲಿ ದಾರಿ ತಪ್ಪಿಸುತ್ತಿವೆ” ಎಂದು ಆರೋಪಿಸಿದರು.

“ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ನೀತಿ ತಂದು ರಾಜ್ಯ ಸರ್ಕಾದಿಂದ ಜಾರಿ ಮಾಡಿಸಲು ಮುಂದಾಗಿವೆ. ಕೇಂದ್ರ ಸರ್ಕಾರದ ನೀತಿಯಿಂದ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುತ್ತಿವೆ. ರಾಜ್ಯ ಸರ್ಕಾರ‌, ಕೇಂದ್ರ ಸರ್ಕಾರದ ನೀತಿ ವಿರೋಧಿಸುವಲ್ಲಿ ವಿಫಲವಾಗಿದೆ‌. ವಕ್ಫ್‌ ಕೂಡ ಸುಪ್ರೀಂ ಕೊರ್ಟ್ ಆದೇಶದಂತೆ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಆದೇಶವಾಗಿದೆ. ಆದರೆ ಪ್ರಸ್ತುತ ಬಿಜೆಪಿಯವರು ವಕ್ಫ್‌ ಹೆಸರಿನಲ್ಲಿ ರಾಜಕೀಯ ಮಾಡಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ. ಎರಡೂ ಸರ್ಕಾರಗಳು ಉದ್ಯೋಗ‌, ಆರೋಗ್ಯ, ಶಿಕ್ಷಣ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ” ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ನಮ್ಮ ಶಾಲೆ ಮುಚ್ಚಕ್ಕೆ ಬಿಡಲ್ಲ: ಬ್ಯಾಲಹಳ್ಳಿ ಹೈಸ್ಕೂಲ್ ವಿದ್ಯಾರ್ಥಿಗಳ ಪೋಷಕರ ಆಕ್ರೋಶ

“ದೇಶದಲ್ಲಿ ಎಡ ಮತ್ತು ಪ್ರಜಾಸತ್ತಾತ್ಮಕ ರಾಜಕೀಯ ಗಟ್ಟಿಳಿಸಲು ಸಿಪಿಐಎಂ 14ನೇ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಏಮ್ಸ್, ನೀರಾವರಿ ಯೋಜನೆ, ಕೈಗಾರಿಕೆಗಾಗಿ ದೊಡ್ಡ ಹೋರಾಟ ಮಾಡಲು ಎರಡು ದಿನ ನಡೆಯುವ ಸಮ್ಮೇಳನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಹೇಳಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಕೆಜಿ ವೀರೇಶ್, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್ ಪದ್ಮಾ, ನರಸಣ್ಣ ನಾಯಕ, ಶರಣಬಸವ, ಶಬ್ಬೀರ್, ಗಿರಿಯಪ್ಪ ಪೂಜಾರಿ, ದೇವಿಂದ್ರಗೌಡ, ಶೇಖಮ್ಮ ದೇಸಾಯಿ, ವರಲಕ್ಷ್ಮೀ,ಎಸ್ ಎಸ್ ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...