ರಾಯಚೂರು | ತನ್ನ ವಿವಾಹ ಸಮಾರಂಭದಲ್ಲಿ ಸಂವಿಧಾನ ಪೀಠಿಕೆ ಹಂಚಿದ ಮುಸ್ಲಿಂ ಯುವಕ

Date:

ಮುಸ್ಲಿಂ ಯುವಕನೊಬ್ಬ ತನ್ನ ವಿವಾಹ ಸಮಾರಂಭಕ್ಕೆ ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ ಸಂಗತಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರಿನ ಇಬ್ರಾಹಿಂ ವಲಿ ಎಂಬ ಯುವಕ ನಗರದ ಸಂಗಮ್ ಪ್ಯಾಲೇಸ್ ಫಂಕ್ಷನ್ ಹಾಲ್‌ನಲ್ಲಿ ನಡೆದ ವಿವಾಹ ರೆಸೆಪ್ಶನ್( ವಲೀಮಾ)ದಲ್ಲಿ ವಧು ವರರಿಗೆ ಆಶೀರ್ವದಿಸಲು ಮದುವೆಗೆ ಬಂದ ಗೆಳೆಯರಿಗೆ ಹಾಗೂ ಸಂಬಂಧಿಕರಿಗೆ ಸಂವಿಧಾನ ಪೀಠಿಕೆ ವಿತರಿಸಿ ವಿನೂತನವಾಗಿ ವಿವಾಹವನ್ನು ಸಂಭ್ರಮಿಸಿದ್ದಾರೆ.

ಇಂದಿನ ಆಧುನಿಕ ಯುಗದಲ್ಲಿ ವಿವಾಹವೂ ಅದ್ಧೂರಿತಕ್ಕೆ ಹಾಗೂ ದುಂದುವೆಚ್ಚಕ್ಕೆ ಆಸ್ಪದ ನೀಡುವ ಮಧ್ಯೆ ಮುಸ್ಲಿಂ ಯುವಕನೊಬ್ಬ ಸರಳವಾಗಿ ವಿವಾಹ ನೆರವೇರಿಸಿಕೊಂಡು ಸಂವಿಧಾನದ ಪೀಠಿಕೆ ಹಂಚಿ ಗಮನ ಸೆಳೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241213 WA0021 1

ವರ ಇಬ್ರಾಹಿಂ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದು, ಸಂವಿಧಾನದ ಪೀಠಿಕೆ ಬಗ್ಗೆ ಗೊತ್ತಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರು ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣ ವಚನ ಸ್ವೀಕರಿಸಿದರು. ಇದನ್ನು ಟಿವಿ ಚಾನೆಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸುತ್ತಿದ್ದ. ಈತ ತಮ್ಮ ಸುತ್ತಮುತ್ತಲಿನ ಪ್ರಗತಿಪರರಿಗೆ ಹಾಗೂ ಹೋರಾಟಗಾರರಿಗೆ ಕೇಳುತ್ತಿದ್ದ ಹಾಗೂ ಯಾಕೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ತಿಳಿದುಕೊಂಡು ಸಂವಿಧಾನದ ಪ್ರಸ್ತಾವನೆಯಲ್ಲಿನ ವಿಷಯ ಇಷ್ಟವಾಗಿ ತನ್ನ ಗೆಳೆಯರೊಂದಿಗೆ ಚರ್ಚಿಸಿದ್ದಾನೆ.

ಅನೇಕರು ಈತನ ನಿರ್ಧಾರಕ್ಕೆ ಬೆಂಬಲ ನೀಡಿದ್ದರಿಂದ ಆಯ್ದ 120 ಜನರಿಗೆ ಪ್ರಸ್ತಾವನೆ ಹಂಚಿದ್ದಾನೆ. ಇಬ್ರಾಂಹಿನ ಈ ನಿರ್ಧಾರದಿಂದ ಸಂತಸರಾದ ಕೆಲ ಗೆಳೆಯರು ಈತನಿಗೆ ದೊಡ್ಡದಾದ ಸಂವಿಧಾನದ ಪ್ರಸ್ತಾವನೆಗೆ ಫೋಟೋ ಫ್ರೇಮ್ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ₹10 ಸಾವಿರಕ್ಕೆ ಕೈಚಾಚಿದ ಕಡಬ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ

ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೋರಾಟಗಾರ ಅಝೀಝ್ ಜಾಗೀರದಾರ್, ರವಿಚಂದ್ರ, ಪ್ರಾಣೇಶ ಹಾಗೂ ಪೊಲೀಸ್ ಅಧಿಕಾರಿ ಗೋಳಾಳಪ್ಪ,ನಿವೃತ್ತ ಪೊಲೀಸರು ಹಾಗೂ ಲಾರಿ, ಟ್ಯಾಕ್ಸಿ ಚಾಲಕರು ಶುಭ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...