ರಾಯಚೂರು | ಯಲಗಟ್ಟಾ ಪ್ರೌಢಶಾಲೆ ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಧರಣಿ; ಶಾಮಿಯಾನ, ಅಂಬೇಡ್ಕರ್‌ ಫೋಟೋ ಕಿತ್ತೆಸೆದ ಪೊಲೀಸರು

Date:

ಪ್ರತಿಭಟನಾ ಸ್ಥಳದಲ್ಲಿ ಧರಣಿಯ ಶಾಮಿಯಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಫೋಟೋವನ್ನು ಪೊಲೀಸರು ಕಿತ್ತೆಸೆದು ಅವಮಾನ ಮಾಡಿದ್ದಾರೆಂದು ಆರೋಪಿಸಿ ರಾಯಚೂರು ಜಿಲ್ಲೆಯ ಎಸ್‌ಎಫ್‌ಐ ಸಂಘಟನೆ, ಎಸ್‌ಡಿಎಂಸಿ, ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಯಲಗಟ್ಟ ಗ್ರಾಮದ ಸರ್ಕಾರಿ ಫ್ರೌಢಶಾಲೆಯ ಮುಖ್ಯೋಪಾಧ್ಯಾಯ‌ ನಾಗನಗೌಡ ಅವರು ನಿರಂತರವಾಗಿ ಅನಧಿಕೃತ ಗೈರು ಹಾಜರಾಗಿರುವ ಕುರಿತು ಕಠಿಣ ಕ್ರಮ ವಿಧಿಸಿ ಅಮಾನತು ಮಾಡಬೇಕೆಂದು ನಡೆಯುತ್ತಿರುವ 07 ನೇ ದಿನದಂದು ನಡೆದ ಪೊಲೀಸರ ದೌರ್ಜನ್ಯದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರು ಹಾಗೂ ವಿಧ್ಯಾರ್ಥಿಗಳ ನೇತೃತ್ವದಲ್ಲಿ ತರಗತಿ ಬಹಿಷ್ಕರಿಸಿ ಧರಣಿ ನಡೆಸುತ್ತಿದ್ದು, “ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಧ್ಯಾಯ ನಾಗನಗೌಡ ಅವರು 4 ವರ್ಷಗಳಿಂದ ಶಾಲೆಗೆ ನಿರಂತರವಾಗಿ ಅನಧಿಕೃತ ಗೈರಾಗುತ್ತಿದ್ದು, ಅಧಿಕಾರಗಳು ಕ್ರಮ ಜರುಗಿಸದೆ ಹಿಂದೇಟು ಹಾಕುತ್ತಿರುವುದು ಖಂಡನೀಯ” ಎಂದು ಗ್ರಾಮದಲ್ಲಿ ಬೈಕ್ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಮಾತನಾಡಿ, “ಕಳೆದ 2 ದಿನಗಳಿಂದ ಪೊಲೀಸರು ಧರಣಿ ಹತ್ತಿಕ್ಕಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಸಂಘಟಕರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ. ತಾಲೂಕಿನಲ್ಲಿ ಸಾಕಷ್ಟು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇದರಲ್ಲಿ ಇಲಾಖೆ ಸಂಪೂರ್ಣ ಕೈ ಜೋಡಿಸಿ ಹಫ್ತಾ ವಸೂಲಿಗೆ ಶಾಮೀಲಾಗಿದ್ದಾರೆ. ಇದರ ಪರಿಣಾಮ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಚಕಾರ ಎತ್ತದ ಪೊಲೀಸರು ಜನರ ಬದುಕಿನ ಪ್ರಶ್ನೆ, ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಹೋರಾಟಗಾರರ ಮೇಲೆ ಗೂಂಡಾಪ್ರವೃತ್ತಿ ಮೆರೆಯುತ್ತಿದ್ದಾರೆ” ಎಂದು ಆರೋಪಿಸಿದರು.

“ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ನಾಗನಗೌಡನ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ” ಎಂದು ಪ್ರಶ್ನಿಸಿದ ಅವರು, “ನಾಳೆ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿ ತರಗತಿಗೆ ಬಹಿಷ್ಕಾರ ಹಾಕಿ ಪಂಚಾಯತ್ ಎದುರು ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪರಿಸರ ಸಂರಕ್ಷಣೆ ಕುರಿತು ಪ್ರಜ್ಞಾವಂತ ಯುವಜನರು ಧ್ವನಿ ಎತ್ತಬೇಕಿದೆ: ನ್ಯಾ. ದಿನೇಶ್‌ ಬಿ ಜಿ

ಯಲಗಟ್ಟ ಗ್ರಾಪಂ ಸದಸ್ಯ ಸಿದ್ದಪ್ಪ ಗಾಣದಾಳ, ಎಸ್‌ಡಿಎಂಸಿ ಅಧ್ಯಕ್ಷ ನಿಂಗಪ್ಪ ಸಾಹುಕಾರ್, ಸದಸ್ಯ ನಾಗಪ್ಪ ಕಮಲದಿನ್ನಿ, ತಾಲೂಕು ಕಾರ್ಯದರ್ಶಿ ಪವನ್ ಕಮದಾಳ, ತಾಲೂಕು ಮುಖಂಡರಾದ ವಿನಯ್ ಕುಮಾರ್, ಪಿಆರ್‌ಎಸ್ ತಾಲೂಕು ಮುಖಂಡ ನಿಂಗಪ್ಪ ಎಂ, ಗ್ರಾಮದ ಹಿರಿಯರಾದ ಲಕ್ಷ್ಮಣ್, ಗುಂಡಪ್ಪ ದಿನ್ನಿ, ಸಿದ್ದಪ್ಪ ವಡಿಗೀರಿ, ಶೇಖರಪ್ಪ ಗಂಗಾವತಿ, ವಿವಿಧ ಸಂಘಟನೆಗಳ ಶಿವಶಂಕರ, ವಡಿಕೆಪ್ಪ, ಯಲ್ಲಪ್ಪ ಪ್ಯಟಿಗೌಡ, ರಾಜು ನಾಯಕ, ಶಿವು ಪಿ ಜಿ, ಕೆಆರ್‌ಎಸ್ ಮುಖಂಡರಾದ ಸದ್ದಾಂ ಹುಸೇನ್, ಹಂಪಯ್ಯ ಮಹ್ಮದ್ ರಫಿ, ನಾಗನಗೌಡ, ಸಿದ್ರಾಮಯ್ಯ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...