ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

Date:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಹಾಗೂ ರಾಯಚೂರು ಭಾಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಧರಣಿ ನಡೆಸಿದರು.

“ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ತತ್ತರಿಸಿದ್ದು, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕಾಯಕ ಬಂಧುಗಳಿಗೆ ಗುರುತಿನ ಚೀಟಿ, ಪ್ರೋತ್ಸಾಹಧನ ನೀಡುತ್ತಿಲ್ಲ. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಿ ಕೂಲಿಕಾರರಿಗೆ ₹600 ಕೂಲಿಯನ್ನು ನೀಡಬೇಕು” ಎಂದು ಒತ್ತಾಯಿಸಿದರು.

“ಕಾಯಕ ಬಂಧುಗಳು ಅಥವಾ ಕೂಲಿಕಾರರು ಫಾರಂ ನಂಬರ್ 6ರ ಅರ್ಜಿ ಕೊಡಲು ಬಂದಾಗ ಪಿಡಿಒ ಪಂಚಾಯತಿ ಕೇಂದ್ರದಲ್ಲಿದ್ದು, ಅರ್ಜಿ ಸ್ವೀಕರಿಸಿದ ಪ್ರತಿಯನ್ನು ಸಹಿ ಮೊಹರಿನೊಂದಿಗೆ ಕೊಡಬೇಕು. ಕಾಯಕ ಬಂಧುಗಳಿಗೆ ಗುರಿತಿನ ಚೀಟಿ ಮತ್ತು ಪ್ರೋತ್ಸಾಹ ಧನ ನೀಡಬೇಕು. ಕಾಯಕ ಬಂಧುಗಳು ಮತ್ತು ಕೂಲಿಕಾರರನ್ನು ಪಂಚಾಯತಿಯಲ್ಲಿ ದಾಖಲು ಮಾಡಿ ಕಂಪ್ಯೂಟರ್ ತಂತ್ರಾಂಶದಲ್ಲಿ ಕಾಯಕ ಬಂಧುಗಳ ಹೆಸರುಗಳನ್ನು ನಮೂದಿಸಬೇಕು. ಕ್ರಿಯಾಯೋಜನೆ ಮಾನವ ದಿನಗಳ ಅಂದಾಜು ವೆಚ್ಚದ ಪ್ರತಿಯನ್ನು ಕೊಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನರೇಗಾ ಕೂಲಿ ಕಾರ್ಮಿಕರಿಗೆ ಕಡಿಮೆ ಕೂಲಿ ಹಾಕುವುದನ್ನು ಕೂಡಲೇನಿಲ್ಲಿಸಿ ಮತ್ತು ಕೇಂದ್ರ ಸರ್ಕಾರ ನಿಗದಿಗೊಳಿಸಿದ ಕೂಲಿ ಹಣ ನೀಡಬೇಕು. ಕೂಲಿಕಾರರ ಸ್ಥಳದಲ್ಲಿ ಕುಡಿಯುವ ನೀರು, ವಿಶ್ರಾಂತಿಗೆ ವ್ಯವಸ್ಥೆ ಮಾಡಬೇಕು. 60 ವರ್ಷ ಮೇಲ್ಪಟ್ಟವರಿಗೆ ಮತ್ತು ವಿಕಲಚೇತನರಿಗೆ ಕೆಲಸದ ಪ್ರಮಾಣವನ್ನು ನಿಗದಿಗೊಳಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ವ್ಯವಸ್ಥೆಗೆ ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ

“ಕಾಯಕ ಬಂಧುಗಳಿಗೆ ಮತ್ತು ಕೂಲಿಕಾರರಿಗೆ ತರಬೇತಿ ಶಿಬಿರ ಏರ್ಪಡಿಸಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೆಲಸದಲ್ಲಿ ಬಳಸುವ ಹಾರೆ, ಗುದ್ದಲಿ, ಸಲಗೆ, ಪಿಕಾಸಿ, ಬುಟ್ಟಿ ಇತರೆ ಸಲಕರಣೆಗಳನ್ನು ಪಂಚಾಯತಿಯಿಂದಲೇ ಒದಗಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ಸಂಗಮೇಶ ಮೂಲಿಮನಿ, ಬಿ ಲಿಂಗಪ್ಪ, ಲಿಂಗಣ್ಣ ಮೊಕಾಶಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...