ರಾಯಚೂರು | ಮನರೇಗಾ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ತರಾಟೆ

Date:

ಮನರೇಗಾ ಯೋಜನೆಯಡಿಯಲ್ಲಿ ಹಲವು ಕಾಮಗಾರಿಗಳ ಅಂದಾಜು ತಯಾರಿಕೆ, ಗೋಮಾಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಮನರೇಗಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಅವರು ತರಾಟೆಗೆ ತೆಗೆದುಕೊಂಡರು.‌

ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮನರೇಗಾ ಯೋಜನೆ ಕುರಿತು ಹಮ್ಮಿಕೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ತರಾಟೆಗೈದರು. ಮನರೇಗಾ ಯೋಜನೆಯಡಿಯಲ್ಲಿ ಬರುವ ಗೋಮಾಳ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಒಟ್ಟು 179 ಗ್ರಾಮ ಪಂಚಾಯಿತಿಗಳಲ್ಲಿ 114 ಗೋಮಾಳಗಳ ಗುರಿ ನೀಡಲಾಗಿದೆ. ಅವುಗಳಲ್ಲಿ ಕೇವಲ 30 ಗೋಮಾಳಗಳ ಅಭಿವೃದ್ಧಿಗೆ ಅಂದಾಜು ಸಿದ್ದಪಡಿಸಿದ್ದು, ಅದರಲ್ಲಿ 23 ಕಾಮಗಾರಿಗಳು ಮಾತ್ರ ಪ್ರಗತಿ ಹಂತದಲ್ಲಿವೆ. ಇನ್ನುಳಿದ ಗೋಮಾಳಗಳ ಸ್ಥಳ ಪರಿಶೀಲಿಸಿ ಹುಡುಕಾಟ ನಡೆಸುತ್ತಿದ್ದು, ಗೋಮಾಳ ಇರುವ ಕುರಿತು ಮಾಹಿತಿ ಇಲ್ಲದೇ ಇರುವುದರಿಂದ ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡರು.

ಸ್ಥಳಕ್ಕೆ ತೆರಳಿ ಕೆಲಸ ಮಾಡದೇ ಕೇಲವ ಕಾಟಾಚಾರಕ್ಕೆ ಮಾಹಿತಿ ನೀಡುತ್ತಿದ್ದ ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೋಮಾಳ ಅಭಿವೃದ್ಧಿಗೆ ಸುತ್ತಲೂ ಸರಹದ್ದು ಮಾಡಿ, ಒಂದೆಡೆ ಕುಡಿಯುವ ನೀರಿನ ಘಟಕ ನಿರ್ಮಿಸಿ ಮತ್ತೊಂದೆಡೆ ಮೇವು ಬೆಳೆಯಲು ಸಮತಟ್ಟು ಮಾಡಿ ಮಾಹಿತಿ ನೀಡಲು ಆಗುತ್ತಿಲ್ಲವೆ?” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಮನಗರೇಗಾದಡಿ ಬಯೋಗ್ಯಾಸ್ ನಿರ್ಮಾಣಕ್ಕೆ ಜಿಲ್ಲೆಯಲ್ಲಿ 179 ಗ್ರಾಮ ಪಂಚಾಯತಿಗಳಲ್ಲಿ 358ಕ್ಕೆ ಗುರಿ ನೀಡಲಾಗಿದೆ, 301 ಬಯೋಗ್ಯಾಸ್ ಅಂದಾಜು ಸಿದ್ದಪಡಸಿದ್ದು, ಕೇವಲ 9ರ ಕಾಮಗಾರಿ ಮಾತ್ರ ಪ್ರಗತಿ ಹಂತದಲ್ಲಿದೆ. ಉಳಿದ ಕಾಮಗಾರಿ ಆರಂಭಿಸದೇ ಕುಂಟುನೆಪ ಹೇಳಿತ್ತಿದ್ದು, ಕೆಲಸ ಮಾಡಲು ಆಗದಿದ್ದರೆ ಮನೆಗೆ ತೆರಳಿ” ಎಂದರು.

“ಹಸಿರು ಸರೋವರ್ ಯೋಜನೆಯಡಿ ಜಿಲ್ಲೆಯಲ್ಲಿ 7ಕ್ಕೆ ಗುರಿ ನೀಡಿದೆ. 3 ಕಡೆ ಸ್ಥಳ ಗುರುತಿಸಿದ್ದು, ಮೂರೂ ಕಾಮಗಾರಿಗೆ ಅಂದಾಜು ಮಾಡಿದೆ. ಆದರೆ ಈವರೆಗೆ ಕೆಲಸ ಆರಂಭ ಮಾಡಿಲ್ಲ. ಹಸಿರು ಸರೋವರದ ಬಗ್ಗೆ ಏನು ಮಾಡಬೇಕೆಂಬ ಕಾನ್ಸೆಪ್ಟ್ ಗೊತ್ತಿಲ್ಲದಿದ್ದರೆ, ಕೆರೆಯ ಸುತ್ತಲೂ ಗಿಡಗಳನ್ನು ಬೆಳಸಿ ಮಣ್ಣು ಸವಕಳಿ ಆಗದಂತೆ ಕಾಪಾಡಿಕೊಂಡು ಹೋಗುವುದರ ಜೊತೆಗೆ ಸುತ್ತಮುತ್ತಲಿನ ಪ್ರದೇಶ ಹಸಿರಿನಿಂದ ಇರುವಂತೆ ಮಾಡುವುದು ಹಸಿರು ಸರೋವರದ ಉದ್ದೇಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಕಂಡು ಬಂದಲ್ಲಿ ಅಧಿಕಾರಿಗಳ ಅಮಾನತು; ಡಿಸಿ ಎಚ್ಚರಿಕೆ

“ಹಸಿರು ಸರೋವರ್ ಯೋಜನೆ ಕೆರೆ ಗುರುತಿಸಿಲ್ಲ, ಅಂದಾಜು ಮಾಡಿದೆ. ಕಾಮಗಾರಿ ಆರಂಭ ಮಾಡಬೇಕು ಎಂದು ಹೇಳುತ್ತಿದ್ದು ಕೆಲಸ ಯಾವಾಗ ಮಾಡಿ ಮುಗಿಸಬೇಕು, ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಹಸಿರು ಸರೋವರದ ಬಗ್ಗೆ ಎಲ್ಲಿ ತೋರಿಸಬೇಕು” ತರಾಟೆಗೆ ತೆಗೆದುಕೊಂಡರು.

ಮನರೇಗಾ ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...