ರಾಯಚೂರು | ಗುತ್ತಿಗೆ ಸಂಸ್ಥೆಯ ತಾರತಮ್ಯ ಖಂಡಿಸಿ ವೈಟಿಪಿಎಸ್‌ ನೌಕರರ ಪ್ರತಿಭಟನೆ

Date:

ಗುತ್ತಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಹೊರ ವಲಯದ ಯರಮರಸ್ ಮುಖ್ಯ ಕೇಂದ್ರ ಬಳಿ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ನೌಕರರು ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರು.

“ಪರ್ವ ಮೇಕ್ ಕಂಪನಿಯಿಂದ ಹೊರ ರಾಜ್ಯದ ಕಿರಿಯ ಕಾರ್ಮಿಕರಿಗೆ ಹೆಚ್ಚಿನ ವೇತನ ನೀಡಲಾಗುತ್ತಿದೆ. ಸ್ಥಳೀಯ ಹಿರಿಯ ಕಾರ್ಮಿಕರಿಗೆ ಕಡಿಮೆ ವೇತನ ನೀಡುತ್ತಿದ್ದು, ಅದು ಕೂಡ ಸರಿಯಾಗಿ ನೀಡುತ್ತಿಲ್ಲ. ವಾರ್ಷಿಕ ಭತ್ಯೆ, ಇನ್ಕ್ರಿಮೆಂಟ್ ಸೇರಿ ಯಾವುದೇ ಸೌಲಭ್ಯ ನೀಡುತ್ತಿಲ್ಲ” ಎಂದು ಪರ್ವ ಮೇಕ್ ಕಂಪನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವೈಟಿಪಿಎಸ್ ಕೇಂದ್ರದ ಒಳಗೆ ಕೆಲಸ ಮಾಡುವ ಕಾರ್ಮಿಕರಿಗೆ ಸೌಲಭ್ಯಗಳ ಕೊರತೆ, ಕೆಲಸ ಮಾಡುವ ಕಾರ್ಮಿಕರಿಗೆ ಊಟದ ಸಮಯದಲ್ಲಿ ಕುಳಿತು ಊಟ ಮಾಡಲು ಸರಿಯಾದ ಸ್ಥಳಾವಕಾಶ ಇಲ್ಲ, ಊಟ ಮಾಡುವ ಸ್ಥಳ ಧೂಳುಯವಾಗಿದ್ದು ಕಾರ್ಮಿಕರು ಅದೇ ಧೂಳಿನಲ್ಲಿ ಊಟ ಮಾಡುವ ಪರಿಸ್ಥಿತಿ ಇದೆ ಎಂದು ಕಾರ್ಮಿಕರು ಕಿಡಿಕಾರಿದರು.

ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ಆದಷ್ಟು ಬೇಗ ಕಾರ್ಮಿಕರ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...